Homeಮುಖಪುಟ2020ರ ದೆಹಲಿ ದಂಗೆಗಳು: ಇಂದಿಗೂ ಕಾಡುತ್ತಿರುವ ಪ್ರಶ್ನೆಗಳು

2020ರ ದೆಹಲಿ ದಂಗೆಗಳು: ಇಂದಿಗೂ ಕಾಡುತ್ತಿರುವ ಪ್ರಶ್ನೆಗಳು

- Advertisement -
- Advertisement -

1984ರಲ್ಲಿ ಸಿಖ್ಖರ ಮಾರಣಹೋಮದ ನಂತರ ಒಂದು ವರದಿ ಬಿಡುಗಡೆಯಾಗಿತ್ತು. ಮಾನವ ಹಕ್ಕುಗಳ ಸಂಘಟನೆಗಳಾದ ಪೀಪಲ್ಸ್ ಯುನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಮತ್ತು ಪೀಪಲ್ಸ್ ಯುನಿಯನ್ ಫಾರ್ ಡೆಮಕ್ರಟಿಕ್ ರೈಟ್ಸ್ (ಪಿಯುಡಿಆರ್)ಗಳ ಜಂಟಿ ಪ್ರಯತ್ನದಿಂದ ಬಿಡುಗಡೆಯಾದ ಈ ವರದಿಯು ದೆಹಲಿಯಲ್ಲಿ ಆದ ಮಾರಣಹೋಮದ ವಾಸ್ತವವನ್ನು ದೇಶದ ಮುಂದಿಟ್ಟಿತ್ತು; ಆದರೆ, ಅದನ್ನು ಅಂದು ಆಡಳಿತದಲ್ಲಿದ್ದ ಶಕ್ತಿಗಳು ಮುಚ್ಚಿಹಾಕಲು ಪ್ರಯತ್ನಿಸಿದ್ದವು. ಕುಲದೀಪ್ ನಯ್ಯರ್, ರಜನಿ ಕೋಠಾರಿ ಹಾಗೂ ಗೋವಿಂದಾ ಮುಖೋಟಿ ಮುಂತಾದ ನಾಗರಿಕರು ರಿಸ್ಕ್ ತೆಗೆದುಕೊಂಡು, ಹಿಂಸೆಗೆ ಬಲಿಯಾದ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದ್ದರು ಹಾಗೂ ಈ ಹಿಂಸಾಚಾರಕ್ಕೆ ಕಾರಣವಾದ ಜನರನ್ನು ಹೆಸರಿಸಿದ್ದರು. ಈ ಐತಿಹಾಸಿಕ ದಾಖಲೆಯ ಕಾರಣದಿಂದ ಇಂದಿಗೂ ಆ ಸಮಯದ ದೊಡ್ಡದೊಡ್ಡ ನಾಯಕರನ್ನು ಮಾರಣಹೋಮದ ಅಪರಾಧಿ ಎಂದು ಪರಿಗಣಿಸಲು ಸಾಧ್ಯವಾತ್ತಿದೆ. ಯಾವ ಸತ್ಯವನ್ನು ಕೋರ್ಟು ಕಚೇರಿಗಳು ಹಾಗೂ ನ್ಯಾಯಾಂಗದ ಆಯೋಗಗಳಿಗೆ ಹೇಳಲು ಸಾಧ್ಯವಾಗಲಿಲ್ಲವೋ, ನಾಗರಿಕರಿಂದಲೇ ರಚಿಸಲಾದ ಈ ವರದಿಯು ಅದನ್ನು ದೇಶದ ಮುಂದಿಟ್ಟಿತು.

