Homeಮುಖಪುಟದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! - ಟೂಲ್‌ಕಿಟ್ ಕೊಟ್ಟವರಾರು?

ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

- Advertisement -
- Advertisement -

ಹೌದು, ನಮ್ಮ ದೇಶದ ಸರ್ಕಾರಿ ಟೂಲ್‌ಕಿಟ್ ಒಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತರುತ್ತಿದೆ. ಅಷ್ಟೇ ಅಲ್ಲ ಅದು ಅಪಹಾಸ್ಯಕ್ಕೂ ಈಡಾಗುತ್ತಿದೆ. ಈ ಟೂಲ್‌ಕಿಟ್‌ನಲ್ಲಿ ಇರುವ ಮಾರ್ಗಸೂಚಿಗಳು: ಐಪಿಸಿ-ಸಿಆರ್‌ಪಿಸಿ ಸೆಕ್ಷನ್ಸ್ 124(A), 153(A) 120(B) ಮತ್ತು UAPA ಇತ್ಯಾದಿ. ಕೆಲವೊಮ್ಮೆ ಸಾಧಾರಣ ಕೋಡ್‌ಗಳೂ ಬಳಕೆಯಾಗುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ಈ ಟೂಲ್‌ಕಿಟ್ ಪ್ರಕಾರ ಕೆಲಸ ಮಾಡುತ್ತಿದ್ದಾರಾದರೂ ಉತ್ತರಪ್ರದೇಶ ಪೊಲೀಸರು ತುಸು ಹೆಚ್ಚು ಆಕ್ಟಿವ್ ಆಗಿದ್ದಾರೆ. ಆದರೆ ಈ ಟೂಲ್‌ಕಿಟ್ ಅನ್ನು ಭಯಂಕರವಾಗಿ ಜಾರಿಗೆ ತರುವ ಮೂಲಕ ಜಾಗತಿಕ ಅಪಖ್ಯಾತಿ ಮತ್ತು ಅಪಹಾಸ್ಯಕ್ಕೆ ಈಡಾಗುತ್ತಿರುವುದು ದೆಹಲಿ ಪೊಲೀಸ್.

ಜೆಎನ್‌ಯುನ ಪ್ರಜ್ಞಾವಂತ, ಸಮಾಜಮುಖಿ ವಿದ್ಯಾರ್ಥಿಗಳ ಬಾಯಿ ಮುಚ್ಚಿಸಲು ಈ ಟೂಲ್‌ಕಿಟ್ ಬಳಸಲಾಯಿತು. ಭೀಮಾ-ಕೋರೆಗಾಂವ್ ಪ್ರಕರಣದ ನೆಪದಲ್ಲಿ ಈ ದೇಶದ ದುರ್ಬಲ ಸಮುದಾಯಗಳ ಸಾಕ್ಷಿ ಪ್ರಜ್ಞೆಯಂತಿರುವ ಲೇಖಕರು, ಸಾಮಾಜಿಕ ಹೋರಾಟಗಾರರು ಮತ್ತು ವಕೀಲರು ಸಾರ್ವಜನಿಕ ಜಾಗೃತಿ ಮೂಡಿಸದಂತೆ ಮಾಡಲು ಇದೇ ಟೂಲ್‌ಕಿಟ್ ಅನ್ವಯ ಮಾಡಿ ಅವರನ್ನೆಲ್ಲ ಬಂಧನದಲ್ಲಿ ಇಡಲಾಗಿತು.
ಕಳೆದ ವರ್ಷ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ ಎನ್‌ಆರ್‌ಸಿ-ಸಿಎಎ-ಎನ್‌ಪಿಆರ್ ಹೋರಾಟಕ್ಕೆ ಕಳಂಕ ತರಲೂ ಇದೇ ಟೂಲ್‌ಕಿಟ್ ಬಳಕೆಯಾಗಿತು. ಈಶಾನ್ಯ ದೆಹಲಿಯಲ್ಲಿ ಪೊಲೀಸರೇ ಮುಂದೆ ನಿಂತು, ಕೆಲವೊಮ್ಮೆ ತಾವೇ ಭಾಗಿದಾರರಾಗಿದ್ದ ಪ್ರಾಯೋಜಿತ ಗಲಭೆ-ಹಿಂಸಾಚಾರ ಪ್ರಕರಣದಲ್ಲಿ ಸಿಎಎ ವಿರೋಧಿ ಹೋರಾಟಗಾರರನ್ನು ಈ ಟೂಲ್‌ಕಿಟ್‌ನ ಅಸ್ತ್ರಗಳ ಜೊತೆ ದಂಗೆ, ಕೊಲೆ ಇತ್ಯಾದಿ ಕೇಸುಗಳನ್ನು ಹಾಕಿ ಬಂಧಿಸಲಾಗಿತು.

