Homeಮುಖಪುಟದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿದ್ದ ನೆರೆಹೊರೆಯವರು ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು.

- Advertisement -
- Advertisement -

ಕಳೆದ ವಾರ ದೆಹಲಿಯಲ್ಲಿ 20 ವರ್ಷದ ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ತನ್ನ ನೆರೆಹೊರೆಯವರೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಮತ್ತೆ ಮೂವರು ಎಫ್‌ಐಆರ್‌ ದಾಖಲಾಗಿವೆ. ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡಿದವರ ವಿರುದ್ಧ ದೆಹಲಿಯ ಶಹದಾರಾ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವದಂತಿಗಳನನ್ನು ಹಬ್ಬಿದ್ದ ಪೋಸ್ಟ್‌ಗಳು ಹಿಂಸಾಚಾರವನ್ನು ಪ್ರಚೋದಿಸುವ ಯತ್ನದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಪ್ರಯತ್ನಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಯೂಟ್ಯೂಬ್ ಚಾನೆಲ್ ಒಂದು  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿತ್ತು ಎಂದು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಶಹದಾರಾ) ಆರ್ ಸತ್ಯಸುಂದರಂ ನೀಡಿರುವ ವೀಡಿಯೊ ಹೇಳಿಕೆಯಲ್ಲಿ, “ಕೆಲವರು ಲೈಂಗಿಕ ದೌರ್ಜನ್ಯ ಘಟನೆಯ ಬಗ್ಗೆ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದರು. ಅವರು ಸಂತ್ರಸ್ತೆಯ ಗುರುತನ್ನು ಹಂಚಿಕೊಳ್ಳುತ್ತಿದ್ದರು. ಜೊತೆಗೆ ಘಟನೆಗೆ ಕೋಮುಬಣ್ಣ ನೀಡಲು ಪ್ರಯತ್ನಿಸುತ್ತಿದ್ದರು. ಇಂತಹ ವದಂತಿಗಳನ್ನು ಹರಡಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಗುರುತಿಸಿದ್ದೇವೆ. ಸುಳ್ಳು, ತಪ್ಪು ಮಾಹಿತಿ ಪ್ರಚಾರಕ್ಕಾಗಿ ಅವರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ಇನ್ನು ಅಪಹರಣ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 20 ವರ್ಷದ ಯುವತಿ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದು, ತನ್ನ ಕುಟುಂಬ ಮತ್ತು  ಮೂರು ವರ್ಷದ ಮಗನಿಂದ ದೂರವಾಗಿದ್ದಾರೆ. ಆಕೆ ತನ್ನ ಮಗುವನ್ನು ನೋಡಿಕೊಳ್ಳುವ ಮಾನಸಿಕ ಸ್ಥಿತಿಯಲ್ಲಿಲ್ಲ ಎಂದು ಆಕೆಯ ಕುಟುಂಬದವರು ಹೇಳುತ್ತಾರೆ.

ಕಳೆದ ಬುಧವಾರ (ಜ.26) ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಬಳಿಕ ಆಕೆಯ ನೆರೆಹೊರೆಯವರು ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು. ಈ ಬಗ್ಗೆ ದೆಹಲಿ ಮಹಿಳಾ ಆಯೋಗ ತಿಳಿಸಿತ್ತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ 14 ವರ್ಷದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಸಂತ್ರಸ್ತೆಯ ಸಹೋದರಿ ಹೇಳಿದ್ದಾರೆ.

ಬುಧವಾರ ಆಕೆಯ ಮೇಲೆ ನಡೆದ ದಾಳಿಯಲ್ಲಿ ಹೆಚ್ಚಾಗಿ ಮೃತ ಹುಡುಗನ ಕುಟುಂಬದ ಮಹಿಳೆಯರು ಮತ್ತು ಯುವಕರು ಸೇರಿದ್ದರು. ಇವರೆಲ್ಲಾ ಕಸ್ತೂರ್ಬಾ ನಗರದಲ್ಲಿ ಯುವತಿಯ ನೆರೆಹೊರೆಯವರು. ಸದ್ಯ ಪೊಲೀಸರು ನೆರೆಹೊರೆಯಿಂದ ಎಂಟು ಮಹಿಳೆಯರು ಮತ್ತು ನಾಲ್ವರು ಪುರುಷರನ್ನು (12 ಮಂದಿ) ಬಂಧಿಸಿದ್ದಾರೆ.

 

“ಯಾವುದೇ ಯುವತಿ, ಯಾವುದೇ ಮಗಳಿಗೂ ಇಂತಹ ಸ್ಥಿತಿ ಬರಬಾರದು. ಆಕೆಯ ಮೇಲೆ ಹಲ್ಲೆ ಮಾಡಿರುವ ರೀತಿ, ಆಕೆಯನ್ನು ತಪ್ಪಾಗಿ ತೋರಿಸಿದ್ದು, ಆಕೆಯನ್ನು ಆಘಾತಕ್ಕೆ ತಳ್ಳಿದ್ದು… ಓ ನನಗೆ ನ್ಯಾಯ ಸಿಗುವ ಬಗ್ಗೆ ನಂಬಿಕೆ ಇಲ್ಲ. ನನಗೆ ನನ್ನ ಮಗಳು ಮನೆಗೆ ಮರಳಬೇಕು ಅಷ್ಟೇ” ಎಂದು ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿರುವ ಸಂತ್ರಸ್ತ ಯುವತಿಯ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...