Homeಮುಖಪುಟನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

ನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

- Advertisement -
- Advertisement -

ನವದೆಹಲಿ: ನ್ಯಾಯಾಧೀಶರ ವರ್ಗಾವಣೆಯಿಂದಾಗಿ 2020ರ ದೆಹಲಿ ಗಲಭೆ ಪ್ರಕರಣದ ತೀರ್ಪು ಮತ್ತೊಮ್ಮೆ ನಿಧಾನಗತಿಗೆ ಕಾರಣವಾಗಿದೆ. ಈ ಬೆಳವಣಿಗೆ ಪ್ರಕರಣದ ಮುಸ್ಲಿಂ ಸಂತ್ರಸ್ತ ಕುಟುಂಬಗಳು ಮತ್ತು ಆರೋಪಿಗಳಲ್ಲಿ ಹತಾಶೆಯನ್ನು ಮೂಡಿಸಿದೆ.

ಈ ಪ್ರಕರಣವನ್ನು ಹೊಸ ನ್ಯಾಯಾಧೀಶರಿಗೆ ವರ್ಗಾಯಿಸಿದ ನಂತರ ದೆಹಲಿ ಪೊಲೀಸರು ಈಗ 17,000 ಪುಟಗಳ ಆರೋಪಪಟ್ಟಿಯನ್ನು ಹೊಸದಾಗಿ ಮಂಡಿಸಬೇಕಾಗುತ್ತದೆ. ಇದು ಕಾನೂನು ತಜ್ಞರು ಮತ್ತು ಸಮುದಾಯದ ಮುಖಂಡರು ಸೇರಿದಂತೆ ಹಲವಾರು ಕಡೆಗಳಿಂದ ಟೀಕೆಗೆ ಕಾರಣವಾಗಿದೆ. ನ್ಯಾಯಾಧೀಶರ ವರ್ಗಾವಣೆಯ ಕಾರಣದಿಂದಾಗುವ ಈ ವಿಳಂಬವನ್ನು ನಮಗೆ ನ್ಯಾಯ ನಿರಾಕರಿಸುವ ವಿಶಾಲ ಮಾದರಿಯ ಭಾಗವೆಂದು ಸಂತ್ರಸ್ತರು  ಪರಿಗಣಿಸುತ್ತಾರೆ.

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಅತ್ಯಂತ ಗಂಬೀರ ಕೋಮುಗಲಭೆ ಉಂಟಾಗಿತ್ತು.  ಈ ಹಿಂಸಾಚಾರದಲ್ಲಿ 53 ಜನರು ಜೀವ ಕಳೆದುಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ನಡೆದು 4 ವರ್ಷಗಳು ಕಳೆದಿವೆ, ಆದರೆ ಪ್ರಕರಣವನ್ನು ನ್ಯಾಯಾಲಯದಲ್ಲಿ ಎಳೆದಾಡಲಾಗುತ್ತಿದೆ.

ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಲಲಿತ್ ಕುಮಾರ್ ನಿರ್ದೇಶನ ನೀಡಿ, ಗಲಭೆಯ ಆರೋಪಗಳ ಕುರಿತು ವಾದಗಳನ್ನು ಪೂರ್ಣಗೊಳಿಸಲು ಎಷ್ಟು ಸಮಯ ಬೇಕಾಗುತ್ತದೆ ಎಂಬುದನ್ನು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿ ವಕೀಲರು ಸ್ಪಷ್ಟಪಡಿಸುವಂತೆ ಕೇಳಿದರು. “ನಾವು ವಾದಗಳನ್ನು ಮತ್ತು ಆರೋಪಗಳ ರಚನೆಯನ್ನು ವೇಗಗೊಳಿಸಬೇಕು. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಬಿಡಬಾರದು” ಎಂದು ಅವರು ಹೇಳಿದರು. ಮುಂದಿನ ವಿಚಾರಣೆಯನ್ನು ನಾಳೆಗೆ (ಜೂನ್ 6) ಮುಂದೂಡಲಾಗಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಸಮೀರ್ ಬಾಜ್‌ಪೈ ಅವರ ವರ್ಗಾವಣೆಯ ನಂತರ ಈ ಪ್ರಕರಣವು ನ್ಯಾಯಾಧೀಶ ಲಲಿತ್ ಕುಮಾರ್ ಮುಂದೆ ಬಂದಿದೆ. ಎಎಸ್‌ಜೆ ಲಲಿತ್ ಕುಮಾರ್ ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಡಿಸೆಂಬರ್ 2023ರಲ್ಲಿ ನ್ಯಾಯಾಧೀಶ ಅಮಿತಾಬ್ ರಾವತ್ ಅವರು ತಾವು  ವರ್ಗಾವಣೆಯಾಗುವ ಮೊದಲು ಈ ಪ್ರಕರಣದ ದೈನಂದಿನ ವಿಚಾರಣೆಗೆ ಆದೇಶಿಸಿದ್ದರು.  ಅವರ ಈ ಆದೇಶವನ್ನು ನಂತರ ಬಂದ  ನ್ಯಾಯಾಧೀಶ ಬಾಜ್‌ಪೈ ಬದಲಾಯಿಸಿದ್ದರು. ನ್ಯಾಯಾಂಗ ಪುನರ್ರಚನೆಯಿಂದಾಗಿ ಪ್ರಕರಣಕ್ಕೆ ಅಡ್ಡಿಯಾಗುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಮತ್ತೊಂದು ವಿಳಂಬದ ಸುದ್ದಿ ಮುಸ್ಲಿಂ ಸಮುದಾಯದ ಅನೇಕರನ್ನು ಕೆರಳಿಸಿದೆ.