ಇದನ್ನೂ ಓದಿ: ಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

ಈಗ ರೈತ ಹೋರಾಟವನ್ನು ಬಗ್ಗು ಬಡಿಯಲು ಕೂಡ ದೆಹಲಿ ಪೊಲೀಸರು ಈ ಟೂಲ್‌ಕಿಟ್ ಮೊರೆ ಹೋಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆ ಪ್ರದೇಶದಲ್ಲಿ ಕೆಲವು ಪುಂಡರಿಂದಾದ ಗಲಭೆಯನ್ನು ರೈತ ಹೋರಾಟಗಾರರ ತಲೆಗೆ ಕಟ್ಟಲು ಅವರ ಹೆಸರುಗಳನ್ನು ಎಫ್‌ಐಆರ್‌ಗಳಲ್ಲಿ ಸೇರಿಸಲಾಗಿದೆ, ಯೋಗೇಂದ್ರ ಯಾದವ್ ಸೇರಿ ಹಲವರಿಗೆ ನೋಟಿಸ್ ನೀಡಲಾಗಿದೆ.

ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬಲಪ್ರದರ್ಶನದಿಂದ ಹತ್ತಿಕ್ಕಲು ಹೋಗಿ ಉತ್ತರಪ್ರದೇಶ ಪೊಲೀಸರು ಕೈ ಸುಟ್ಟುಕೊಂಡ ನಂತರ, ದೆಹಲಿ ಪೊಲೀಸರು ಎಚ್ಚರಗೊಂಡಿದ್ದಾರೆ. ಅವರೀಗ ರೈತ ಹೋರಾಟಕ್ಕೆ ಬಾಹ್ಯವಾಗಿ ಬೆಂಬಲ ನೀಡುತ್ತಿರುವ ಯುವಜನರ ಬೇಟೆ ಆರಂಭಿಸಿದ್ದಾರೆ.

ಇದರ ಪರಿಣಾಮವಾಗಿ ದಿಶಾ ರವಿ, ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಇಲ್ಲೂ ದೆಹಲಿ ಪೊಲೀಸರ ಟೂಲ್‌ಕಿಟ್ ಪ್ರಯೋಗವಾಗಿದೆ. ಕುತೂಹಲದ ವಿಷಯ ಎಂದರೆ, ಪ್ರತಿಭಟನೆಯ ಸ್ವರೂಪ ಹೇಗಿರಬೇಕು ಎಂಬ ಮಾರ್ಗಸೂಚಿಗಳನ್ನು ಒಳಗೊಂಡ ಟೂಲ್‌ಕಿಟ್ ಈಗ ದೆಹಲಿ ಪೊಲೀಸರ ಟಾರ್ಗೆಟ್ ಆಗಿದೆ!

ಇದನ್ನೂ ಓದಿ:  ಮೌನ ಮುರಿಯುವ ಹೊತ್ತಿದು; ಮಂದಿರದ ಹೆಸರಿನಲ್ಲಿ ಮನುಷ್ಯ ಸಂಬಂಧಗಳನ್ನು ಹದಗೆಡಿಸಲು ಬಿಡದಿರೋಣ

ಅಂದರೆ ತಮ್ಮ ಪ್ರಭು ಮತ್ತು ದಂಡನಾಯಕ ಎಡಿಟ್ ಮಾಡಿರುವ ಟೂಲ್‌ಕಿಟ್ ಈ ದೆಹಲಿ ಪೊಲೀಸರ ಅಸ್ತ್ರ. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124(A), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಕ್ಕೆ 153 (A) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (B) ಮತ್ತು UAPA ಅಡಿಯಲ್ಲಿ ಯಾವಾಗ ಬೇಕಾದರೂ, ಸರ್ಕಾರವನ್ನು ಪ್ರಶ್ನಿಸಿದವರ ಮೇಲೆ ಪ್ರಕರಣ ದಾಖಲಿಸಲು ದೆಹಲಿ ಪೊಲೀಸರು ಸ್ವತಂತ್ರರು!

