Homeಮುಖಪುಟಅಪರಾಧ ತಡೆಯಬೇಕಾದ ದೆಹಲಿ ಪೊಲೀಸರು ನಾಟಕವಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್

ಅಪರಾಧ ತಡೆಯಬೇಕಾದ ದೆಹಲಿ ಪೊಲೀಸರು ನಾಟಕವಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

‘ಭಾರತೀಯ ಜನತಾ ಪಕ್ಷವು (ಬಿಜೆಪಿ) ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸಿದ್ದು, ಅವರಿಗೆ ₹25 ಕೋಟಿ ಆಮಿಷ ಒಡ್ಡಿದೆ’ ಎಂಬ ಹೇಳಿಕೆ ಕುರಿತು ದೆಹಲಿ ಪೊಲೀಸ್ ಅಪರಾಧ ವಿಭಾಗವು ತನ್ನ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಅರವಿಂದ್ ಕೇಜ್ರಿವಾಲ್ ಶನಿವಾರ ಮೌನ ಮುರಿದಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ದೆಹಲಿ ಪೊಲೀಸರು ಅಪರಾಧಗಳನ್ನು ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

‘ನಾನು ಈ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳ ಬಗ್ಗೆ ಸಹಾನುಭೂತಿ ಹೊಂದಿದ್ದೇನೆ. ಇದರಲ್ಲಿ ಅವರ (ಅಧಿಕಾರಿಗಳ) ತಪ್ಪಾದರೂ ಏನು? ಅಪರಾಧ ತಡೆಯುವುದು ಅವರ ಕೆಲಸ. ಆದರೆ, ಬದಲಾಗಿ ಈ ರೀತಿಯ ನಾಟಕ ಮಾಡುತ್ತಿದ್ದಾರೆ. ಅದಕ್ಕಾಗಿಯೇ ದೆಹಲಿಯಲ್ಲಿ ಅಪರಾಧಗಳು ತುಂಬಾ ಹೆಚ್ಚುತ್ತಿವೆ’ ಎಂದು ಎಎಪಿ ರಾಷ್ಟ್ರೀಯ ಸಂಚಾಲಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ, ‘ಪೊಲೀಸರ ರಾಜಕೀಯ ಮೇಲಾಧಿಕಾರಿಗಳು ಅವರು (ಬಿಜೆಪಿ) ಯಾವ ಎಎಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರು ಎಂದು ನನ್ನನ್ನು ಕೇಳುತ್ತಿದ್ದಾರೆ? ಆದರೆ ನಿಮಗೆ ನನಗಿಂತ ಹೆಚ್ಚು ತಿಳಿದಿಲ್ಲವೇ? ನಿಮಗೆ ಎಲ್ಲವೂ ತಿಳಿದಿಲ್ಲವೇ? ಕಳೆದ ಕೆಲವು ವರ್ಷಗಳಲ್ಲಿ ದೆಹಲಿಯಲ್ಲದೆ, ವಿವಿಧ (ವಿರೋಧ ನೇತೃತ್ವದ ರಾಜ್ಯಗಳು) ಸರ್ಕಾರಗಳನ್ನು ಉರುಳಿಸಲು ಶಾಸಕರನ್ನು ಹೇಗೆ ಬೇಟೆಯಾಡಿದರು ಎಂಬುದು ನಿಮಗೆ ತಿಳಿದಿಲ್ಲವೇ? ಹಾಗಾದರೆ ಈ ನಾಟಕ ಯಾಕೆ’ ಎಂದು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಗ್ಗೆ ಅಪರಾಧ ವಿಭಾಗದ ಅಧಿಕಾರಿಗಳು ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಹಿಂದಿನ ಸಂಜೆ ಅವರಿಗೆ ನೋಟಿಸ್‌ ನೀಡಲು ವಿಫಲರಾಗಿದ್ದಾರೆ. ಆದರೆ, ಈ ಬಾರಿ ತಂಡಕ್ಕೆ ಸೂಚನೆ ನೀಡಲು ಸಾಧ್ಯವಾಯಿತು. ರಾಷ್ಟ್ರ ರಾಜಧಾನಿಯಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿಯು ಮುಖ್ಯಮಂತ್ರಿ ಮತ್ತು ದೆಹಲಿ ಸರ್ಕಾರದ ಸಚಿವೆ ಅತಿಶಿ ವಿರುದ್ಧ ದೂರು ದಾಖಲಿಸಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಪಾತ್ರದ ಕುರಿತು ಹಣಕಾಸು ಅಪರಾಧಗಳ ತನಿಖೆ ನಡೆಸುವ ಕೇಂದ್ರೀಯ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡುವೆಯೆ ಈ ಬೆಳವಣಿಗೆಗಳು ಸಂಭವಿಸಿವೆ. ಆದರೂ, ಕೇಜ್ರಿವಾಲ್ ಅವರು ಐದು ಸಮನ್ಸ್‌ಗಳನ್ನು ನಿರ್ಲಕ್ಷಿಸಿ, ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ.

ಈಗಾಗಲೇ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದೆ. ಕೇಜ್ರಿವಾಲ್ ಮತ್ತು ಆಪ್ ಪಕ್ಷವು ಸಮನ್ಸ್ ಅನ್ನು ‘ಅಕ್ರಮ’ ಎಂದು ಕರೆದಿದೆ. ಕೇಸರಿ ಪಕ್ಷವು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಹೆದರಿರುವ ಕಾರಣಕ್ಕೆ ಬಿಜೆಪಿಯು ಅವರನ್ನು ಜೈಲಿಗೆ ಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಆಪ್ ಆರೋಪಿಸಿದೆ.

ಇದನ್ನೂ ಓದಿ; ಶಾಸಕರ ಖರೀದಿ ಆರೋಪ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...