Homeಮುಖಪುಟದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ

ದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾದ ಮೊದಲ ವ್ಯಕ್ತಿ ದಿನೇಶ್ ಯಾದವ್

- Advertisement -
- Advertisement -

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಒಬ್ಬರನ್ನು ಅಪರಾಧಿ ಎಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ. ಅಪರಾಧಿ ದಿನೇಶ್ ಯಾದವ್‌ಗೆ ದೆಹಲಿ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಐದು ವರ್ಷ ಜೈಲು ಶಿಕ್ಷೆ ಜೊತೆಗೆ 12,000 ರೂಪಾಯಿ ದಂಡವನ್ನು ಪಾವತಿಸಬೇಕು ಎಂದು ಅವರ ವಕೀಲ ಶಿಖಾ ಗಾರ್ಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ದೆಹಲಿ ಗಲಭೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾದ ಮೊದಲ ವ್ಯಕ್ತಿ ದಿನೇಶ್ ಯಾದವ್. ಆತನಿಗೆ ಶಿಕ್ಷೆಯ ವಿವರವಾದ ಆದೇಶವನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಅಕ್ರಮ ಸಭೆ, ಗಲಭೆ ಮತ್ತು 73 ವರ್ಷದ ವೃದ್ಧೆಯ ಮನೆಯನ್ನು ದರೋಡೆ ಮಾಡಿ ಸುಟ್ಟು ಹಾಕುವಲ್ಲಿ ಭಾಗವಹಿಸಿದ್ದಕ್ಕಾಗಿ ದಿನೇಶ್ ಯಾದವ್ ಅವರನ್ನು ಕಳೆದ ತಿಂಗಳು ದೋಷಿ ಎಂದು ಘೋಷಿಸಲಾಗಿತ್ತು. ಇತನ ಅಪರಾಧಗಳಿಗೆ ಗರಿಷ್ಠ ಶಿಕ್ಷೆ 10 ವರ್ಷ ಜೈಲು.

ಇದನ್ನೂ ಓದಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದಿನೇಶ್ ಯಾದವ್ “ಗಲಭೆಯ ಗುಂಪಿನ ಸಕ್ರಿಯ ಸದಸ್ಯ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿರುವ ಭಾಗೀರಥಿ ವಿಹಾರ್‌ನಲ್ಲಿರುವ ಮಹಿಳೆಯ ಮನೆಯನ್ನು ಧ್ವಂಸಗೊಳಿಸಿ ಸುಟ್ಟುಹಾಕುವಲ್ಲಿ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿತ್ತು.

ಸುಮಾರು 150 ರಿಂದ 200 ಗಲಭೆಕೋರರ ಗುಂಪು ಫೆಬ್ರವರಿ 25 ರಂದು ತನ್ನ ಕುಟುಂಬವು ಇಲ್ಲದಿದ್ದಾಗ ತನ್ನ ಮನೆಯ ಮೇಲೆ ದಾಳಿ ಮಾಡಿ ಹಲವಾರು ಬೆಲೆಬಾಳುವ ವಸ್ತುಗಳನ್ನು ದೋಚಿದೆ ಎಂದು ವೃದ್ಧೆ ಮನೋರಿ ದೂರಿದ್ದರು.

ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯವು ಇಬ್ಬರು ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಪ್ರಮುಖವಾಗಿ ಪರಿಗಣಿಸಿತ್ತು. ಮನೋರಿ ಅವರ ಮನೆಯ ಮೇಲೆ ದಾಳಿ ಮಾಡಿದ ಗುಂಪಿನಲ್ಲಿ ದಿನೇಶ್ ಯಾದವ್ ಇದ್ದರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿಗಳು ಸ್ವತಃ ಮನೆಯನ್ನು ಸುಟ್ಟುಹಾಕುತ್ತಿರುವುದು ಕಂಡುಬಂದಿಲ್ಲ. ಆದರೂ, ಯಾದವ್ ಗಲಭೆ ಗುಂಪಿನ ಭಾಗವಾಗಿರುವುದರಿಂದ ಅವರು ಮನೆಯನ್ನು ಸುಟ್ಟುಹಾಕಿದವರಷ್ಟೇ ಜವಾಬ್ದಾರರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಇತ್ತ, ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ, ಗೋಕುಲಪುರಿ ಪ್ರದೇಶದಲ್ಲಿ ಅಂಗಡಿಯನ್ನು ಧ್ವಂಸಗೊಳಿಸಿದ ಮತ್ತು ಬೆಂಕಿ ಹಚ್ಚಿದ ಆರೋಪದಲ್ಲಿ ಆರು ಮಂದಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 24 ರಂದು ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ದೆಹಲಿಯಲ್ಲಿ ಕೋಮು ಘರ್ಷಣೆಗಳು ಪ್ರಾರಂಭವಾಗಿದ್ದವು. ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿ, ಸುಮಾರು 700 ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...