ದೆಹಲಿ ಪೊಲೀಸರ ದ್ವಿಪಾತ್ರ ಅಭಿನಯ, ಮೂಕಪ್ರೇಕ್ಷಕರು ಮತ್ತು ಹೈಪರ್-ಆಕ್ಟಿವ್

ಹಾಗಂತ ಎಲ್ಲ ಸಂದರ್ಭಗಳಲ್ಲೂ ದೆಹಲಿ ಪೊಲೀಸರು ತಮ್ಮ ಸರ್ಕಾರಿ ಟೂಲ್‌ಕಿಟ್ ಬಳಸುತ್ತಾರೆ ಎಂದುಕೊಳ್ಳಬೇಡಿ. ಅವರು ಒಮ್ಮೊಮ್ಮೆ ಮೂಕಪ್ರೇಕ್ಷಕರಾಗಿ ’ಅಹಿಂಸಾವಾದ’ ಮೆರೆದಿದ್ದೂ ಇದೆ. ಪ್ರಭುಗಳ ಚೇಲಾಗಳು ನಡೆಸುವ ಹಿಂಸಾಚಾರದ ಸಂದರ್ಭಗಳಲ್ಲಿ ಇಂತಹ ನಿಲುವು ತಳೆಯುತ್ತಾರೆ. ಕೆಲವೊಮ್ಮೆ ಪ್ರಭುಗಳ ಅಣತಿಯಂತೆ, ತಾವೇ ಹಿಂಸಾಚಾರದಲ್ಲಿ ಭಾಗಿಯಾಗುತ್ತಾರೆ. ಹೀಗಾಗಿ ಒಮ್ಮೆ ಮೂಕಪ್ರೇಕ್ಷಕರಾಗಿಯೂ, ಇನ್ನೊಮ್ಮೆ ಹೈಪರ್ ಆಕ್ಟಿವ್ ಆಗಿಯೂ ದ್ವಿಪಾತ್ರ ಅಭಿನಯ ಮಾಡುವ ’ಸಮರ’ ಕಲೆ ಅವರಿಗೆ ಸಿದ್ಧಿಯಾಗಿದೆ.

  • ಜೆಎನ್‌ಯುಗೆ ನುಗ್ಗಿದ ಗೂಂಡಾಗಳ ಪಡೆಯೊಂದು ರಾಡು, ಲಾಠಿಗಳಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಥಳಿಸುವಾಗ ದೆಹಲಿ ಪೊಲೀಸರು ಮೂಕಪ್ರೇಕ್ಷಕರು. ಈಗಲೂ ಆ ಕೇಸಿನಲ್ಲಿ ಒಬ್ಬರ ಬಂಧನವೂ ಆಗಿಲ್ಲ!
  • ಸಿಎಎ-ಎನ್‌ಆರ್‌ಸಿ ವಿರೋಧಿಸಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಡೆಸುತ್ತಿದ್ದ ಪಾದಯಾತ್ರೆ… ಏಕಾಏಕಿ ಒಬ್ಬ ಪುಂಡ ನೇರಾನೇರ ನಿಂತು ಪಿಸ್ತೂಲ್ ತೆಗೆದು ಪ್ರತಿಭಟನಾಕಾರರತ್ತ ಶೂಟ್ ಮಾಡತೊಡಗಿದ. ಆತನ ಹಿಂದುಗಡೆ ನಿಂತಿದ್ದ ಹಿಂಡು ಪೊಲೀಸರು ಏನೂ ನಡೆದೇ ಇಲ್ಲ ಎಂಬ ಭಾವದಲ್ಲಿದ್ದರು, ಮೂಕಪ್ರೇಕ್ಷಕರು!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

  • ಈಶಾನ್ಯ ದೆಹಲಿಯಲ್ಲಿ ಹುಟ್ಟು ಹಾಕಲಾದ ಗಲಭೆ ನಿಯಂತ್ರಣಕ್ಕೆ ತರಬೇಕಿದ್ದ ಪೊಲೀಸರು, ಮುಸ್ಲಿಮರ ಮನೆಗೆ ಪುಂಡಪೋಕರಿಗಳು, ದುಷ್ಕರ್ಮಿಗಳು ಬೆಂಕಿ ಹಚ್ಚುವಾಗ ಸುಮ್ಮನೆ ನಿಂತಿದ್ದರು. ಮತ್ತೆ ಮೂಕಪ್ರೇಕ್ಷಕರ ಪಾತ್ರ!
  • ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಸಿಎಎ ವಿರೋಧಿ ಹೋರಾಟಗಾರರು, ಅಲ್ಪಸಂಖ್ಯಾತ ಸಂತಸ್ತ್ರರ ಮೇಲೆಯೇ ಎಫ್‌ಐಆರ್ ದಾಖಲಿಸಿದರು. ಹೈಪರ್-ಆಕ್ಟಿವ್ ರೋಲ್!
  • ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸುವವರೆಗೂ ಮೂಕಪ್ರೇಕ್ಷಕರು.
  • ನಂತರ ಫುಲ್‌ಚಾರ್ಜ್ ಆದ ಪೊಲೀಸರು ರೈತ ಮುಖಂಡರ ಮೇಲೆಯೇ ಎಫ್‌ಐಆರ್ ದಾಖಲಿಸಿದರು. ನೂರಾರು ರೈತ ಪ್ರತಿಭಟನಾಕರರನ್ನು ಜೈಲಿಗೆ ತಳ್ಳಿದರು.
  • ಸಿಂಘು ಗಡಿಯ ಒಂದು ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ನೇತೃತ್ವದ ದುಷ್ಕರ್ಮಿಗಳ ಗುಂಪೊಂದು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ತೂರಾಟ ನಡೆಸುವಾಗ ಪಕ್ಕದಲ್ಲೇ ನಿಂತಿದ್ದ ಪೊಲೀಸರು ಗಪ್‌ಚುಪ್. ಎರಡು ದಿನದ ನಂತರ, ಈ ಕಲ್ಲು ತೂರಾಟ ನಡೆಸಿದವರಿಗೂ, ಬಿಜೆಪಿಗೂ ಲಿಂಕ್ ಇದೆ ಎಂದು ವರದಿ ಮಾಡಿದ್ದ ಪತ್ರಕರ್ತನನ್ನು ಎಳೆದುಕೊಂಡು ಹಲ್ಲೆ ನಡೆಸಿ ಬಂಧಿಸಿದರು.