ಈ ಗಲಭೆಯಲ್ಲಿ ಸಹೋದರನನ್ನು ಕಳೆದುಕೊಂಡಿರುವ ಮೊಹಮ್ಮದ್ ರಿಜ್ವಾನ್ ಅವರು, “ನಾವು ನ್ಯಾಯಕ್ಕಾಗಿ ಕಳೆದ 4 ವರ್ಷಗಳಿಂದಲೂ ಕಾಯುತ್ತಿದ್ದೇವೆ. ನಾವು ಪ್ರತಿ ಬಾರಿ ತೀರ್ಪಿಗಾಗಿ ಕಾಯುತ್ತಿರುವಾಗ ಅವರು ನ್ಯಾಯಾಧೀಶರನ್ನು ಬದಲಾಯಿಸುತ್ತಾರೆ. ಸತ್ಯ ಹೊರಬರುವುದನ್ನು ಅವರು ಬಯಸುತ್ತಿಲ್ಲ ಎಂದು ಕಾಣುತ್ತಿದೆ” ಎಂದರು.

ಆರೋಪಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿರುವ ವಕೀಲೆ ಫರಾನಾಜ್ ಅವರು, ‘ನ್ಯಾಯಾಧೀಶರ ನಿರಂತರ ಬದಲಾವಣೆ ಸಾಮಾನ್ಯವಲ್ಲ. ನ್ಯಾಯ ನೀಡುವುದಕ್ಕಿಂತ ಪ್ರಕರಣವನ್ನು ವಿಳಂಬ ಮಾಡುವುದರಲ್ಲಿ ರಾಜ್ಯವು ಹೆಚ್ಚು ಆಸಕ್ತಿ ತೋರುತ್ತಿದೆ. ಏತನ್ಮಧ್ಯೆ, ಮುಗ್ಧ ಜನರು ಕಠಿಣ ಕಾನೂನುಗಳ ಅಡಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ” ಎಂದರು.

ಪ್ರಕರಣದ ಆರೋಪಿಗಳಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಮತ್ತು ಶಾರ್ಜೀಲ್ ಇಮಾಮ್ ಸೇರಿದ್ದಾರೆ. ಇವರೆಲ್ಲರೂ ಮುಸ್ಲಿಮರು ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದಾರೆ. ಅವರಲ್ಲಿ ಹಲವರು ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.

ಸಹ ಆರೋಪಿಗಳಲ್ಲಿ ಒಬ್ಬರಾದ ಶಿಫಾ-ಉರ್-ರೆಹಮಾನ್ ಈಗಾಗಲೇ ಮೂರು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ರಾಜ್ಯವು ಯಾವುದೇ ನಿಜವಾದ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಅವರ ಪತ್ನಿ ಸಬಿಹಾ ಅವರು, “ನಮ್ಮ ಮಕ್ಕಳು ತಮ್ಮ ತಂದೆಯಿಲ್ಲದೆ ಬೆಳೆಯುತ್ತಿದ್ದಾರೆ. ಪ್ರತಿ ಕೆಲವು ತಿಂಗಳಿಗೊಮ್ಮೆ ನ್ಯಾಯಾಲಯವು ಈ ಬಾರಿ ಅಂತಿಮವಾಗಿ ತೀರ್ಪು ನೀಡುತ್ತದೆ ಎಂದು ನಮಗೆ ಹೇಳಲಾಗುತ್ತದೆ. ಆದರೆ ಈಗ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ನಮಗೆ ಈಗ ಏನೂ ದೋಚದಾಗಿದೆ” ಎಂದರು.