ಅದೇ ಪರಂಪರೆಯಲ್ಲಿ ಇತ್ತೀಚಿಗೆ ಇನ್ನೊಂದು ವರದಿಯನ್ನು ಸಾರ್ವಜನಿಕಗೊಳಿಸಲಾಗಿದೆ. ಈ ವರದಿಯ ವಿಷಯ; 2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ಆದ ಗಲಭೆಗಳು. ಈ ಗಲಭೆಗಳನ್ನು 1984ರ ವ್ಯಾಪಕ ಮಾರಣಹೋಮದೊದೊಂದಿಗೆ ಹೋಲಿಕೆ ಮಾಡಲು ಆಗುವುದಿಲ್ಲ. ಈ ಬಾರಿ ಹಿಂಸಾಚಾರ ಹಿಂದೂ ಮತ್ತು ಮುಸ್ಲಿಂ ಇಬ್ಬರ ಕಡೆಯಿಂದಲೂ ಆಗಿತ್ತು. ಹಿಂಸಾಚಾರದಲ್ಲಿ ಪ್ರಾಣ ತೆತ್ತವರಲ್ಲಿ ಎರಡೂ ಸಮುದಾಯವದರಿದ್ದರು. ವಾಸ್ತವವೇನೆಂದರೆ ಸರಕಾರಿ ಅಫಿಡವಿಟ್‌ಗಳ ಪ್ರಕಾರ, ಈ ಗಲಭೆಗಳಲ್ಲಿ ಮೃತಪಟ್ಟ 53 ವ್ಯಕ್ತಿಗಳಲ್ಲಿ 40 ಜನ ಮುಸ್ಲಿಮರಿದ್ದರು, ಗಾಯಗೊಂಡವರಲ್ಲಿ ಹೆಚ್ಚಿನವರು ಹಾಗೂ ಮನೆ ಮತ್ತು ಅಂಗಡಿಗಳು ಹಾನಿಗೊಳಗಾಗಿ ಸಮಸ್ಯೆ ಅನುಭವಿಸಿದವರಲ್ಲಿ ಮುಕ್ಕಾಲು ಭಾಗ ಜನರು ಮುಸಲ್ಮಾರಾಗಿದ್ದರು. ಅಂದರೆ ಹಿಂಸೆಯು ಹೆಚ್ಚುಕಡಿಮೆ ಏಕಪಕ್ಷೀಯವಾಗುತ್ತು. ವಿಪರ್ಯಾಸವೇನೆಂದರೆ, ಈ ಹಿಂಸೆಯ ಆರೋಪದಲ್ಲಿ ಬಂಧಿತರಾದ ಜನರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ದೆಹಲಿ ಗಲಭೆಗಳ ಬಗ್ಗೆ ಈ ಸತ್ಯವನ್ನು ದೇಶದ ಮುಂದಿಡುತ್ತ ಇತ್ತೀಚಿಗೆ ಒಂದು ವರದಿಯನ್ನು ಪ್ರಕಟಿಸಲಾಗಿದೆ. ದೇಶದ ಮಾಜಿ ಆಡಳಿತ ಅಧಿಕಾರಗಳ ಸಂಘಟನೆಯಾದ ಕಾನ್ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್‌ನಿಂದ ಪ್ರಾಯೋಜಿಸಲಾದ ಈ ಸ್ವತಂತ್ರ ವರದಿಯನ್ನು ದೇಶದ ಹೆಸರಾಂತ ಮಾಜಿ ನ್ಯಾಯಾಧೀಶರು ಬರೆದಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಮದನ್ ಲೋಕುರ್, ದೆಹಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಎ.ಪಿ. ಶಾ, ದೆಹಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಆರ್ ಎಸ್ ಸೋಧಿ, ಪಟ್ನಾ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಹಾಗೂ ದೇಶದ ಮಾಜಿ ಗೃಹ ಸಚಿವ ಜಿ ಕೆ ಪಿಳ್ಳೈ ಅವರುಗಳು ಬರೆದ ‘ಅನ್‌ಸರ್ಟನ್ ಟೈಮ್ಸ್: ಅ ಸಿಟಿಜನ್ ಕಮಿಟಿ ರಿಪೋರ್ಟ್ ಆನ್ ದ ನಾರ್ತ್ ಈಸ್ಟ್ ದೆಹಲಿ ವಾಯಲೆನ್ಸ್ 2020’ ಎಂಬ ಈ ವರದಿಯು ಈ ಗಲಭೆಗಳ ಸತ್ಯವನ್ನು ನಿಷ್ಪಕ್ಷಪಾತದಿಂದ ತನಿಖೆ ನಡೆಸಿ ದೇಶದ ಮುಂದೆ ಇರಿಸಿದೆ.

