Homeಮುಖಪುಟದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! - ಟೂಲ್‌ಕಿಟ್ ಕೊಟ್ಟವರಾರು?

ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

- Advertisement -
- Advertisement -

ಹೌದು, ನಮ್ಮ ದೇಶದ ಸರ್ಕಾರಿ ಟೂಲ್‌ಕಿಟ್ ಒಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತರುತ್ತಿದೆ. ಅಷ್ಟೇ ಅಲ್ಲ ಅದು ಅಪಹಾಸ್ಯಕ್ಕೂ ಈಡಾಗುತ್ತಿದೆ. ಈ ಟೂಲ್‌ಕಿಟ್‌ನಲ್ಲಿ ಇರುವ ಮಾರ್ಗಸೂಚಿಗಳು: ಐಪಿಸಿ-ಸಿಆರ್‌ಪಿಸಿ ಸೆಕ್ಷನ್ಸ್ 124(A), 153(A) 120(B) ಮತ್ತು UAPA ಇತ್ಯಾದಿ. ಕೆಲವೊಮ್ಮೆ ಸಾಧಾರಣ ಕೋಡ್‌ಗಳೂ ಬಳಕೆಯಾಗುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ಈ ಟೂಲ್‌ಕಿಟ್ ಪ್ರಕಾರ ಕೆಲಸ ಮಾಡುತ್ತಿದ್ದಾರಾದರೂ ಉತ್ತರಪ್ರದೇಶ ಪೊಲೀಸರು ತುಸು ಹೆಚ್ಚು ಆಕ್ಟಿವ್ ಆಗಿದ್ದಾರೆ. ಆದರೆ ಈ ಟೂಲ್‌ಕಿಟ್ ಅನ್ನು ಭಯಂಕರವಾಗಿ ಜಾರಿಗೆ ತರುವ ಮೂಲಕ ಜಾಗತಿಕ ಅಪಖ್ಯಾತಿ ಮತ್ತು ಅಪಹಾಸ್ಯಕ್ಕೆ ಈಡಾಗುತ್ತಿರುವುದು ದೆಹಲಿ ಪೊಲೀಸ್.

ಜೆಎನ್‌ಯುನ ಪ್ರಜ್ಞಾವಂತ, ಸಮಾಜಮುಖಿ ವಿದ್ಯಾರ್ಥಿಗಳ ಬಾಯಿ ಮುಚ್ಚಿಸಲು ಈ ಟೂಲ್‌ಕಿಟ್ ಬಳಸಲಾಯಿತು. ಭೀಮಾ-ಕೋರೆಗಾಂವ್ ಪ್ರಕರಣದ ನೆಪದಲ್ಲಿ ಈ ದೇಶದ ದುರ್ಬಲ ಸಮುದಾಯಗಳ ಸಾಕ್ಷಿ ಪ್ರಜ್ಞೆಯಂತಿರುವ ಲೇಖಕರು, ಸಾಮಾಜಿಕ ಹೋರಾಟಗಾರರು ಮತ್ತು ವಕೀಲರು ಸಾರ್ವಜನಿಕ ಜಾಗೃತಿ ಮೂಡಿಸದಂತೆ ಮಾಡಲು ಇದೇ ಟೂಲ್‌ಕಿಟ್ ಅನ್ವಯ ಮಾಡಿ ಅವರನ್ನೆಲ್ಲ ಬಂಧನದಲ್ಲಿ ಇಡಲಾಗಿತು.
ಕಳೆದ ವರ್ಷ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ ಎನ್‌ಆರ್‌ಸಿ-ಸಿಎಎ-ಎನ್‌ಪಿಆರ್ ಹೋರಾಟಕ್ಕೆ ಕಳಂಕ ತರಲೂ ಇದೇ ಟೂಲ್‌ಕಿಟ್ ಬಳಕೆಯಾಗಿತು. ಈಶಾನ್ಯ ದೆಹಲಿಯಲ್ಲಿ ಪೊಲೀಸರೇ ಮುಂದೆ ನಿಂತು, ಕೆಲವೊಮ್ಮೆ ತಾವೇ ಭಾಗಿದಾರರಾಗಿದ್ದ ಪ್ರಾಯೋಜಿತ ಗಲಭೆ-ಹಿಂಸಾಚಾರ ಪ್ರಕರಣದಲ್ಲಿ ಸಿಎಎ ವಿರೋಧಿ ಹೋರಾಟಗಾರರನ್ನು ಈ ಟೂಲ್‌ಕಿಟ್‌ನ ಅಸ್ತ್ರಗಳ ಜೊತೆ ದಂಗೆ, ಕೊಲೆ ಇತ್ಯಾದಿ ಕೇಸುಗಳನ್ನು ಹಾಕಿ ಬಂಧಿಸಲಾಗಿತು.

