Homeಮುಖಪುಟದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ

ದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾದ ಮೊದಲ ವ್ಯಕ್ತಿ ದಿನೇಶ್ ಯಾದವ್

- Advertisement -
- Advertisement -

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಒಬ್ಬರನ್ನು ಅಪರಾಧಿ ಎಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ. ಅಪರಾಧಿ ದಿನೇಶ್ ಯಾದವ್‌ಗೆ ದೆಹಲಿ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಐದು ವರ್ಷ ಜೈಲು ಶಿಕ್ಷೆ ಜೊತೆಗೆ 12,000 ರೂಪಾಯಿ ದಂಡವನ್ನು ಪಾವತಿಸಬೇಕು ಎಂದು ಅವರ ವಕೀಲ ಶಿಖಾ ಗಾರ್ಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ದೆಹಲಿ ಗಲಭೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾದ ಮೊದಲ ವ್ಯಕ್ತಿ ದಿನೇಶ್ ಯಾದವ್. ಆತನಿಗೆ ಶಿಕ್ಷೆಯ ವಿವರವಾದ ಆದೇಶವನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಅಕ್ರಮ ಸಭೆ, ಗಲಭೆ ಮತ್ತು 73 ವರ್ಷದ ವೃದ್ಧೆಯ ಮನೆಯನ್ನು ದರೋಡೆ ಮಾಡಿ ಸುಟ್ಟು ಹಾಕುವಲ್ಲಿ ಭಾಗವಹಿಸಿದ್ದಕ್ಕಾಗಿ ದಿನೇಶ್ ಯಾದವ್ ಅವರನ್ನು ಕಳೆದ ತಿಂಗಳು ದೋಷಿ ಎಂದು ಘೋಷಿಸಲಾಗಿತ್ತು. ಇತನ ಅಪರಾಧಗಳಿಗೆ ಗರಿಷ್ಠ ಶಿಕ್ಷೆ 10 ವರ್ಷ ಜೈಲು.

ಇದನ್ನೂ ಓದಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದಿನೇಶ್ ಯಾದವ್ “ಗಲಭೆಯ ಗುಂಪಿನ ಸಕ್ರಿಯ ಸದಸ್ಯ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿರುವ ಭಾಗೀರಥಿ ವಿಹಾರ್‌ನಲ್ಲಿರುವ ಮಹಿಳೆಯ ಮನೆಯನ್ನು ಧ್ವಂಸಗೊಳಿಸಿ ಸುಟ್ಟುಹಾಕುವಲ್ಲಿ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿತ್ತು.

ಸುಮಾರು 150 ರಿಂದ 200 ಗಲಭೆಕೋರರ ಗುಂಪು ಫೆಬ್ರವರಿ 25 ರಂದು ತನ್ನ ಕುಟುಂಬವು ಇಲ್ಲದಿದ್ದಾಗ ತನ್ನ ಮನೆಯ ಮೇಲೆ ದಾಳಿ ಮಾಡಿ ಹಲವಾರು ಬೆಲೆಬಾಳುವ ವಸ್ತುಗಳನ್ನು ದೋಚಿದೆ ಎಂದು ವೃದ್ಧೆ ಮನೋರಿ ದೂರಿದ್ದರು.

ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯವು ಇಬ್ಬರು ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಪ್ರಮುಖವಾಗಿ ಪರಿಗಣಿಸಿತ್ತು. ಮನೋರಿ ಅವರ ಮನೆಯ ಮೇಲೆ ದಾಳಿ ಮಾಡಿದ ಗುಂಪಿನಲ್ಲಿ ದಿನೇಶ್ ಯಾದವ್ ಇದ್ದರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿಗಳು ಸ್ವತಃ ಮನೆಯನ್ನು ಸುಟ್ಟುಹಾಕುತ್ತಿರುವುದು ಕಂಡುಬಂದಿಲ್ಲ. ಆದರೂ, ಯಾದವ್ ಗಲಭೆ ಗುಂಪಿನ ಭಾಗವಾಗಿರುವುದರಿಂದ ಅವರು ಮನೆಯನ್ನು ಸುಟ್ಟುಹಾಕಿದವರಷ್ಟೇ ಜವಾಬ್ದಾರರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಇತ್ತ, ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ, ಗೋಕುಲಪುರಿ ಪ್ರದೇಶದಲ್ಲಿ ಅಂಗಡಿಯನ್ನು ಧ್ವಂಸಗೊಳಿಸಿದ ಮತ್ತು ಬೆಂಕಿ ಹಚ್ಚಿದ ಆರೋಪದಲ್ಲಿ ಆರು ಮಂದಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 24 ರಂದು ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ದೆಹಲಿಯಲ್ಲಿ ಕೋಮು ಘರ್ಷಣೆಗಳು ಪ್ರಾರಂಭವಾಗಿದ್ದವು. ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿ, ಸುಮಾರು 700 ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...