ದೆಹಲಿಯಲ್ಲಿ ಆದ ಹಿಂಸಾಚಾರದ ಮೊದಲಿನ ಮತ್ತು ನಂತರದ ಎಲ್ಲಾ ಘಟನಾಕ್ರಮಗಳನ್ನು ಸೂಕ್ಷ್ಮವಾಗಿ ತೆರೆದಿಟ್ಟಿರುವ ಈ ವರದಿಯು ನಮ್ಮ ಎದುರಿಗೆ ಹಲವು ಕಷ್ಟಕರವಾದ ಪ್ರಶ್ನೆಗಳನ್ನು ಇಡುತ್ತದೆ. ಮೊಟ್ಟಮೊದಲನೆಯದಾಗಿ, ಈ ವರದಿಯು ದೆಹಲಿಯಲ್ಲಿ ಆದ ಹಿಂಸಾಚಾರವು ಯಾವುದೇ ಒಂದು ಕಾಕತಾಳೀಯ ಅಥವಾ ಆಕಸ್ಮಿಕವಾದ ದುರ್ಘಟನೆ ಅಲ್ಲ ಎಂಬುದನ್ನು ಸ್ಪಷ್ಟಗೊಳಿಸುತ್ತದೆ. ದೀರ್ಘ ಕಾಲದಿಂದ ದ್ವೇಷದ ಹಿನ್ನೆಲೆಯನ್ನು ಸೃಷ್ಟಿಗೊಳಿಸಲಾಗುತ್ತಿತ್ತು. ಪೌರತ್ವ ಕಾಯಿದೆಯ ತಿದ್ದುಪಡಿಯ ವಿರುದ್ಧ ನಡೆದ ಆಂದೋಲನದ ಸಮಯದಲ್ಲಿ ಮುಖಂಡರು, ಟಿವಿ ಚಾನಲ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳು ಬಹಿರಂಗವಾಗಿ ಮುಸ್ಲಿಮರ ವಿರುದ್ಧ ದ್ವೇಷವನ್ನು ಪ್ರಚಾರ ಮಾಡಿದವು ಹಾಗೂ ಶಾಹೀನ್ ಬಾಗ್‌ನಂತಹ ಪ್ರತಿಭಟನೆಯ ಪ್ರದರ್ಶನಗಳನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸಿದವು ಎಂದು ಈ ವರದಿಯು ಹೇಳುತ್ತದೆ. ಬಿಜೆಪಿಯ ನಾಯಕರು ದೆಹಲಿಯ ಚುನಾವಣೆಯ ಸಮಯದಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದರು, ಅದರಿಂದ ಹಿಂಸೆಯ ವಾತಾವರಣ ಸೃಷ್ಟಿಯಾಯಿತು. ಪ್ರಶ್ನೆ ಏನೆಂದರೆ, ಈ ಎಲ್ಲ ಮಾಹಿತಿ ಲಭ್ಯವಿದ್ದರೂ, ಪೊಲೀಸ್, ಆಡಳಿತ, ಚುನಾವಣಾ ಆಯೋಗ ಮತ್ತು ಮಾಧ್ಯಮಗಳನ್ನು ನಿಯಂತ್ರಿಸುವ ಸಂಸ್ಥೆಗಳು ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಏಕೆ ಕೈಗೊಳ್ಳಲಿಲ್ಲ?

ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌ | Naanu Gauri

ಎರಡನೆಯ ಪ್ರಶ್ನೆ, ದೆಹಲಿ ಪೊಲೀಸರ ಪಾತ್ರದ ಬಗ್ಗೆ. ಹಿಂಸೆಯ ಎಲ್ಲಾ ಮುನ್ಸೂಚನೆಗಳು ಕಂಡುಬಂದಿದ್ದರೂ ಹಾಗೂ ಇದಕ್ಕೆ ಸಂಬಂಧಿಸಿದ ಗುಪ್ತಚರ ವರದಿ ತಮಗೆ ಸಿಕ್ಕಿದ್ದರೂ, ದೆಹಲಿಯ ಪೊಲೀಸ್ ಈ ಗಲಭೆಗಳನ್ನು ತಡೆಯುವ ಪರಿಣಾಮಕಾರಿ ವ್ಯವಸ್ಥೆ ಏಕೆ ಮಾಡಲಿಲ್ಲ? ಗಲಭೆಗಳು ಶುರುವಾದ ನಂತರವೂ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸ್ ಬಲವನ್ನು ಏಕೆ ನಿಯೋಜಿಸಲಿಲ್ಲ? ಕರ್ಫ್ಯೂ ವಿಧಿಸುವುದಕ್ಕೆ ಎರಡು ದಿನಗಳ ತಡ ಏಕೆ ಆಯಿತು? ಹಿಂಸಾಚಾರದ ಸಮಯದಲ್ಲಿ ಅನೇಕ ಜಾಗಗಳಲ್ಲಿ ಗಲಭೆಕೋರರ ಜೊತೆಗೆ ಪೊಲೀಸರು ಏಕೆ ಕಾಣಿಸಿಕೊಂಡಿದ್ದರು?