ಇದನ್ನೂ ಓದಿ: ಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

ಈಗ ರೈತ ಹೋರಾಟವನ್ನು ಬಗ್ಗು ಬಡಿಯಲು ಕೂಡ ದೆಹಲಿ ಪೊಲೀಸರು ಈ ಟೂಲ್‌ಕಿಟ್ ಮೊರೆ ಹೋಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆ ಪ್ರದೇಶದಲ್ಲಿ ಕೆಲವು ಪುಂಡರಿಂದಾದ ಗಲಭೆಯನ್ನು ರೈತ ಹೋರಾಟಗಾರರ ತಲೆಗೆ ಕಟ್ಟಲು ಅವರ ಹೆಸರುಗಳನ್ನು ಎಫ್‌ಐಆರ್‌ಗಳಲ್ಲಿ ಸೇರಿಸಲಾಗಿದೆ, ಯೋಗೇಂದ್ರ ಯಾದವ್ ಸೇರಿ ಹಲವರಿಗೆ ನೋಟಿಸ್ ನೀಡಲಾಗಿದೆ.

ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬಲಪ್ರದರ್ಶನದಿಂದ ಹತ್ತಿಕ್ಕಲು ಹೋಗಿ ಉತ್ತರಪ್ರದೇಶ ಪೊಲೀಸರು ಕೈ ಸುಟ್ಟುಕೊಂಡ ನಂತರ, ದೆಹಲಿ ಪೊಲೀಸರು ಎಚ್ಚರಗೊಂಡಿದ್ದಾರೆ. ಅವರೀಗ ರೈತ ಹೋರಾಟಕ್ಕೆ ಬಾಹ್ಯವಾಗಿ ಬೆಂಬಲ ನೀಡುತ್ತಿರುವ ಯುವಜನರ ಬೇಟೆ ಆರಂಭಿಸಿದ್ದಾರೆ.

ಇದರ ಪರಿಣಾಮವಾಗಿ ದಿಶಾ ರವಿ, ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಇಲ್ಲೂ ದೆಹಲಿ ಪೊಲೀಸರ ಟೂಲ್‌ಕಿಟ್ ಪ್ರಯೋಗವಾಗಿದೆ. ಕುತೂಹಲದ ವಿಷಯ ಎಂದರೆ, ಪ್ರತಿಭಟನೆಯ ಸ್ವರೂಪ ಹೇಗಿರಬೇಕು ಎಂಬ ಮಾರ್ಗಸೂಚಿಗಳನ್ನು ಒಳಗೊಂಡ ಟೂಲ್‌ಕಿಟ್ ಈಗ ದೆಹಲಿ ಪೊಲೀಸರ ಟಾರ್ಗೆಟ್ ಆಗಿದೆ!

