Homeಮುಖಪುಟದೆಹಲಿ, ಪಂಜಾಬ್ ರಾಜ್ಯಪಾಲರು ಸುಪ್ರೀಂ ಆದೇಶ ಓದಿಕೊಳ್ಳಲಿ: ಎಎಪಿ

ದೆಹಲಿ, ಪಂಜಾಬ್ ರಾಜ್ಯಪಾಲರು ಸುಪ್ರೀಂ ಆದೇಶ ಓದಿಕೊಳ್ಳಲಿ: ಎಎಪಿ

- Advertisement -
- Advertisement -

ರಾಜ್ಯಪಾಲರು ಯಾವುದೇ ಕ್ರಮ ಕೈಗೊಳ್ಳದೆ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅದನ್ನು ಪಂಜಾಬ್ ರಾಜ್ಯಪಾಲರು ಹಾಗೂ ದೆಹಲಿ ರಾಜ್ಯಪಾಲರು ಓದಿಕೊಳ್ಳಲಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಛಡ್ಡಾ ಶುಕ್ರವಾರ ಹೇಳಿದ್ದಾರೆ.

ಜೂನ್ 19 ಹಾಗೂ 20ರಂದು ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿರುವ ಮಸೂದೆ ಬಗ್ಗೆ ರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕು. ಆದರೆ, ಕಾನೂನು ರಚಿಸುವ ಶಾಸನ ಸಭೆಗಳ ಪ್ರಕ್ರಿಯೆಯನ್ನು ವಿಫಲಗೊಳಿಸುವ ಅಧಿಕಾರವನ್ನು ಚಲಾಯಿಸಬಾರದು ಎಂದು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಕೋರ್ಟ್ ಸೂಚಿಸಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಅನುಮೋದಿಸಿದ್ದ ನಾಲ್ಕು ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕುತ್ತಿಲ್ಲ ಎಂದು  ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ನ್ಯಾಯಪೀಠ, ನವೆಂಬರ್ 10ರಂದು ನೀಡಿರುವ ಆದೇಶದಲ್ಲಿ ಈ ಮಾತು ಹೇಳಿದೆ. ಆದೇಶದ ಪ್ರತಿಯನ್ನು ಗುರುವಾರ (ನ.23ರಂದು) ರಾತ್ರಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಛಡ್ಡಾ, ”ಪಂಜಾಬ್ ರಾಜ್ಯಪಾಲರ ವಿರುದ್ಧ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಗೌರವಾನ್ವಿತ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ರಾಜ್ಯಪಾಲರು ರಾಜ್ಯಗಳ ಚುನಾಯಿತರಲ್ಲದ ಮುಖ್ಯಸ್ಥರಾಗಿದ್ದಾರೆ ಮತ್ತು ಅವರು ತಮಗಿರುವ ಅಧಿಕಾರವನ್ನು ಶಾಸಕಾಂಗಕ್ಕೆ ಅಡ್ಡಿಪಡಿಸಲು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ” ಎಂದು ಬರೆದಿದ್ದಾರೆ.

”ಅದನ್ನು ಅರ್ಥಮಾಡಿಕೊಳ್ಳಲು ಪಂಜಾಬ್ ರಾಜ್ಯಪಾಲರು ಮತ್ತು ದೆಹಲಿ ರಾಜ್ಯಪಾಲರು ಆದೇಶದ ಪ್ರತಿಯನ್ನು ಬಹುಶಃ ಹಲವು ಸಲ ಓದಬೇಕಾಗುತ್ತದೆ. ಅಗತ್ಯಬಿದ್ದರೆ ನುರಿತ ವಕೀಲರ ನೆರವನ್ನೂ ಪಡೆಯಲಿ” ಎಂದು ತಿವಿದಿದ್ದಾರೆ.

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಹಾಗೂ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ಪುರೋಹಿತ್ ಹಗೆ ಸಾಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...

ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು

ಮೀರತ್‌ನಲ್ಲಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಮಹಿಳೆಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, "ಪೊಲೀಸರು ಮತ್ತು ಬಿಜೆಪಿ ಮುಖಂಡರು ತಮ್ಮನ್ನು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ, ಪ್ರಮುಖ...