Homeಮುಖಪುಟದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಆಕೆಯ ನೆರೆ ಹೊರೆಯವರೇ ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಹೀನ ಕೃತ್ಯ ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದಿದೆ.

ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ರತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿಹಾರ ಹಾಕಿ ಹರ್ಷೋದ್ಗಾರದ ನಡುವೆ ನೆರೆಹೊರೆಯವರು ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗ ಇಂದು ತಿಳಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ.

ಸಂತ್ರಸ್ತ ಯುವತಿಯನ್ನು ಭೇಟಿಯಾದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಸೂಕ್ತ ಕ್ರಮ ಮತ್ತು ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸುವಂತೆ ದೆಹಲಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

”ಕಸ್ತೂರಬಾ ನಗರದಲ್ಲಿ 20 ವರ್ಷದ ಯುವತಿ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಎಲ್ಲಾ ಆರೋಪಿ ಪುರುಷರು ಮತ್ತು ಮಹಿಳೆಯರನ್ನು ಬಂಧಿಸಬೇಕು. ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬಕ್ಕೆ ಭದ್ರತೆ ನೀಡಬೇಕು” ಎಂದು ವೀಡಿಯೊವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

“ಸಂತ್ರಸ್ತೆಯನ್ನು ಮನೆಯಿಂದ ಅಪಹರಿಸಿ, ಸ್ಥಳೀಯವಾಗಿ ಮದ್ಯ ಮತ್ತು ಮಾದಕವಸ್ತುಗಳ ಅಕ್ರಮ ವ್ಯಾಪಾರದಲ್ಲಿ ತೊಡಗಿರುವ 3 ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗುತ್ತಿರುವಾಗ, ಅಲ್ಲಿದ್ದ ಮಹಿಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಲು ಪುರುಷರನ್ನು ಪ್ರಚೋದಿಸುತ್ತಿದ್ದರು. ನಂತರ ಆಕೆಯನ್ನು ಅಮಾನುಷವಾಗಿ ಥಳಿಸಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿ ಮಾಡಿದ್ದಾರೆ ಎಂದು ಸಂತ್ರಸ್ತೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರಿಗೆ ತಿಳಿಸಿದ್ದಾರೆ” ಎಂದು ಮಹಿಳಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

“ಇದಲ್ಲದೆ, ಯುವತಿಗೆ ಭದ್ರತೆ ಒದಗಿಸಲು ಪೊಲೀಸರು ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಒದಗಿಸುವಂತೆ ದೆಹಲಿ ಪೊಲೀಸರನ್ನು ಕೇಳಿದೆ. ಇಡೀ ಘಟನೆಯ ಸಿಸಿಟಿವಿ ದೃಶ್ಯಗಳ ಜೊತೆಗೆ ಈ ವಿಷಯದಲ್ಲಿ ವಿವರವಾದ ಕ್ರಮ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ದೆಹಲಿ ಪೊಲೀಸರಿಗೆ 72 ಗಂಟೆಗಳ ಕಾಲಾವಕಾಶ ನೀಡಲಾಗಿದೆ” ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸಂತ್ರಸ್ತೆಯ ಸಹೋದರಿಯ ಪ್ರಕಾರ, ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತೆ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಹೇಳಿದ್ದಾರೆ.

“ನಿನ್ನೆ, ಕೆಲವು ಮಹಿಳೆಯರು ಮಹಿಳೆಯನ್ನು ಅಪಹರಿಸಿ, ಥಳಿಸಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ನಮಗೆ ಬಂದಿತ್ತು. ಸಂತ್ರಸ್ತೆಯನ್ನು ಆರೋಪಿಯ ಮನೆಯಿಂದ ರಕ್ಷಿಸಿದ್ದೇವೆ. ಸದ್ಯ ಸಂತ್ರಸ್ತೆಗೆ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ. ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಘಟನೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದು, “ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅಪರಾಧಿಗಳಿಗೆ ಇಷ್ಟೊಂದು ಧೈರ್ಯ ಬಂದಿದ್ದು ಹೇಗೆ..? ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸುತ್ತೇನೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ದೆಹಲಿಗರು ಇಂತಹ ಘೋರ ಅಪರಾಧ ಮತ್ತು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಈ ದುರ್ಘಟನೆ ಕಂಡನಾರ್ಹ. ಅಪರಾದಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...