ನ್ಯಾಯಾಧೀಶರು ಬದಲಾಗಿರುವುದರಿಂದ ದೆಹಲಿ ಪೊಲೀಸರು 17,000 ಪುಟಗಳ ಚಾರ್ಜ್‌ಶೀಟ್ ಸೇರಿದಂತೆ ಎಲ್ಲಾ ಪುರಾವೆಗಳನ್ನು ಮತ್ತೊಮ್ಮೆ ನ್ಯಾಯಾಲಯದಲ್ಲಿ ಹಾಜರುಪಡಿಸಬೇಕಾಗುತ್ತದೆ. ಈ ಹಿಂದೆಯೇ ವಾದಗಳನ್ನು ಪೂರ್ಣಗೊಳಿಸಿದ್ದ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಅಮಿತ್ ಪ್ರಸಾದ್ ಮತ್ತು ಮಧುಕರ್ ಪಾಂಡೆ ಕೂಡ ತಮ್ಮ ಸಲ್ಲಿಕೆಗಳನ್ನು ಪುನರಾರಂಭಿಸಬೇಕಾಗುತ್ತದೆ.

ನ್ಯಾಯಾಲಯದಲ್ಲಿ ನ್ಯಾಯಾಧೀಶ ಲಲಿತ್ ಕುಮಾರ್ ಎಲ್ಲಾ ವಕೀಲರನ್ನು ವಾದಗಳನ್ನು ಪೂರ್ಣಗೊಳಿಸಲು ತಮ್ಮ ವೇಳಾಪಟ್ಟಿಯನ್ನು ಸಲ್ಲಿಸುವಂತೆ ಕೇಳಿಕೊಂಡರು. “ಇದು ಅಂತ್ಯವಿಲ್ಲದ ಪ್ರಕ್ರಿಯೆಯಲ್ಲ. ಎರಡೂ ಕಡೆಯವರು ಸಹಕರಿಸಬೇಕು” ಎಂದು ಅವರು ಈ ವಾರ ಕಿಕ್ಕಿರಿದ ನ್ಯಾಯಾಲಯದಲ್ಲಿ ಹೇಳಿದರು.

ಆದಾಗ್ಯೂ ನ್ಯಾಯವನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲು ಇಂತಹ ಪುನರಾರಂಭಗಳನ್ನು ಬಳಸಲಾಗುತ್ತಿದೆ ಎಂದು ವಿಮರ್ಶಕರು ವಾದಿಸುತ್ತಾರೆ. ಮಾನವ ಹಕ್ಕುಗಳ ವಕೀಲ ಫೈಸಲ್ ಖಾನ್ ಅವರು, “ರಾಜ್ಯವು ಗಂಭೀರವಾಗಿದ್ದರೆ ಈ ರೀತಿ ಮತ್ತೆ ಮತ್ತೆ ಸಂಭವಿಸಲು ಬಿಡುತ್ತಿರಲಿಲ್ಲ. ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದರು.

ದೆಹಲಿ ಪೊಲೀಸರ ಆರೋಪಪಟ್ಟಿಯಲ್ಲಿ ಗಲಭೆಗಳು ಸಿಎಎ ವಿರೋಧಿ ಪ್ರತಿಭಟನೆಗಳ ಸಮಯದಲ್ಲಿ ನಡೆದ ಪೂರ್ವಯೋಜಿತ ಪಿತೂರಿ ಎಂದು ಆರೋಪಿಸಲಾಗಿದೆ. ಇದು ಮುಸ್ಲಿಂ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಹಿಂಸಾಚಾರಕ್ಕೆ ಸಂಚು ರೂಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಕೀಲರು ಮತ್ತು  ಕಾರ್ಯಕರ್ತರು ಇದನ್ನು ತಿರಸ್ಕರಿಸಿದ್ದಾರೆ. ಹಿಂದೂ ಗುಂಪುಗಳು ಮುಸ್ಲಿಂ ನೆರೆಹೊರೆಗಳು, ಮಸೀದಿಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊಗಳು ಮತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಇವರು ತೋರಿಸಿದ್ದಾರೆ.

ಹಿರಿಯ ಕಾರ್ಯಕರ್ತೆ ಕವಿತಾ ಕೃಷ್ಣನ್ ಅವರು, “ನಿಜವಾದ ಗಲಭೆಕೋರರ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಅವರಲ್ಲಿ ಹೆಚ್ಚಿನವರು ಬಹುಸಂಖ್ಯಾತ ಸಮುದಾಯದವರಾಗಿದ್ದಾರೆ. ಮುಸ್ಲಿಮರನ್ನು ಮಾತ್ರ ಬಂಧಿಸಿರುವುದು ಆಘಾತಕಾರಿ. ಇದು ಕೇವಲ ಅನ್ಯಾಯವಲ್ಲ, ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸುವ ಪಿತೂರಿಯಾಗಿದೆ” ಎಂದಿದ್ದಾರೆ.

