Homeಮುಖಪುಟದೆಹಲಿ ಗಲಭೆ: ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ ಮತ್ತೆ ಬಂಧನ

ದೆಹಲಿ ಗಲಭೆ: ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ ಮತ್ತೆ ಬಂಧನ

ಈ ಹಿಂದೆ, ಜನವರಿ 28ರಂದು ಶಾರ್ಜೀಲ್ ಇಮಾಮ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದ ಪೊಲೀಸರು, ಬಿಹಾರದ ಜಹಾನಾಬಾದ್‌ನಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌‌ರನ್ನು ದೆಹಲಿ ಪೋಲೀಸ್ ವಿಶೇ‍ಷ ವಿಭಾಗವು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆಯ ಕಾಯ್ದೆಯ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈಗಾಗಲೇ ಅಸ್ಸಾಂ ಅನ್ನು ಭಾರತದಿಂದ ಬೇರ್ಪಡಿಸುವುದಾಗಿ  ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕಸ್ಟಡಿಯಲ್ಲಿರುವ ಅವರನ್ನು ಅಸ್ಸಾಂನಿಂದ ದೆಹಲಿಗೆ ಕರೆತರಲಾಗಿದೆ.

ಈ ಹಿಂದೆ, ಜನವರಿ 28ರಂದು ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಾ ಕಾರಣಕ್ಕೆ ಶಾರ್ಜೀಲ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದ ಪೊಲೀಸರು, ಬಿಹಾರದ ಜಹಾನಾಬಾದ್‌ನಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ಪ್ರಸ್ತುತ, ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾರ್ಜೀಲ್ ಆರೋಪಿಯಾಗಿದ್ದು, ಅಸ್ಸಾಂ ಪೊಲೀಸರು UAPA ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹಲವಾರು ಸ್ಥಳಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಶಾರ್ಜೀಲ್ ಅವರ ಪ್ರಚೋದನಾಕಾರಿ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ದೆಹಲಿ ಪೊಲೀಸರು ಜುಲೈ 25 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸೆಕ್ಷನ್ 124 ಎ (ದೇಶದ್ರೋಹ), 153 (ಎ) (ದ್ವೇಷವನ್ನು ಹರಡುವುದು), 153 (ದ್ವೇಷವನ್ನು ಉತ್ತೇಜಿಸುವುದು, ವಿವಿಧ ಸಮುದಾಯಗಳ ನಡುವೆ ದ್ವೇಷ ಹರಡುವುದು), 505 (ವದಂತಿಗಳನ್ನು ಹರಡುವುದು) ಸೇರಿದಂತೆ ಐಪಿಸಿ ಅಡಿಯಲ್ಲಿ 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಐಐಟಿ ಮುಂಬೈನ ಹಳೆಯ ವಿದ್ಯಾರ್ಥಿ, ಮಾಜಿ ಜನತಾದಳ (ಯುನೈಟೆಡ್) ನಾಯಕರಾಗಿದ್ದ, ದಿವಂಗತ ಅಕ್ಬರ್ ಇಮಾಮ್ ಅವರ ಪುತ್ರನಾದ ಶಾರ್ಜೀಲ್‌ 2017 ರಲ್ಲಿ, ಸಂಶೋಧನಾ ವಿದ್ಯಾರ್ಥಿಯಾಗಿ ಜೆಎನ್‌ಯುನ ಆಧುನಿಕ ಇತಿಹಾಸ ವಿಭಾಗಕ್ಕೆ ಸೇರಿದ್ದರು.


ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...