Homeಮುಖಪುಟದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಸಾವು, ಹಲವರಿಗೆ ಗಾಯ

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಸಾವು, ಹಲವರಿಗೆ ಗಾಯ

- Advertisement -
- Advertisement -

ಶನಿವಾರ (ಫೆಬ್ರವರಿ 15, 2025) ತಡರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾಲ್ತುಳಿತಕ್ಕೂ ಮುನ್ನ, ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ರೈಲುಗಳನ್ನು ಹತ್ತಲು ಕಾಯುತ್ತಿದ್ದ ಪ್ರಯಾಣಿಕರ ಗುಂಪು ನಿಲ್ದಾಣದ 13 ಮತ್ತು 14ನೇ ಪ್ಲಾಟ್‌ಫಾರ್ಮ್‌ನಲ್ಲಿ ಭಾರಿ ಪ್ರಮಾಣದಲ್ಲಿ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿಯ ಪ್ರಕಾರ ಹನ್ನೊಂದು ಮಂದಿ ಗಾಯಗೊಂಡಿದ್ದಾರೆ.

ದಿ ಹಿಂದೂ ಜೊತೆ ಮಾತನಾಡಿದ ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್, ಕಾಲ್ತುಳಿತಕ್ಕೆ ಕಾರಣ ಸ್ಪಷ್ಟವಾಗಿಲ್ಲ, ಆದರೆ ಮಹಾಕುಂಭಕ್ಕಾಗಿ ಪ್ರಯಾಗ್‌ರಾಜ್‌ಗೆ ಎರಡು ರೈಲುಗಳನ್ನು ರದ್ದುಗೊಳಿಸುವುದರಿಂದ ಎರಡು ಪ್ಲಾಟ್‌ಫಾರ್ಮ್‌ಗಳಲ್ಲಿ ಜನಸಂದಣಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಆರಂಭಿಕ ವರದಿಗಳು ಸೂಚಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌  ಖಾತೆಯಲ್ಲಿ, “ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರ ದುಃಖದಲ್ಲಿ ಪಾಲ್ಗೊಳ್ಳುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಾಲ್ತುಳಿತದಿಂದ ಹಾನಿಗೊಳಗಾದ ಎಲ್ಲರಿಗೂ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ.” ಎಂದಿದ್ದಾರೆ.

ಚಿತ್ರದಲ್ಲಿ: ಮನೋಜ್ ತನ್ನ ಮಗಳ ಫೋಟೋವನ್ನು ತನ್ನ ಫೋನ್‌ನಲ್ಲಿ ತೋರಿಸುತ್ತಿದ್ದಾರೆ.

ಅಗ್ನಿಶಾಮಕ ಇಲಾಖೆ ಹೇಳಿದ್ದೇನು: ಶನಿವಾರ ರಾತ್ರಿ 9.55ರ ಸುಮಾರಿಗೆ 14 ಮತ್ತು 15ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂಬ ದೂರು ಬಂದ ನಂತರ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ನಿಯೋಜಿಸಲಾಗಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಲೋಕ ನಾಯಕ್ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಹಿರಿಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ರೈಲ್ವೆ ಹೇಳಿದ್ದೇನು: ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ ರೈಲ್ವೆ, “13 ಮತ್ತು 14 ನೇ ಪ್ಲಾಟ್‌ಫಾರ್ಮ್‌ಗಳ ಬಳಿ ಭಾರೀ ಜನದಟ್ಟಣೆಯ ಪರಿಸ್ಥಿತಿ ನಿರ್ಮಾಣವಾಯಿತು. ಪ್ರಯಾಣಿಕರ ಸಂಖ್ಯೆಯಲ್ಲಿ ಹಠಾತ್ ಏರಿಕೆಯಿಂದಾಗಿ, ಕೆಲವು ವ್ಯಕ್ತಿಗಳು ಮೂರ್ಛೆ ಹೋದರು, ಇದು ಕಾಲ್ತುಳಿತದಂತಹ ಪರಿಸ್ಥಿತಿಯ ವದಂತಿಗಳಿಗೆ ಕಾರಣವಾಯಿತು, ಇದು ಪ್ರಯಾಣಿಕರಲ್ಲಿ ಭಯಭೀತಿಯನ್ನು ಉಂಟುಮಾಡಿತು. ನಂತರ ದಟ್ಟಣೆಯನ್ನು ಕಡಿಮೆ ಮಾಡುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಈ ವಿಷಯವನ್ನು  ರೈಲ್ವೆಯ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ವಿವರಿಸುತ್ತಾ,, ಪ್ಲಾಟ್‌ಫಾರ್ಮ್ ಸಂಖ್ಯೆ 14ರಲ್ಲಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್‌ನೊಂದಿಗೆ ಬಹಳಷ್ಟು ಜನರು ಜಮಾಯಿಸಿದರು. ರೈಲುಗಳು ವಿಳಂಬವಾದ ಕಾರಣ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿಯ ಪ್ರಯಾಣಿಕರು 12, 13 ಮತ್ತು 14ನೇ ಪ್ಲಾಟ್‌ಫಾರ್ಮ್‌ಗಳ ಕಡೆ ಹೋದರು ಎಂದು ಅವರು ಹೇಳಿದರು.

ಪೂನಂ ದೇವಿ ತನ್ನ ಮೊಮ್ಮಗನೊಂದಿಗೆ ಇರುವ ಕೊನೆಯ ಫೋಟೋ ಇಲ್ಲಿದೆ.

