Homeಮುಖಪುಟದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಆಕೆಯ ನೆರೆ ಹೊರೆಯವರೇ ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಹೀನ ಕೃತ್ಯ ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದಿದೆ.

ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ರತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿಹಾರ ಹಾಕಿ ಹರ್ಷೋದ್ಗಾರದ ನಡುವೆ ನೆರೆಹೊರೆಯವರು ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗ ಇಂದು ತಿಳಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ.

ಸಂತ್ರಸ್ತ ಯುವತಿಯನ್ನು ಭೇಟಿಯಾದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಸೂಕ್ತ ಕ್ರಮ ಮತ್ತು ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸುವಂತೆ ದೆಹಲಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

”ಕಸ್ತೂರಬಾ ನಗರದಲ್ಲಿ 20 ವರ್ಷದ ಯುವತಿ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಎಲ್ಲಾ ಆರೋಪಿ ಪುರುಷರು ಮತ್ತು ಮಹಿಳೆಯರನ್ನು ಬಂಧಿಸಬೇಕು. ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬಕ್ಕೆ ಭದ್ರತೆ ನೀಡಬೇಕು” ಎಂದು ವೀಡಿಯೊವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

“ಸಂತ್ರಸ್ತೆಯನ್ನು ಮನೆಯಿಂದ ಅಪಹರಿಸಿ, ಸ್ಥಳೀಯವಾಗಿ ಮದ್ಯ ಮತ್ತು ಮಾದಕವಸ್ತುಗಳ ಅಕ್ರಮ ವ್ಯಾಪಾರದಲ್ಲಿ ತೊಡಗಿರುವ 3 ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗುತ್ತಿರುವಾಗ, ಅಲ್ಲಿದ್ದ ಮಹಿಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಲು ಪುರುಷರನ್ನು ಪ್ರಚೋದಿಸುತ್ತಿದ್ದರು. ನಂತರ ಆಕೆಯನ್ನು ಅಮಾನುಷವಾಗಿ ಥಳಿಸಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿ ಮಾಡಿದ್ದಾರೆ ಎಂದು ಸಂತ್ರಸ್ತೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರಿಗೆ ತಿಳಿಸಿದ್ದಾರೆ” ಎಂದು ಮಹಿಳಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

“ಇದಲ್ಲದೆ, ಯುವತಿಗೆ ಭದ್ರತೆ ಒದಗಿಸಲು ಪೊಲೀಸರು ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಒದಗಿಸುವಂತೆ ದೆಹಲಿ ಪೊಲೀಸರನ್ನು ಕೇಳಿದೆ. ಇಡೀ ಘಟನೆಯ ಸಿಸಿಟಿವಿ ದೃಶ್ಯಗಳ ಜೊತೆಗೆ ಈ ವಿಷಯದಲ್ಲಿ ವಿವರವಾದ ಕ್ರಮ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ದೆಹಲಿ ಪೊಲೀಸರಿಗೆ 72 ಗಂಟೆಗಳ ಕಾಲಾವಕಾಶ ನೀಡಲಾಗಿದೆ” ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸಂತ್ರಸ್ತೆಯ ಸಹೋದರಿಯ ಪ್ರಕಾರ, ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತೆ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಹೇಳಿದ್ದಾರೆ.

“ನಿನ್ನೆ, ಕೆಲವು ಮಹಿಳೆಯರು ಮಹಿಳೆಯನ್ನು ಅಪಹರಿಸಿ, ಥಳಿಸಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ನಮಗೆ ಬಂದಿತ್ತು. ಸಂತ್ರಸ್ತೆಯನ್ನು ಆರೋಪಿಯ ಮನೆಯಿಂದ ರಕ್ಷಿಸಿದ್ದೇವೆ. ಸದ್ಯ ಸಂತ್ರಸ್ತೆಗೆ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ. ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಘಟನೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದು, “ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅಪರಾಧಿಗಳಿಗೆ ಇಷ್ಟೊಂದು ಧೈರ್ಯ ಬಂದಿದ್ದು ಹೇಗೆ..? ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸುತ್ತೇನೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ದೆಹಲಿಗರು ಇಂತಹ ಘೋರ ಅಪರಾಧ ಮತ್ತು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಈ ದುರ್ಘಟನೆ ಕಂಡನಾರ್ಹ. ಅಪರಾದಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...