ಮೂರನೆಯ ಪ್ರಶ್ನೆ, ದೆಹಲಿಯ ಆಮ್ ಆದ್ಮಿ ಪಕ್ಷದ ಸರಕಾರವನ್ನು ಕಟಕಟೆಯಲ್ಲಿ ತಂದು ನಿಲ್ಲಿಸುತ್ತದೆ. ಹಿಂಸೆಯಲ್ಲಿ ಬಲಿಯಾದ ಜನರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಮತ್ತು ತಕ್ಷಣದಲ್ಲಿ ಪರಿಹಾರ ನೀಡುವುದರಲ್ಲಿ ನಿರ್ಲಕ್ಷೆ ತೋರಿದ್ದು ಏಕೆ? ತಮ್ಮ ಮನೆಗಳಿಂದ ಹೊರದೂಡಲಾದ ಜನರಿಗಾಗಿ ನಿರ್ಮಿಸಲಾದ ರಿಲೀಫ್ ಕ್ಯಾಂಪ್‌ಗಳನ್ನು ಅಷ್ಟು ತುರಾತುರಿಯಲ್ಲಿ ಏಕೆ ಮುಚ್ಚಲಾಯಿತು? ಹಿಂಸಾಚಾರಕ್ಕೆ ಮತ್ತು ಬೆಂಕಿಕೆ ಬಲಿಯಾದ ಜನರಿಗೆ ಪರಿಹಾರ ನೀಡುವುದರಲ್ಲಿ ರೆಡ್ ಟೇಪಿಸಂ ಅಂದರೆ ಅಷ್ಟು ಸಾಂಸ್ಥಿಕ ವಿಳಂಬ ಆದದ್ದು ಏಕೆ?

