Homeಮುಖಪುಟದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

- Advertisement -
- Advertisement -

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್‌ನನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.

ಶನಿವಾರ ಸಮನ್ಸ್ ಹೊರಡಿಸಿ, ಲೋಧಿ ಕಾಲೋನಿಯಲ್ಲಿರುವ ವಿಶೇಷ ಸೆಲ್‌ಗೆ ಭಾನುವಾರ ತನಿಖೆಗೆ ಹಾಜರಾಗುವಂತೆ ಉಮರ್ ಖಾಲಿದ್‌ಗೆ ನೋಟೀಸ್ ನೀಡಲಾಗಿತ್ತು. ಈ ಹಿಂದೆ ಜುಲೈ 31 ರಂದು ಆತನ ಫೋನ್ ವಶಪಡಿಸಿಕೊಂಡಾಗ ಆತನನ್ನು ವಿಚಾರಣೆಗೊಳಪಡಿಸಲಾಗಿತ್ತು. ಭಾನುವಾರ ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ಪೊಲೀಸರು ಆತನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಲೀದ್‌ನನ್ನು ಸೋಮವಾರ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮಾರ್ಚ್ 6 ರಂದು ಖಾಲಿದ್ ವಿರುದ್ಧ ಅಪರಾಧ ವಿಭಾಗದ ಮಾದಕವಸ್ತು ಘಟಕದ ಸಬ್ ಇನ್ಸ್‌ಪೆಕ್ಟರ್ ಅರವಿಂದ್ ಕುಮಾರ್ ಅವರಿಗೆ ಮಾಹಿತಿದಾರರು ನೀಡಿದ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಎಫ್‌ಐಆರ್ ಪ್ರಕಾರ, ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳು ಬೇರೆ ಬೇರೆ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದ ಪೂರ್ವನಿಯೋಜಿತ ಪಿತೂರಿಯ ಭಾಗವಾಗಿದೆ. ಇದರಲ್ಲಿ ಖಾಲಿದ್ಗೆ ಸಂಬಂಧವಿದೆ ಎಂದು ಮಾಹಿತಿದಾರರು ತಿಳಿಸಿದ್ದಾರೆ ಎಂಬುದಾಗಿ ಅರವಿಂದ್ ಕುಮಾರ್ ಹೇಳಿದ್ದಾರೆ.

“ಖಾಲಿದ್ ಬೇರೆ ಬೇರೆ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾನೆ. ಭಾರತದಲ್ಲಿ ಅಲ್ಪಸಂಖ್ಯಾತರು ಹೇಗೆ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂಬುದರ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿಯ ಸಂದರ್ಭದಲ್ಲಿ ಬೀದಿಗೆ ಬಂದು, ರಸ್ತೆಗಳನ್ನು ನಿರ್ಬಂಧಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದನು” ಎಂದು ಎಫ್‌ಐಆರ್ ದಾಖಲಾಗಿದೆ.

ಕಾರ್ಡಂಪುರಿ, ಜಾಫ್ರಾಬಾದ್, ಚಾಂದ್ ಬಾಗ್, ಗೋಕುಲ್ಪುರಿ, ಶಿವ ವಿಹಾರ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಮನೆಗಳಲ್ಲಿ, ಪಿತೂರಿಯ ಭಾಗವಾಗಿ ಬಂದೂಕುಗಳು, ಪೆಟ್ರೋಲ್ ಬಾಂಬುಗಳು, ಆಸಿಡ್ ಬಾಟಲಿಗಳು ಮತ್ತು ಕಲ್ಲುಗಳನ್ನು ಸಂಗ್ರಹಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ಅಮಾನತುಗೊಂಡ ಎಎಪಿ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧ ದೆಹಲಿ ಪೊಲೀಸ್ ಅಪರಾಧ ಶಾಖೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ, “ಗಲಭೆಗೆ ಒಂದು ತಿಂಗಳ ಹಿಂದೆಯೇ ಜನವರಿ 8 ರಂದು ಹುಸೇನ್ ಅವರು ‘ಯುನೈಟೆಡ್ ಎಗೇನ್ಸ್ಟ್ ಹೇಟ್’ ನ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿಯನ್ನು ಭೇಟಿಯಾದರು” ಎಂದು ಆರೋಪಿಸಲಾಗಿದೆ.

“ಖಾಲೀದ್ ವಿರುದ್ಧದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ಕಟ್ಟುಕಥೆ” ಎಂದು ಖಾಲಿದ್ ಅವರ ವಕೀಲ ತ್ರಿದೀಪ್ ಪೈಸ್ ಶನಿವಾರ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ತನಿಖೆಯು ಅನ್ಯಾಯದಿಂದ ಕೂಡಿದ್ದು, ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ದೇಶಾದ್ಯಂತದ ಹಲವಾರು ಗಣ್ಯರು ಆಗಸ್ಟ್ 25 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದರು.

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

ಇದನ್ನೂ ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ತಿಳಿದುಬಂದಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...