ಇದನ್ನೂ ಓದಿ:  ಮೌನ ಮುರಿಯುವ ಹೊತ್ತಿದು; ಮಂದಿರದ ಹೆಸರಿನಲ್ಲಿ ಮನುಷ್ಯ ಸಂಬಂಧಗಳನ್ನು ಹದಗೆಡಿಸಲು ಬಿಡದಿರೋಣ

ಅಂದರೆ ತಮ್ಮ ಪ್ರಭು ಮತ್ತು ದಂಡನಾಯಕ ಎಡಿಟ್ ಮಾಡಿರುವ ಟೂಲ್‌ಕಿಟ್ ಈ ದೆಹಲಿ ಪೊಲೀಸರ ಅಸ್ತ್ರ. ದೇಶದ್ರೋಹಕ್ಕಾಗಿ ಐಪಿಸಿ ಸೆಕ್ಷನ್ಸ್ 124(A), ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಕ್ಕೆ 153 (A) ಮತ್ತು ಕ್ರಿಮಿನಲ್ ಪಿತೂರಿಗಾಗಿ 120 (B) ಮತ್ತು UAPA ಅಡಿಯಲ್ಲಿ ಯಾವಾಗ ಬೇಕಾದರೂ, ಸರ್ಕಾರವನ್ನು ಪ್ರಶ್ನಿಸಿದವರ ಮೇಲೆ ಪ್ರಕರಣ ದಾಖಲಿಸಲು ದೆಹಲಿ ಪೊಲೀಸರು ಸ್ವತಂತ್ರರು!

ದೆಹಲಿ ಪೊಲೀಸರ ದ್ವಿಪಾತ್ರ ಅಭಿನಯ, ಮೂಕಪ್ರೇಕ್ಷಕರು ಮತ್ತು ಹೈಪರ್-ಆಕ್ಟಿವ್

ಹಾಗಂತ ಎಲ್ಲ ಸಂದರ್ಭಗಳಲ್ಲೂ ದೆಹಲಿ ಪೊಲೀಸರು ತಮ್ಮ ಸರ್ಕಾರಿ ಟೂಲ್‌ಕಿಟ್ ಬಳಸುತ್ತಾರೆ ಎಂದುಕೊಳ್ಳಬೇಡಿ. ಅವರು ಒಮ್ಮೊಮ್ಮೆ ಮೂಕಪ್ರೇಕ್ಷಕರಾಗಿ ’ಅಹಿಂಸಾವಾದ’ ಮೆರೆದಿದ್ದೂ ಇದೆ. ಪ್ರಭುಗಳ ಚೇಲಾಗಳು ನಡೆಸುವ ಹಿಂಸಾಚಾರದ ಸಂದರ್ಭಗಳಲ್ಲಿ ಇಂತಹ ನಿಲುವು ತಳೆಯುತ್ತಾರೆ. ಕೆಲವೊಮ್ಮೆ ಪ್ರಭುಗಳ ಅಣತಿಯಂತೆ, ತಾವೇ ಹಿಂಸಾಚಾರದಲ್ಲಿ ಭಾಗಿಯಾಗುತ್ತಾರೆ. ಹೀಗಾಗಿ ಒಮ್ಮೆ ಮೂಕಪ್ರೇಕ್ಷಕರಾಗಿಯೂ, ಇನ್ನೊಮ್ಮೆ ಹೈಪರ್ ಆಕ್ಟಿವ್ ಆಗಿಯೂ ದ್ವಿಪಾತ್ರ ಅಭಿನಯ ಮಾಡುವ ’ಸಮರ’ ಕಲೆ ಅವರಿಗೆ ಸಿದ್ಧಿಯಾಗಿದೆ.

