Homeಮುಖಪುಟದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

- Advertisement -
- Advertisement -

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್‌ನನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.

ಶನಿವಾರ ಸಮನ್ಸ್ ಹೊರಡಿಸಿ, ಲೋಧಿ ಕಾಲೋನಿಯಲ್ಲಿರುವ ವಿಶೇಷ ಸೆಲ್‌ಗೆ ಭಾನುವಾರ ತನಿಖೆಗೆ ಹಾಜರಾಗುವಂತೆ ಉಮರ್ ಖಾಲಿದ್‌ಗೆ ನೋಟೀಸ್ ನೀಡಲಾಗಿತ್ತು. ಈ ಹಿಂದೆ ಜುಲೈ 31 ರಂದು ಆತನ ಫೋನ್ ವಶಪಡಿಸಿಕೊಂಡಾಗ ಆತನನ್ನು ವಿಚಾರಣೆಗೊಳಪಡಿಸಲಾಗಿತ್ತು. ಭಾನುವಾರ ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ಪೊಲೀಸರು ಆತನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಲೀದ್‌ನನ್ನು ಸೋಮವಾರ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮಾರ್ಚ್ 6 ರಂದು ಖಾಲಿದ್ ವಿರುದ್ಧ ಅಪರಾಧ ವಿಭಾಗದ ಮಾದಕವಸ್ತು ಘಟಕದ ಸಬ್ ಇನ್ಸ್‌ಪೆಕ್ಟರ್ ಅರವಿಂದ್ ಕುಮಾರ್ ಅವರಿಗೆ ಮಾಹಿತಿದಾರರು ನೀಡಿದ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಎಫ್‌ಐಆರ್ ಪ್ರಕಾರ, ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳು ಬೇರೆ ಬೇರೆ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದ ಪೂರ್ವನಿಯೋಜಿತ ಪಿತೂರಿಯ ಭಾಗವಾಗಿದೆ. ಇದರಲ್ಲಿ ಖಾಲಿದ್ಗೆ ಸಂಬಂಧವಿದೆ ಎಂದು ಮಾಹಿತಿದಾರರು ತಿಳಿಸಿದ್ದಾರೆ ಎಂಬುದಾಗಿ ಅರವಿಂದ್ ಕುಮಾರ್ ಹೇಳಿದ್ದಾರೆ.

“ಖಾಲಿದ್ ಬೇರೆ ಬೇರೆ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾನೆ. ಭಾರತದಲ್ಲಿ ಅಲ್ಪಸಂಖ್ಯಾತರು ಹೇಗೆ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂಬುದರ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿಯ ಸಂದರ್ಭದಲ್ಲಿ ಬೀದಿಗೆ ಬಂದು, ರಸ್ತೆಗಳನ್ನು ನಿರ್ಬಂಧಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದನು” ಎಂದು ಎಫ್‌ಐಆರ್ ದಾಖಲಾಗಿದೆ.

ಕಾರ್ಡಂಪುರಿ, ಜಾಫ್ರಾಬಾದ್, ಚಾಂದ್ ಬಾಗ್, ಗೋಕುಲ್ಪುರಿ, ಶಿವ ವಿಹಾರ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಮನೆಗಳಲ್ಲಿ, ಪಿತೂರಿಯ ಭಾಗವಾಗಿ ಬಂದೂಕುಗಳು, ಪೆಟ್ರೋಲ್ ಬಾಂಬುಗಳು, ಆಸಿಡ್ ಬಾಟಲಿಗಳು ಮತ್ತು ಕಲ್ಲುಗಳನ್ನು ಸಂಗ್ರಹಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ಅಮಾನತುಗೊಂಡ ಎಎಪಿ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧ ದೆಹಲಿ ಪೊಲೀಸ್ ಅಪರಾಧ ಶಾಖೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ, “ಗಲಭೆಗೆ ಒಂದು ತಿಂಗಳ ಹಿಂದೆಯೇ ಜನವರಿ 8 ರಂದು ಹುಸೇನ್ ಅವರು ‘ಯುನೈಟೆಡ್ ಎಗೇನ್ಸ್ಟ್ ಹೇಟ್’ ನ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿಯನ್ನು ಭೇಟಿಯಾದರು” ಎಂದು ಆರೋಪಿಸಲಾಗಿದೆ.

“ಖಾಲೀದ್ ವಿರುದ್ಧದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ಕಟ್ಟುಕಥೆ” ಎಂದು ಖಾಲಿದ್ ಅವರ ವಕೀಲ ತ್ರಿದೀಪ್ ಪೈಸ್ ಶನಿವಾರ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ತನಿಖೆಯು ಅನ್ಯಾಯದಿಂದ ಕೂಡಿದ್ದು, ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ದೇಶಾದ್ಯಂತದ ಹಲವಾರು ಗಣ್ಯರು ಆಗಸ್ಟ್ 25 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದರು.

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

ಇದನ್ನೂ ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ತಿಳಿದುಬಂದಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...