Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...