ನಮಗೆ ತಿಳಿದು ಬಂದ ಮಾಹಿತಿಯ ಪ್ರಕಾರ, 1,500 ಸಾಮಾನ್ಯ ಟಿಕೆಟ್‌ಗಳು ಮಾರಾಟವಾದವು, ಇದರಿಂದಾಗಿ ಜನಸಂದಣಿ ಅನಿಯಂತ್ರಿತವಾಯಿತು ಎಂದು ಅವರು ಹೇಳಿದರು.

 ದೆಹಲಿ ಪೊಲೀಸರು 18 ಮೃತರ ಹೆಸರುಗಳನ್ನು ಬಿಡುಗಡೆ ಮಾಡಿದ್ದಾರೆ
1.⁠ ⁠ಆಹಾ ದೇವಿ w/o ರವಿಂದೀ ನಾಥ್, ಬಕ್ಸೂರ್ ಬಿಹಾರ, ವಯಸ್ಸು 79 ವರ್ಷ

2.⁠ ಪಿಂಕಿ ದೇವಿ w/o ಉಪೇಂದರ್ ಶರ್ಮಾ, ಸಂಗಮ್ ವಿಹಾರ್ ದೆಹಲಿ, ವಯಸ್ಸು 41 ವರ್ಷಗಳು

3.⁠ ಶೀಲಾ ದೇವಿ w/o ಉಮೇಶ್ ಗಿರಿ, ಸರಿತಾ ವಿಹಾರ್ ದೆಹಲಿ, ವಯಸ್ಸು 50 ವರ್ಷಗಳು

4.⁠ ವ್ಯೋಮ್ s/o ಧರಂವೀರ್, ಬವಾನಾ ದೆಹಲಿ, ವಯಸ್ಸು 25 ವರ್ಷಗಳು

5.⁠ ಪೂನಂ ದೇವಿ w/o ಮೇಘನಾಥ್, ಸರನ್ ಬಿಹಾರ, ವಯಸ್ಸು 40 ವರ್ಷಗಳು

6.⁠ ಲಲಿತಾ ದೇವಿ w/o ಸಂತೋಷ್, ಪರ್ಣ ಬಿಹಾರ, ವಯಸ್ಸು 35 ವರ್ಷಗಳು

7.⁠ ಸುರುಚಿ D/o ಮನೋಜ್ ಶಾ, ಮುಜಫರ್‌ಪುರ ಬಿಹಾರ, ವಯಸ್ಸು 11 ವರ್ಷಗಳು

8.⁠ ⁠ಕೃಷ್ಣಾ ದೇವಿ w/o ವಿಜಯ್ ಶಾ, ಸಮಸ್ತಿಪುರ್ ಬಿಹಾರ, ವಯಸ್ಸು 40 ವರ್ಷಗಳು

9.⁠ ⁠ವಿಜಯ್ ಸಾಹ್ s/o ರಾಮ್ ಸರೂಪ್ ಸಾಹ್, ಸಮಸ್ತಿಪುರ್ ಬಿಹಾರ, ವಯಸ್ಸು 15 ವರ್ಷಗಳು

10.⁠ ⁠ನೀರಜ್ s/o ಇಂದರ್‌ಜೀತ್ ಪಾಸ್ವಾನ್, ವೈಶಾಲಿ ಬಿಹಾರ, ವಯಸ್ಸು 12 ವರ್ಷಗಳು

11.⁠ ⁠ಶಾಂತಿ ದೇವಿ w/o ರಾಜ್ ಕುಮಾರ್ ಮಾಂಝಿ, ನಾವಡಾ ಬಿಹಾರ, ವಯಸ್ಸು 40 ವರ್ಷಗಳು

12.⁠ ⁠ಪೂಜಾ ಕುಮಾರ್ D/o ರಾಜ್ ಕುಮಾರ್ ಮಂಜಿ, ನಾವಡಾ ಬಿಹಾರ, ವಯಸ್ಸು 8 ವರ್ಷಗಳು

13.⁠ ⁠ಸಂಗೀತಾ ಮಲಿಕ್ w/o ಮೋಹಿತ್ ಮಲಿಕ್, ಭಿವಾನಿ ಹರಿಯಾಣ, ವಯಸ್ಸು 34 ವರ್ಷ

14.⁠ ⁠ಪೂನಂ W/o ವೀರೇಂದ್ರ ಸಿಂಗ್, ಮಹಾವೀರ್ ಎನ್‌ಕ್ಲೇವ್, ವಯಸ್ಸು 34 ವರ್ಷಗಳು

15.⁠ ⁠ಮಮತಾ ಝಾ w/o ವಿಪಿನ್ ಝಾ, ನಂಗ್ಲೋಯ್ ದೆಹಲಿ, ವಯಸ್ಸು 40 ವರ್ಷಗಳು

16.⁠ ⁠ರಿಯಾ ಸಿಂಗ್ d/o ಓಪಿಲ್ ಸಿಂಗ್, ಸಾಗರಪುರ ದೆಹಲಿ, ವಯಸ್ಸು 7 ವರ್ಷಗಳು

17.⁠ ⁠ಬೇಬಿ ಕುಮಾರಿ ಡಿ/ಒ ಪ್ರಭು ಸಾಹ, ಬಿಜ್ವಾಸನ್ ದೆಹಲಿ, ವಯಸ್ಸು 24 ವರ್ಷ

18.⁠ ⁠ಮನೋಜ್ s/o ಪಂಚದೇವ್ ಕುಶ್ವಾಹ, ನಂಗ್ಲೋಯ್ ದೆಹಲಿ, ವಯಸ್ಸು 47 ವರ್ಷಗಳು

370ನೇ ವಿಧಿಯನ್ನು ಅಂಬೇಡ್ಕರ್ ಯಾಕೆ ಸೇರಿಸಿದರೆಂದು ಇತಿಹಾಸ ತಿಳಿಯಿರಿ: ಉಪರಾಷ್ಟ್ರಪತಿ ಧನ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...