Homeಮುಖಪುಟದೆಹಲಿ, ಪಂಜಾಬ್ ರಾಜ್ಯಪಾಲರು ಸುಪ್ರೀಂ ಆದೇಶ ಓದಿಕೊಳ್ಳಲಿ: ಎಎಪಿ

ದೆಹಲಿ, ಪಂಜಾಬ್ ರಾಜ್ಯಪಾಲರು ಸುಪ್ರೀಂ ಆದೇಶ ಓದಿಕೊಳ್ಳಲಿ: ಎಎಪಿ

- Advertisement -
- Advertisement -

ರಾಜ್ಯಪಾಲರು ಯಾವುದೇ ಕ್ರಮ ಕೈಗೊಳ್ಳದೆ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅದನ್ನು ಪಂಜಾಬ್ ರಾಜ್ಯಪಾಲರು ಹಾಗೂ ದೆಹಲಿ ರಾಜ್ಯಪಾಲರು ಓದಿಕೊಳ್ಳಲಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಛಡ್ಡಾ ಶುಕ್ರವಾರ ಹೇಳಿದ್ದಾರೆ.

ಜೂನ್ 19 ಹಾಗೂ 20ರಂದು ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿರುವ ಮಸೂದೆ ಬಗ್ಗೆ ರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕು. ಆದರೆ, ಕಾನೂನು ರಚಿಸುವ ಶಾಸನ ಸಭೆಗಳ ಪ್ರಕ್ರಿಯೆಯನ್ನು ವಿಫಲಗೊಳಿಸುವ ಅಧಿಕಾರವನ್ನು ಚಲಾಯಿಸಬಾರದು ಎಂದು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಕೋರ್ಟ್ ಸೂಚಿಸಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಅನುಮೋದಿಸಿದ್ದ ನಾಲ್ಕು ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕುತ್ತಿಲ್ಲ ಎಂದು  ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ನ್ಯಾಯಪೀಠ, ನವೆಂಬರ್ 10ರಂದು ನೀಡಿರುವ ಆದೇಶದಲ್ಲಿ ಈ ಮಾತು ಹೇಳಿದೆ. ಆದೇಶದ ಪ್ರತಿಯನ್ನು ಗುರುವಾರ (ನ.23ರಂದು) ರಾತ್ರಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಛಡ್ಡಾ, ”ಪಂಜಾಬ್ ರಾಜ್ಯಪಾಲರ ವಿರುದ್ಧ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಗೌರವಾನ್ವಿತ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ರಾಜ್ಯಪಾಲರು ರಾಜ್ಯಗಳ ಚುನಾಯಿತರಲ್ಲದ ಮುಖ್ಯಸ್ಥರಾಗಿದ್ದಾರೆ ಮತ್ತು ಅವರು ತಮಗಿರುವ ಅಧಿಕಾರವನ್ನು ಶಾಸಕಾಂಗಕ್ಕೆ ಅಡ್ಡಿಪಡಿಸಲು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ” ಎಂದು ಬರೆದಿದ್ದಾರೆ.

”ಅದನ್ನು ಅರ್ಥಮಾಡಿಕೊಳ್ಳಲು ಪಂಜಾಬ್ ರಾಜ್ಯಪಾಲರು ಮತ್ತು ದೆಹಲಿ ರಾಜ್ಯಪಾಲರು ಆದೇಶದ ಪ್ರತಿಯನ್ನು ಬಹುಶಃ ಹಲವು ಸಲ ಓದಬೇಕಾಗುತ್ತದೆ. ಅಗತ್ಯಬಿದ್ದರೆ ನುರಿತ ವಕೀಲರ ನೆರವನ್ನೂ ಪಡೆಯಲಿ” ಎಂದು ತಿವಿದಿದ್ದಾರೆ.

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಹಾಗೂ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ಪುರೋಹಿತ್ ಹಗೆ ಸಾಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...