****

ಪಟ್ಟಿ ಮಾಡುತ್ತ ಹೋದರೆ, ಬಿಡಿ ಬಿಡಿ ಘಟನೆ ಬರೆಯುತ್ತ ಹೋದರೆ ಅದೇ ಒಂದು ದೊಡ್ಡ ಕತೆಯಾದೀತು. ಮೇಲಿನ ಎಲ್ಲ ಘಟನೆಗಳಲ್ಲೂ ದೆಹಲಿ ಪೊಲೀಸರು ಒಂದೋ ಮೂಕಪ್ರೇಕ್ಷಕರು ಇಲ್ಲವೇ ಹೈಪರ್-ಆಕ್ಟಿವ್ (ವಿಪರೀತ ಕಾರ್ಯಶೀಲರು). ಈ 6-7 ವರ್ಷಗಳಲ್ಲಿ ಅವರೆಂದೂ ಸಮಚಿತ್ತದ ಪೊಲೀಸರಾಗಿ ಕೆಲಸ ನಿರ್ವಹಿಸಿದ್ದೇ ಅಪರೂಪ.

ಹೀಗೆ ಒಂದಕ್ಕೊಂದು ತದ್ವಿರುದ್ಧವಾದ ದ್ವಿಪಾತ್ರ ಅಭಿನಯವನ್ನು ಸಲೀಸಾಗಿ ಮಾಡುತ್ತ ಹೊರಟಿರುವ ಅವರು, ಈಗ ತಮ್ಮ ಮೂರ್ಖ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿಯೂ ಅಪಹಾಸ್ಯಕ್ಕೆ ಈಡಾಗಿದ್ದಾರೆ. ಇವರಿಗೆ ದ್ವಿಪಾತ್ರ ವಹಿಸಿದ ನಿರ್ದೇಶಕ ಅಮಿತ್ ಶಾ ಮತ್ತು ದಿಗ್ದರ್ಶಕ ಮೋದಿ ಅವರಂತೆಯೇ ದೆಹಲಿ ಪೊಲೀಸರು ಕೂಡ ಸಂವೇದನೆಯನ್ನೆ ಕಳೆದುಕೊಂಡ ವಿಕ್ಷಿಪ್ತ ಮನಸ್ಸಿನ ಮನುಷ್ಯರಾಗಿ ಬದಲಾಗಿದ್ದಾರೆ.

ಮೇಲಿನ ವಿಡಿಯೋ ಅಲ್ಟ್‌ನ್ಯೂಸ್ ಮತ್ತು ನ್ಯೂಯಾರ್ಕ್ ಟೈಮ್ಸ್ ದೃಢೀಕರಿಸಿದ ವಿಡಿಯೋವಾಗಿದೆ. ಇದು ದೆಹಲಿ ಹಿಂಸಾಚಾರ ಸಂದರ್ಭದ್ದಾಗಿದ್ದು, ಪೊಲೀಸರು ಐದಾರು ಮುಸ್ಲಿಂ ಯುವಕರನ್ನು ನೆಲಕ್ಕೆ ಕೆಡವಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿ ವಿಕೃತ ಆನಂದ ಪಡೆಯುವುದಲ್ಲದೇ ಜನಗಣಮನ ಹಾಡಲು ಒತ್ತಾಯಿಸುತ್ತಾ ಕ್ರೂರವಾಗಿ ನಡೆದುಕೊಂಡಿದ್ದರು. ಹೀಗೆ ಥಳಿತಕ್ಕೊಳಗಾದವರಲ್ಲಿ ಒಬ್ಬ ವ್ಯಕ್ತಿ ನಂತರದಲ್ಲಿ ಮೃತಪಟ್ಟಿದ್ದಾರೆ ಎಂದು ನ್ಯೂ ಯಾರ್ಕ್ ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...