Homeಮುಖಪುಟದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ದೆಹಲಿ ಗಲಭೆ ಪ್ರಕರಣ: ಮಾಜಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌‌ ಬಂಧನ

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

- Advertisement -
- Advertisement -

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್‌ನನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.

ಶನಿವಾರ ಸಮನ್ಸ್ ಹೊರಡಿಸಿ, ಲೋಧಿ ಕಾಲೋನಿಯಲ್ಲಿರುವ ವಿಶೇಷ ಸೆಲ್‌ಗೆ ಭಾನುವಾರ ತನಿಖೆಗೆ ಹಾಜರಾಗುವಂತೆ ಉಮರ್ ಖಾಲಿದ್‌ಗೆ ನೋಟೀಸ್ ನೀಡಲಾಗಿತ್ತು. ಈ ಹಿಂದೆ ಜುಲೈ 31 ರಂದು ಆತನ ಫೋನ್ ವಶಪಡಿಸಿಕೊಂಡಾಗ ಆತನನ್ನು ವಿಚಾರಣೆಗೊಳಪಡಿಸಲಾಗಿತ್ತು. ಭಾನುವಾರ ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ಪೊಲೀಸರು ಆತನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಲೀದ್‌ನನ್ನು ಸೋಮವಾರ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮಾರ್ಚ್ 6 ರಂದು ಖಾಲಿದ್ ವಿರುದ್ಧ ಅಪರಾಧ ವಿಭಾಗದ ಮಾದಕವಸ್ತು ಘಟಕದ ಸಬ್ ಇನ್ಸ್‌ಪೆಕ್ಟರ್ ಅರವಿಂದ್ ಕುಮಾರ್ ಅವರಿಗೆ ಮಾಹಿತಿದಾರರು ನೀಡಿದ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಎಫ್‌ಐಆರ್ ಪ್ರಕಾರ, ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳು ಬೇರೆ ಬೇರೆ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದ ಪೂರ್ವನಿಯೋಜಿತ ಪಿತೂರಿಯ ಭಾಗವಾಗಿದೆ. ಇದರಲ್ಲಿ ಖಾಲಿದ್ಗೆ ಸಂಬಂಧವಿದೆ ಎಂದು ಮಾಹಿತಿದಾರರು ತಿಳಿಸಿದ್ದಾರೆ ಎಂಬುದಾಗಿ ಅರವಿಂದ್ ಕುಮಾರ್ ಹೇಳಿದ್ದಾರೆ.

“ಖಾಲಿದ್ ಬೇರೆ ಬೇರೆ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾನೆ. ಭಾರತದಲ್ಲಿ ಅಲ್ಪಸಂಖ್ಯಾತರು ಹೇಗೆ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂಬುದರ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿಯ ಸಂದರ್ಭದಲ್ಲಿ ಬೀದಿಗೆ ಬಂದು, ರಸ್ತೆಗಳನ್ನು ನಿರ್ಬಂಧಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದನು” ಎಂದು ಎಫ್‌ಐಆರ್ ದಾಖಲಾಗಿದೆ.

ಕಾರ್ಡಂಪುರಿ, ಜಾಫ್ರಾಬಾದ್, ಚಾಂದ್ ಬಾಗ್, ಗೋಕುಲ್ಪುರಿ, ಶಿವ ವಿಹಾರ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಮನೆಗಳಲ್ಲಿ, ಪಿತೂರಿಯ ಭಾಗವಾಗಿ ಬಂದೂಕುಗಳು, ಪೆಟ್ರೋಲ್ ಬಾಂಬುಗಳು, ಆಸಿಡ್ ಬಾಟಲಿಗಳು ಮತ್ತು ಕಲ್ಲುಗಳನ್ನು ಸಂಗ್ರಹಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ಅಮಾನತುಗೊಂಡ ಎಎಪಿ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧ ದೆಹಲಿ ಪೊಲೀಸ್ ಅಪರಾಧ ಶಾಖೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ, “ಗಲಭೆಗೆ ಒಂದು ತಿಂಗಳ ಹಿಂದೆಯೇ ಜನವರಿ 8 ರಂದು ಹುಸೇನ್ ಅವರು ‘ಯುನೈಟೆಡ್ ಎಗೇನ್ಸ್ಟ್ ಹೇಟ್’ ನ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿಯನ್ನು ಭೇಟಿಯಾದರು” ಎಂದು ಆರೋಪಿಸಲಾಗಿದೆ.

“ಖಾಲೀದ್ ವಿರುದ್ಧದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ಕಟ್ಟುಕಥೆ” ಎಂದು ಖಾಲಿದ್ ಅವರ ವಕೀಲ ತ್ರಿದೀಪ್ ಪೈಸ್ ಶನಿವಾರ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ತನಿಖೆಯು ಅನ್ಯಾಯದಿಂದ ಕೂಡಿದ್ದು, ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ದೇಶಾದ್ಯಂತದ ಹಲವಾರು ಗಣ್ಯರು ಆಗಸ್ಟ್ 25 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದರು.

ಅದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು, ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿತ್ತು.

ಇದನ್ನೂ ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ತಿಳಿದುಬಂದಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...