  • ಜೆಎನ್‌ಯುಗೆ ನುಗ್ಗಿದ ಗೂಂಡಾಗಳ ಪಡೆಯೊಂದು ರಾಡು, ಲಾಠಿಗಳಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಥಳಿಸುವಾಗ ದೆಹಲಿ ಪೊಲೀಸರು ಮೂಕಪ್ರೇಕ್ಷಕರು. ಈಗಲೂ ಆ ಕೇಸಿನಲ್ಲಿ ಒಬ್ಬರ ಬಂಧನವೂ ಆಗಿಲ್ಲ!
  • ಸಿಎಎ-ಎನ್‌ಆರ್‌ಸಿ ವಿರೋಧಿಸಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಡೆಸುತ್ತಿದ್ದ ಪಾದಯಾತ್ರೆ… ಏಕಾಏಕಿ ಒಬ್ಬ ಪುಂಡ ನೇರಾನೇರ ನಿಂತು ಪಿಸ್ತೂಲ್ ತೆಗೆದು ಪ್ರತಿಭಟನಾಕಾರರತ್ತ ಶೂಟ್ ಮಾಡತೊಡಗಿದ. ಆತನ ಹಿಂದುಗಡೆ ನಿಂತಿದ್ದ ಹಿಂಡು ಪೊಲೀಸರು ಏನೂ ನಡೆದೇ ಇಲ್ಲ ಎಂಬ ಭಾವದಲ್ಲಿದ್ದರು, ಮೂಕಪ್ರೇಕ್ಷಕರು!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

  • ಈಶಾನ್ಯ ದೆಹಲಿಯಲ್ಲಿ ಹುಟ್ಟು ಹಾಕಲಾದ ಗಲಭೆ ನಿಯಂತ್ರಣಕ್ಕೆ ತರಬೇಕಿದ್ದ ಪೊಲೀಸರು, ಮುಸ್ಲಿಮರ ಮನೆಗೆ ಪುಂಡಪೋಕರಿಗಳು, ದುಷ್ಕರ್ಮಿಗಳು ಬೆಂಕಿ ಹಚ್ಚುವಾಗ ಸುಮ್ಮನೆ ನಿಂತಿದ್ದರು. ಮತ್ತೆ ಮೂಕಪ್ರೇಕ್ಷಕರ ಪಾತ್ರ!
  • ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಸಿಎಎ ವಿರೋಧಿ ಹೋರಾಟಗಾರರು, ಅಲ್ಪಸಂಖ್ಯಾತ ಸಂತಸ್ತ್ರರ ಮೇಲೆಯೇ ಎಫ್‌ಐಆರ್ ದಾಖಲಿಸಿದರು. ಹೈಪರ್-ಆಕ್ಟಿವ್ ರೋಲ್!
  • ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸುವವರೆಗೂ ಮೂಕಪ್ರೇಕ್ಷಕರು.
  • ನಂತರ ಫುಲ್‌ಚಾರ್ಜ್ ಆದ ಪೊಲೀಸರು ರೈತ ಮುಖಂಡರ ಮೇಲೆಯೇ ಎಫ್‌ಐಆರ್ ದಾಖಲಿಸಿದರು. ನೂರಾರು ರೈತ ಪ್ರತಿಭಟನಾಕರರನ್ನು ಜೈಲಿಗೆ ತಳ್ಳಿದರು.
  • ಸಿಂಘು ಗಡಿಯ ಒಂದು ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ನೇತೃತ್ವದ ದುಷ್ಕರ್ಮಿಗಳ ಗುಂಪೊಂದು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ತೂರಾಟ ನಡೆಸುವಾಗ ಪಕ್ಕದಲ್ಲೇ ನಿಂತಿದ್ದ ಪೊಲೀಸರು ಗಪ್‌ಚುಪ್. ಎರಡು ದಿನದ ನಂತರ, ಈ ಕಲ್ಲು ತೂರಾಟ ನಡೆಸಿದವರಿಗೂ, ಬಿಜೆಪಿಗೂ ಲಿಂಕ್ ಇದೆ ಎಂದು ವರದಿ ಮಾಡಿದ್ದ ಪತ್ರಕರ್ತನನ್ನು ಎಳೆದುಕೊಂಡು ಹಲ್ಲೆ ನಡೆಸಿ ಬಂಧಿಸಿದರು.

