Homeಮುಖಪುಟದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿದ್ದ ನೆರೆಹೊರೆಯವರು ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು.

- Advertisement -
- Advertisement -

ಕಳೆದ ವಾರ ದೆಹಲಿಯಲ್ಲಿ 20 ವರ್ಷದ ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ತನ್ನ ನೆರೆಹೊರೆಯವರೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಮತ್ತೆ ಮೂವರು ಎಫ್‌ಐಆರ್‌ ದಾಖಲಾಗಿವೆ. ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡಿದವರ ವಿರುದ್ಧ ದೆಹಲಿಯ ಶಹದಾರಾ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವದಂತಿಗಳನನ್ನು ಹಬ್ಬಿದ್ದ ಪೋಸ್ಟ್‌ಗಳು ಹಿಂಸಾಚಾರವನ್ನು ಪ್ರಚೋದಿಸುವ ಯತ್ನದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಪ್ರಯತ್ನಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಯೂಟ್ಯೂಬ್ ಚಾನೆಲ್ ಒಂದು  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿತ್ತು ಎಂದು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಶಹದಾರಾ) ಆರ್ ಸತ್ಯಸುಂದರಂ ನೀಡಿರುವ ವೀಡಿಯೊ ಹೇಳಿಕೆಯಲ್ಲಿ, “ಕೆಲವರು ಲೈಂಗಿಕ ದೌರ್ಜನ್ಯ ಘಟನೆಯ ಬಗ್ಗೆ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದರು. ಅವರು ಸಂತ್ರಸ್ತೆಯ ಗುರುತನ್ನು ಹಂಚಿಕೊಳ್ಳುತ್ತಿದ್ದರು. ಜೊತೆಗೆ ಘಟನೆಗೆ ಕೋಮುಬಣ್ಣ ನೀಡಲು ಪ್ರಯತ್ನಿಸುತ್ತಿದ್ದರು. ಇಂತಹ ವದಂತಿಗಳನ್ನು ಹರಡಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಗುರುತಿಸಿದ್ದೇವೆ. ಸುಳ್ಳು, ತಪ್ಪು ಮಾಹಿತಿ ಪ್ರಚಾರಕ್ಕಾಗಿ ಅವರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ಇನ್ನು ಅಪಹರಣ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 20 ವರ್ಷದ ಯುವತಿ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದು, ತನ್ನ ಕುಟುಂಬ ಮತ್ತು  ಮೂರು ವರ್ಷದ ಮಗನಿಂದ ದೂರವಾಗಿದ್ದಾರೆ. ಆಕೆ ತನ್ನ ಮಗುವನ್ನು ನೋಡಿಕೊಳ್ಳುವ ಮಾನಸಿಕ ಸ್ಥಿತಿಯಲ್ಲಿಲ್ಲ ಎಂದು ಆಕೆಯ ಕುಟುಂಬದವರು ಹೇಳುತ್ತಾರೆ.

ಕಳೆದ ಬುಧವಾರ (ಜ.26) ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಬಳಿಕ ಆಕೆಯ ನೆರೆಹೊರೆಯವರು ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು. ಈ ಬಗ್ಗೆ ದೆಹಲಿ ಮಹಿಳಾ ಆಯೋಗ ತಿಳಿಸಿತ್ತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ 14 ವರ್ಷದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಸಂತ್ರಸ್ತೆಯ ಸಹೋದರಿ ಹೇಳಿದ್ದಾರೆ.

ಬುಧವಾರ ಆಕೆಯ ಮೇಲೆ ನಡೆದ ದಾಳಿಯಲ್ಲಿ ಹೆಚ್ಚಾಗಿ ಮೃತ ಹುಡುಗನ ಕುಟುಂಬದ ಮಹಿಳೆಯರು ಮತ್ತು ಯುವಕರು ಸೇರಿದ್ದರು. ಇವರೆಲ್ಲಾ ಕಸ್ತೂರ್ಬಾ ನಗರದಲ್ಲಿ ಯುವತಿಯ ನೆರೆಹೊರೆಯವರು. ಸದ್ಯ ಪೊಲೀಸರು ನೆರೆಹೊರೆಯಿಂದ ಎಂಟು ಮಹಿಳೆಯರು ಮತ್ತು ನಾಲ್ವರು ಪುರುಷರನ್ನು (12 ಮಂದಿ) ಬಂಧಿಸಿದ್ದಾರೆ.

 

“ಯಾವುದೇ ಯುವತಿ, ಯಾವುದೇ ಮಗಳಿಗೂ ಇಂತಹ ಸ್ಥಿತಿ ಬರಬಾರದು. ಆಕೆಯ ಮೇಲೆ ಹಲ್ಲೆ ಮಾಡಿರುವ ರೀತಿ, ಆಕೆಯನ್ನು ತಪ್ಪಾಗಿ ತೋರಿಸಿದ್ದು, ಆಕೆಯನ್ನು ಆಘಾತಕ್ಕೆ ತಳ್ಳಿದ್ದು… ಓ ನನಗೆ ನ್ಯಾಯ ಸಿಗುವ ಬಗ್ಗೆ ನಂಬಿಕೆ ಇಲ್ಲ. ನನಗೆ ನನ್ನ ಮಗಳು ಮನೆಗೆ ಮರಳಬೇಕು ಅಷ್ಟೇ” ಎಂದು ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿರುವ ಸಂತ್ರಸ್ತ ಯುವತಿಯ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....