Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...