Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...