Homeಮುಖಪುಟದೆಹಲಿ ಅತ್ಯಾಚಾರ ಪ್ರಕರಣಕ್ಕೆ 12 ವರ್ಷಗಳಾದರೂ ದೇಶದ ಪರಿಸ್ಥಿತಿ ಬದಲಾಗಿಲ್ಲ - ಸಂತ್ರಸ್ಥೆಯ ತಾಯಿ

ದೆಹಲಿ ಅತ್ಯಾಚಾರ ಪ್ರಕರಣಕ್ಕೆ 12 ವರ್ಷಗಳಾದರೂ ದೇಶದ ಪರಿಸ್ಥಿತಿ ಬದಲಾಗಿಲ್ಲ – ಸಂತ್ರಸ್ಥೆಯ ತಾಯಿ

- Advertisement -
- Advertisement -

2012ರ ದೆಹಲಿ ಅತ್ಯಾಚಾರ ಪ್ರಕರಣ ನಡೆದು 12 ವರ್ಷಗಳು ಕಳೆದರೂ ದೇಶದ ಪರಿಸ್ಥಿತಿ ಬದಲಾಗಿಲ್ಲ ಎಂದು ಸಂತ್ರಸ್ತೆ ನಿರ್ಭಯಾ ಅವರ ತಾಯಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ”ನಾನು ಬಹಳ ನೋವಿನಿಂದ ಹೇಳುತ್ತಿದ್ದೇನೆ, ದೇಶದ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ” ಎಂದು ಅವರು ಹೇಳಿದ್ದಾರೆ. ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನಡೆದು ಡಿಸೆಂಬರ್ 16ಕ್ಕೆ 12 ವರ್ಷಗಳಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾದೇವಿ ಅವರು ‘ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ರಾಷ್ಟ್ರೀಯ ಸಮಾವೇಶ’ದಲ್ಲಿ ಭಾಗಿಯಾಗಿ ಭಾವನಾತ್ಮಕ ಭಾಷಣ ಮಾಡಿದ್ದಾರೆ. “12 ವರ್ಷಗಳ ನಂತರವೂ ಪರಿಸ್ಥಿತಿ ಬದಲಾಗಿಲ್ಲ ಎಂದು ನಾನು ಬಹಳ ನೋವಿನಿಂದ ಹೇಳುತ್ತೇನೆ. ದೇಶದ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ. ನನ್ನ ಮಗಳ ನ್ಯಾಯಕ್ಕಾಗಿ ನಾನು ಹೋರಾಡುವಾಗ ನನ್ನ ಮಗಳು ಇನ್ನೆಂದಿಗೂ ಹಿಂದಿರುಗುವುದಿಲ್ಲ ಎಂದು ನನಗೆ ತಿಳಿದಿತ್ತು” ಎಂದು ಅವರು ಹೇಳಿದ್ದಾರೆ. ದೆಹಲಿ ಅತ್ಯಾಚಾರ

“ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಇಂತಹ ಘಟನೆ ಮತ್ತೆ ಮರುಕಳಿಸಬಾರದು ಎಂಬುದೊಂದೆ ನನ್ನ ಮನಸ್ಸಲ್ಲಿತ್ತು. ಅದಕ್ಕಾಗಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾದೆ. ಆದರೆ ಎಲ್ಲವೂ ನಿಷ್ಪ್ರಯೋಜಕ. ಇಂದಿಗೂ ಹಲವು ಅತ್ಯಾಚಾರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರದು. ಅಪರಾಧಿಗಳು ಯಾರೆಂದು ಗುರುತಿಸುವುದೇ ಒಂದು ವರ್ಷ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲೇ ಕೋಲ್ಕತ್ತಾದಲ್ಲಿ ನಡೆದ ಆರ್‌ಜಿ ಕರ್ ಘಟನೆಯನ್ನು ಉಲ್ಲೇಖಿಸಿದ ಆಶಾದೇವಿ ಅವರು, ನಿಜವಾಗಿ ಏನಾಯಿತು ಎಂಬುದು ಇನ್ನೂ ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

2012ರ ಡಿಸೆಂಬರ್ 16ರಂದು 23 ವರ್ಷದ ಯುವತಿಯ ಮೇಲೆ (ನಿರ್ಭಯಾ) ದಕ್ಷಿಣ ದೆಹಲಿಯಲ್ಲಿ ಚಲಿಸುವ ಬಸ್‌ನೊಳಗೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ತೀವ್ರ ಗಾಯಗೊಂಡಿದ್ದ ಯುವತಿಯನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಡಿಸೆಂಬರ್ 29ರಂದು ನಿಧನರಾದರು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದ ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಎಂಬ ನಾಲ್ವರು ಆರೋಪಿಗಳನ್ನು ವಿಚಾರಣೆ ನಂತರ ಅಪರಾಧಿಗಳು ಎಂದು ಪರಿಗಣಿಸಿ ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.

ಈ ವೇಳೆ ರಾಮ್ ಸಿಂಗ್ ಎಂಬ ಆರೋಪಿ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇನ್ನೋರ್ವ ಆರೋಪಿ ಬಾಲಪರಾಧಿಯಾಗಿದ್ದು ಮೂರು ವರ್ಷ ಜೈಲು ಶಿಕ್ಷೆಯ ಬಳಿಕ 2015ರಲ್ಲಿ ಬಿಡುಗಡೆಗೊಂಡಿದ್ದಾನೆ.

ಇದನ್ನೂ ಓದಿ: ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...