Homeಮುಖಪುಟದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿದ್ದ ನೆರೆಹೊರೆಯವರು ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು.

- Advertisement -
- Advertisement -

ಕಳೆದ ವಾರ ದೆಹಲಿಯಲ್ಲಿ 20 ವರ್ಷದ ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ತನ್ನ ನೆರೆಹೊರೆಯವರೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಮತ್ತೆ ಮೂವರು ಎಫ್‌ಐಆರ್‌ ದಾಖಲಾಗಿವೆ. ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡಿದವರ ವಿರುದ್ಧ ದೆಹಲಿಯ ಶಹದಾರಾ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವದಂತಿಗಳನನ್ನು ಹಬ್ಬಿದ್ದ ಪೋಸ್ಟ್‌ಗಳು ಹಿಂಸಾಚಾರವನ್ನು ಪ್ರಚೋದಿಸುವ ಯತ್ನದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಪ್ರಯತ್ನಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಯೂಟ್ಯೂಬ್ ಚಾನೆಲ್ ಒಂದು  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿತ್ತು ಎಂದು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಶಹದಾರಾ) ಆರ್ ಸತ್ಯಸುಂದರಂ ನೀಡಿರುವ ವೀಡಿಯೊ ಹೇಳಿಕೆಯಲ್ಲಿ, “ಕೆಲವರು ಲೈಂಗಿಕ ದೌರ್ಜನ್ಯ ಘಟನೆಯ ಬಗ್ಗೆ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದರು. ಅವರು ಸಂತ್ರಸ್ತೆಯ ಗುರುತನ್ನು ಹಂಚಿಕೊಳ್ಳುತ್ತಿದ್ದರು. ಜೊತೆಗೆ ಘಟನೆಗೆ ಕೋಮುಬಣ್ಣ ನೀಡಲು ಪ್ರಯತ್ನಿಸುತ್ತಿದ್ದರು. ಇಂತಹ ವದಂತಿಗಳನ್ನು ಹರಡಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಗುರುತಿಸಿದ್ದೇವೆ. ಸುಳ್ಳು, ತಪ್ಪು ಮಾಹಿತಿ ಪ್ರಚಾರಕ್ಕಾಗಿ ಅವರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ಇನ್ನು ಅಪಹರಣ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 20 ವರ್ಷದ ಯುವತಿ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದು, ತನ್ನ ಕುಟುಂಬ ಮತ್ತು  ಮೂರು ವರ್ಷದ ಮಗನಿಂದ ದೂರವಾಗಿದ್ದಾರೆ. ಆಕೆ ತನ್ನ ಮಗುವನ್ನು ನೋಡಿಕೊಳ್ಳುವ ಮಾನಸಿಕ ಸ್ಥಿತಿಯಲ್ಲಿಲ್ಲ ಎಂದು ಆಕೆಯ ಕುಟುಂಬದವರು ಹೇಳುತ್ತಾರೆ.

ಕಳೆದ ಬುಧವಾರ (ಜ.26) ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಬಳಿಕ ಆಕೆಯ ನೆರೆಹೊರೆಯವರು ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು. ಈ ಬಗ್ಗೆ ದೆಹಲಿ ಮಹಿಳಾ ಆಯೋಗ ತಿಳಿಸಿತ್ತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ 14 ವರ್ಷದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಸಂತ್ರಸ್ತೆಯ ಸಹೋದರಿ ಹೇಳಿದ್ದಾರೆ.

ಬುಧವಾರ ಆಕೆಯ ಮೇಲೆ ನಡೆದ ದಾಳಿಯಲ್ಲಿ ಹೆಚ್ಚಾಗಿ ಮೃತ ಹುಡುಗನ ಕುಟುಂಬದ ಮಹಿಳೆಯರು ಮತ್ತು ಯುವಕರು ಸೇರಿದ್ದರು. ಇವರೆಲ್ಲಾ ಕಸ್ತೂರ್ಬಾ ನಗರದಲ್ಲಿ ಯುವತಿಯ ನೆರೆಹೊರೆಯವರು. ಸದ್ಯ ಪೊಲೀಸರು ನೆರೆಹೊರೆಯಿಂದ ಎಂಟು ಮಹಿಳೆಯರು ಮತ್ತು ನಾಲ್ವರು ಪುರುಷರನ್ನು (12 ಮಂದಿ) ಬಂಧಿಸಿದ್ದಾರೆ.

 

“ಯಾವುದೇ ಯುವತಿ, ಯಾವುದೇ ಮಗಳಿಗೂ ಇಂತಹ ಸ್ಥಿತಿ ಬರಬಾರದು. ಆಕೆಯ ಮೇಲೆ ಹಲ್ಲೆ ಮಾಡಿರುವ ರೀತಿ, ಆಕೆಯನ್ನು ತಪ್ಪಾಗಿ ತೋರಿಸಿದ್ದು, ಆಕೆಯನ್ನು ಆಘಾತಕ್ಕೆ ತಳ್ಳಿದ್ದು… ಓ ನನಗೆ ನ್ಯಾಯ ಸಿಗುವ ಬಗ್ಗೆ ನಂಬಿಕೆ ಇಲ್ಲ. ನನಗೆ ನನ್ನ ಮಗಳು ಮನೆಗೆ ಮರಳಬೇಕು ಅಷ್ಟೇ” ಎಂದು ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿರುವ ಸಂತ್ರಸ್ತ ಯುವತಿಯ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...