ಗಲಭೆಗೆ ಮುನ್ನ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕಾಗಿ ಮತ್ತು ಪಕ್ಷಪಾತದ ತನಿಖೆಗಾಗಿ ದೆಹಲಿ ಪೊಲೀಸರನ್ನು ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ನ 2021ರ ವರದಿಯು ಟೀಕಿಸಿತ್ತು. ಬಹಿರಂಗವಾಗಿ ಹಿಂಸಾಚಾರಕ್ಕೆ ಕರೆ ನೀಡಿದ ಬಿಜೆಪಿ ನಾಯಕರ ವಿರುದ್ಧ ಯಾವುದೇ ಸರಿಯಾದ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಲಭೆಯಲ್ಲಿ ತನ್ನ ಮಗನನ್ನು ಕಳೆದುಕೊಂಡ ಅಸ್ಮಾ ಬೇಗಂ ಅವರು, “ಅವರು ನನ್ನ ಮಗನನ್ನು ಹತ್ಯೆ ಮಾಡಿ, ನಮ್ಮ ಮನೆಯನ್ನು ಸುಟ್ಟುಹಾಕಿದರು. ಈಗ ಅವರು ನ್ಯಾಯಾಲಯದಲ್ಲಿ ನಮ್ಮ ಭರವಸೆಯನ್ನು ಹಿಸುಕುತ್ತಿದ್ದಾರೆ. ನ್ಯಾಯಾಧೀಶರು ಬದಲಾಗುತ್ತಲೇ ಇದ್ದರೆ, ನಮಗೆ ನ್ಯಾಯ ಹೇಗೆ ಸಿಗುತ್ತದೆ?” ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ಪ್ರಸ್ತುತ ಹೀಗೆ ಮುಂದುವರಿದರೆ ಪ್ರಕರಣವು ಇನ್ನೂ ಹಲವಾರು ವರ್ಷಗಳವರೆಗೆ ಎಳೆಯಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಿಸಿದ್ದಾರೆ. ವಿಚಾರಣೆ ಪ್ರಾರಂಭವಾಗುವ ಹೊತ್ತಿಗೆ ಹೆಚ್ಚಿನ ಸಾಕ್ಷ್ಯಗಳು ದುರ್ಬಲವಾಗಬಹುದು ಮತ್ತು ಸಾಕ್ಷಿಗಳು ಇನ್ನು ಮುಂದೆ ಪ್ರಮುಖ ವಿವರಗಳನ್ನು ನೆನಪಿಸಿಕೊಳ್ಳದಿರಬಹುದು ಎಂದು ಹಲವರು ಅಭಿಪ್ರಾಯಿಸಿದ್ದಾರೆ.

2020ರ ದೆಹಲಿ ಗಲಭೆ ಪ್ರಕರಣವು ಈಗ ನ್ಯಾಯವ್ಯವಸ್ಥೆಯಲ್ಲಿ ತಮ್ಮ ಸ್ಥಾನದ ಬಗ್ಗೆ ಮುಸ್ಲಿಮರಲ್ಲಿ ಹೆಚ್ಚುತ್ತಿರುವ ಹತಾಶೆಯ ಸಂಕೇತವಾಗಿದೆ. ಪ್ರತಿ ವಿಳಂಬದೊಂದಿಗೆ, ಭರವಸೆಗಳು ಸ್ವಲ್ಪ ಹೆಚ್ಚು ಕುಸಿಯುತ್ತವೆ.
ಈಗ ಬೇಡಿಕೆ ಸ್ಪಷ್ಟವಾಗಿದೆ. ಇಂತಹ ವಿಳಂಬವನ್ನು ನಿಲ್ಲಿಸಿ, ನೆಪಗಳನ್ನು ನಿಲ್ಲಿಸಿ ಮತ್ತು ವಿಚಾರಣೆಯನ್ನು ಪ್ರಾರಂಭಿಸಿ ಎಂದು ಸೀಲಾಂಪುರದ ಸಮಾಜ ಸೇವಕ ಮೊಹಮ್ಮದ್ ಆರಿಫ್ ಹೇಳುತ್ತಾರೆ.

ಮುಂದಿನ ವಿಚಾರಣೆಯನ್ನು ಜೂನ್ 6 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಅನೇಕರು ದೆಹಲಿಯ ಮುಸ್ಲಿಮರಿಗೆ ನ್ಯಾಯ ಎಂದಾದರೂ ಸಿಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...