Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....