****

ಪಟ್ಟಿ ಮಾಡುತ್ತ ಹೋದರೆ, ಬಿಡಿ ಬಿಡಿ ಘಟನೆ ಬರೆಯುತ್ತ ಹೋದರೆ ಅದೇ ಒಂದು ದೊಡ್ಡ ಕತೆಯಾದೀತು. ಮೇಲಿನ ಎಲ್ಲ ಘಟನೆಗಳಲ್ಲೂ ದೆಹಲಿ ಪೊಲೀಸರು ಒಂದೋ ಮೂಕಪ್ರೇಕ್ಷಕರು ಇಲ್ಲವೇ ಹೈಪರ್-ಆಕ್ಟಿವ್ (ವಿಪರೀತ ಕಾರ್ಯಶೀಲರು). ಈ 6-7 ವರ್ಷಗಳಲ್ಲಿ ಅವರೆಂದೂ ಸಮಚಿತ್ತದ ಪೊಲೀಸರಾಗಿ ಕೆಲಸ ನಿರ್ವಹಿಸಿದ್ದೇ ಅಪರೂಪ.

ಹೀಗೆ ಒಂದಕ್ಕೊಂದು ತದ್ವಿರುದ್ಧವಾದ ದ್ವಿಪಾತ್ರ ಅಭಿನಯವನ್ನು ಸಲೀಸಾಗಿ ಮಾಡುತ್ತ ಹೊರಟಿರುವ ಅವರು, ಈಗ ತಮ್ಮ ಮೂರ್ಖ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿಯೂ ಅಪಹಾಸ್ಯಕ್ಕೆ ಈಡಾಗಿದ್ದಾರೆ. ಇವರಿಗೆ ದ್ವಿಪಾತ್ರ ವಹಿಸಿದ ನಿರ್ದೇಶಕ ಅಮಿತ್ ಶಾ ಮತ್ತು ದಿಗ್ದರ್ಶಕ ಮೋದಿ ಅವರಂತೆಯೇ ದೆಹಲಿ ಪೊಲೀಸರು ಕೂಡ ಸಂವೇದನೆಯನ್ನೆ ಕಳೆದುಕೊಂಡ ವಿಕ್ಷಿಪ್ತ ಮನಸ್ಸಿನ ಮನುಷ್ಯರಾಗಿ ಬದಲಾಗಿದ್ದಾರೆ.

ಮೇಲಿನ ವಿಡಿಯೋ ಅಲ್ಟ್‌ನ್ಯೂಸ್ ಮತ್ತು ನ್ಯೂಯಾರ್ಕ್ ಟೈಮ್ಸ್ ದೃಢೀಕರಿಸಿದ ವಿಡಿಯೋವಾಗಿದೆ. ಇದು ದೆಹಲಿ ಹಿಂಸಾಚಾರ ಸಂದರ್ಭದ್ದಾಗಿದ್ದು, ಪೊಲೀಸರು ಐದಾರು ಮುಸ್ಲಿಂ ಯುವಕರನ್ನು ನೆಲಕ್ಕೆ ಕೆಡವಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿ ವಿಕೃತ ಆನಂದ ಪಡೆಯುವುದಲ್ಲದೇ ಜನಗಣಮನ ಹಾಡಲು ಒತ್ತಾಯಿಸುತ್ತಾ ಕ್ರೂರವಾಗಿ ನಡೆದುಕೊಂಡಿದ್ದರು. ಹೀಗೆ ಥಳಿತಕ್ಕೊಳಗಾದವರಲ್ಲಿ ಒಬ್ಬ ವ್ಯಕ್ತಿ ನಂತರದಲ್ಲಿ ಮೃತಪಟ್ಟಿದ್ದಾರೆ ಎಂದು ನ್ಯೂ ಯಾರ್ಕ್ ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...