Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...