ನಾಲ್ಕನೆಯ ಪ್ರಶ್ನೆ ನಮ್ಮ ನ್ಯಾಯ ವ್ಯವಸ್ಥೆಯ ಬಗ್ಗೆ ಚಿಂತಿಸುವಂತೆ ಮಾಡುತ್ತದೆ. ದೆಹಲಿಯ ಗಲಭೆಗಳ ನಂತರ 756 ಎಫ್‌ಐಆರ್‌ಗಳನ್ನು ದಾಖಲಿಸಲಾಯಿತು. ಈ ಎಲ್ಲಾ ಎಫ್‌ಐಆರ್‌ಗಳನ್ನು ಹಾಗೂ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ ನಮ್ಮ ನ್ಯಾಯ ವ್ಯವಸ್ಥೆಯ ಬಗ್ಗೆ ಈ ವರದಿಯು ನೀಡುವ ಚಿತ್ರಣವು ಹೆಚ್ಚಿನ ಭರವಸೆಯನ್ನು ಹುಟ್ಟುಹಾಕುವಂತಿಲ್ಲ. ವರದಿಯಲ್ಲಿ ಉಲ್ಲೇಖಿಸಿಲಾದ ಸಾಕ್ಷ್ಯಗಳಿಂದ ಸ್ಪಷ್ಟವಾಗುವುದೇನೆಂದರೆ, ಎಲ್ಲೆಲ್ಲಿ ಹಿಂಸಾಚಾರದಿಂದ ಮುಸ್ಲಿಮರು ಬಲಿಯಾಗಿದ್ದಾರೋ, ಅಲ್ಲಿ ದೆಹಲಿ ಪೊಲೀಸ್ ಮತ್ತು ಸರಕಾರಿ ಪ್ರಾಸಿಕ್ಯೂಷನ್ ಕಡೆಯವರು ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ನ್ಯಾಯಾಲಯದಲ್ಲಿ ಸಾಬೀತುಪಡಿಸಲಾಗಂತಹ ಪ್ರಕರಣಗಳನ್ನು ಸೃಷ್ಟಿಸಿದ್ದಾರೆ. ಆದರೆ ಎಲ್ಲಿ ಪೌರತ್ವ ಕಾಯಿದೆ ತಿದ್ದುಪಡಿಯ ವಿರೋಧಿಗಳ ವಿರುದ್ಧ ಆರೋಪವಿದೆಯೋ, ಅಲ್ಲಿ ಪೊಲೀಸರು ತಾವೇ ಖುದ್ದಾಗಿ ಮುಂದೆ ಬಂದು ಕಪೋಲಪಲ್ಪಿತ ಸಾಕ್ಷ್ಯಾಧಾರಗಳನ್ನು ಮತ್ತು ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ ಹಾಗೂ ನ್ಯಾಯಾಲಯವನ್ನು ದಿಕ್ಕುತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ನ್ಯಾಯಾಂಗವು ಈ ವಿಷಯದ ಮೇಲೆ ದೆಹಲಿ ಪೊಲೀಸರ ಮೇಲೆ ಅತ್ಯಂತ ಕಟುವಾದ ಟೀಕೆಗಳನ್ನು ಮಾಡಿದೆ. ವಿಶೇಷವಾಗಿ, ದೆಹಲಿ ಗಲಭೆಗಳನ್ನು ಪೌರತ್ವ ಕಾಯಿದೆ ತಿದ್ದುಪಡಿಯ ವಿರೋಧಿಗಳ ಪಿತೂರಿ ಎಂದು ಹೇಳುವ ಪ್ರಕರಣಗಳ ಪರಿಶೀಲನೆ ಮಾಡುವಾಗ ಈ ವರದಿಯು, ಇಂತಹ ಸಮಯದಲ್ಲಿ ದಾಖಲಿಸಿರುವ ಪ್ರಕರಣ ನಕಲಿ ಎಂದು ಸ್ಪಷ್ಟವಾಗಿ ತೋರುತ್ತಿದೆ ಎಂಬ ತೀರ್ಮಾನಕ್ಕೆ ಬಂದಿದೆ. ಗಮನಿಸಬೇಕಾದ ವಿಷಯವೇನೆಂದರೆ, ಈ ಪ್ರಕರಣದ ನ್ಯಾಯಾಲಯ ವಿಚಾರಣೆ ಇನ್ನೂ ನಡೆಯುತ್ತಿದೆ ಹಾಗೂ ಈ ಪ್ರಕರಣದ ಅಡಿಯಲ್ಲಿ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಮತ್ತು ಹೋರಾಟಗಾರರನ್ನು ಜಾಮೀನು ಕೂಡ ಸಿಗದ ಯುಎಪಿಎ ನಂತಹ ಕಾಯಿದೆಯ ಅಡಿಯಲ್ಲಿ ಜೈಲಿನಲ್ಲಿ ಇರಿಸಲಾಗಿದೆ.

ಈ ನಾಲ್ಕು ಪ್ರಶ್ನೆಗಳ ಹಿಂದೆ ಅಡಗಿರುವ ದೊಡ್ಡ ಪ್ರಶ್ನೆ ಏನೆಂದರೆ, ದೇಶದ ರಾಜಧಾನಿಯಲ್ಲಿ ಸರಕಾರದ ಮೂಗಿನ ಕೆಳಗೆ ಆದ ಈ ನಾಚಿಕೆಗೇಡಿನ ಹಿಂಸಾಚಾರದ ಸತ್ಯವನ್ನು 1984ರಂತೆಯೇ ಯಾವುದೋ ಒಂದು ಸರಕಾರೇತರ ಸಂಸ್ಥೆಯ ತನಿಖೆ ನಡೆಸಿ ಮುಂದಿಡಬೇಕಾಗಿ ಬಂದಿದೆಯೆಂದರೆ, ಈ ದೇಶದಲ್ಲಿ ಕಾನೂನಿನ ಆಳ್ವಿಕೆ ಇನ್ನೂ ಇದೆಯೇ?

ಕನ್ನಡಕ್ಕೆ: ರಾಜಶೇಖರ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...