Homeಮುಖಪುಟನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

ನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

- Advertisement -
- Advertisement -

ನವದೆಹಲಿ: ನ್ಯಾಯಾಧೀಶರ ವರ್ಗಾವಣೆಯಿಂದಾಗಿ 2020ರ ದೆಹಲಿ ಗಲಭೆ ಪ್ರಕರಣದ ತೀರ್ಪು ಮತ್ತೊಮ್ಮೆ ನಿಧಾನಗತಿಗೆ ಕಾರಣವಾಗಿದೆ. ಈ ಬೆಳವಣಿಗೆ ಪ್ರಕರಣದ ಮುಸ್ಲಿಂ ಸಂತ್ರಸ್ತ ಕುಟುಂಬಗಳು ಮತ್ತು ಆರೋಪಿಗಳಲ್ಲಿ ಹತಾಶೆಯನ್ನು ಮೂಡಿಸಿದೆ.

ಈ ಪ್ರಕರಣವನ್ನು ಹೊಸ ನ್ಯಾಯಾಧೀಶರಿಗೆ ವರ್ಗಾಯಿಸಿದ ನಂತರ ದೆಹಲಿ ಪೊಲೀಸರು ಈಗ 17,000 ಪುಟಗಳ ಆರೋಪಪಟ್ಟಿಯನ್ನು ಹೊಸದಾಗಿ ಮಂಡಿಸಬೇಕಾಗುತ್ತದೆ. ಇದು ಕಾನೂನು ತಜ್ಞರು ಮತ್ತು ಸಮುದಾಯದ ಮುಖಂಡರು ಸೇರಿದಂತೆ ಹಲವಾರು ಕಡೆಗಳಿಂದ ಟೀಕೆಗೆ ಕಾರಣವಾಗಿದೆ. ನ್ಯಾಯಾಧೀಶರ ವರ್ಗಾವಣೆಯ ಕಾರಣದಿಂದಾಗುವ ಈ ವಿಳಂಬವನ್ನು ನಮಗೆ ನ್ಯಾಯ ನಿರಾಕರಿಸುವ ವಿಶಾಲ ಮಾದರಿಯ ಭಾಗವೆಂದು ಸಂತ್ರಸ್ತರು  ಪರಿಗಣಿಸುತ್ತಾರೆ.

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಅತ್ಯಂತ ಗಂಬೀರ ಕೋಮುಗಲಭೆ ಉಂಟಾಗಿತ್ತು.  ಈ ಹಿಂಸಾಚಾರದಲ್ಲಿ 53 ಜನರು ಜೀವ ಕಳೆದುಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ನಡೆದು 4 ವರ್ಷಗಳು ಕಳೆದಿವೆ, ಆದರೆ ಪ್ರಕರಣವನ್ನು ನ್ಯಾಯಾಲಯದಲ್ಲಿ ಎಳೆದಾಡಲಾಗುತ್ತಿದೆ.

ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಲಲಿತ್ ಕುಮಾರ್ ನಿರ್ದೇಶನ ನೀಡಿ, ಗಲಭೆಯ ಆರೋಪಗಳ ಕುರಿತು ವಾದಗಳನ್ನು ಪೂರ್ಣಗೊಳಿಸಲು ಎಷ್ಟು ಸಮಯ ಬೇಕಾಗುತ್ತದೆ ಎಂಬುದನ್ನು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿ ವಕೀಲರು ಸ್ಪಷ್ಟಪಡಿಸುವಂತೆ ಕೇಳಿದರು. “ನಾವು ವಾದಗಳನ್ನು ಮತ್ತು ಆರೋಪಗಳ ರಚನೆಯನ್ನು ವೇಗಗೊಳಿಸಬೇಕು. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಬಿಡಬಾರದು” ಎಂದು ಅವರು ಹೇಳಿದರು. ಮುಂದಿನ ವಿಚಾರಣೆಯನ್ನು ನಾಳೆಗೆ (ಜೂನ್ 6) ಮುಂದೂಡಲಾಗಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಸಮೀರ್ ಬಾಜ್‌ಪೈ ಅವರ ವರ್ಗಾವಣೆಯ ನಂತರ ಈ ಪ್ರಕರಣವು ನ್ಯಾಯಾಧೀಶ ಲಲಿತ್ ಕುಮಾರ್ ಮುಂದೆ ಬಂದಿದೆ. ಎಎಸ್‌ಜೆ ಲಲಿತ್ ಕುಮಾರ್ ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಡಿಸೆಂಬರ್ 2023ರಲ್ಲಿ ನ್ಯಾಯಾಧೀಶ ಅಮಿತಾಬ್ ರಾವತ್ ಅವರು ತಾವು  ವರ್ಗಾವಣೆಯಾಗುವ ಮೊದಲು ಈ ಪ್ರಕರಣದ ದೈನಂದಿನ ವಿಚಾರಣೆಗೆ ಆದೇಶಿಸಿದ್ದರು.  ಅವರ ಈ ಆದೇಶವನ್ನು ನಂತರ ಬಂದ  ನ್ಯಾಯಾಧೀಶ ಬಾಜ್‌ಪೈ ಬದಲಾಯಿಸಿದ್ದರು. ನ್ಯಾಯಾಂಗ ಪುನರ್ರಚನೆಯಿಂದಾಗಿ ಪ್ರಕರಣಕ್ಕೆ ಅಡ್ಡಿಯಾಗುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಮತ್ತೊಂದು ವಿಳಂಬದ ಸುದ್ದಿ ಮುಸ್ಲಿಂ ಸಮುದಾಯದ ಅನೇಕರನ್ನು ಕೆರಳಿಸಿದೆ.

ಈ ಗಲಭೆಯಲ್ಲಿ ಸಹೋದರನನ್ನು ಕಳೆದುಕೊಂಡಿರುವ ಮೊಹಮ್ಮದ್ ರಿಜ್ವಾನ್ ಅವರು, “ನಾವು ನ್ಯಾಯಕ್ಕಾಗಿ ಕಳೆದ 4 ವರ್ಷಗಳಿಂದಲೂ ಕಾಯುತ್ತಿದ್ದೇವೆ. ನಾವು ಪ್ರತಿ ಬಾರಿ ತೀರ್ಪಿಗಾಗಿ ಕಾಯುತ್ತಿರುವಾಗ ಅವರು ನ್ಯಾಯಾಧೀಶರನ್ನು ಬದಲಾಯಿಸುತ್ತಾರೆ. ಸತ್ಯ ಹೊರಬರುವುದನ್ನು ಅವರು ಬಯಸುತ್ತಿಲ್ಲ ಎಂದು ಕಾಣುತ್ತಿದೆ” ಎಂದರು.

ಆರೋಪಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿರುವ ವಕೀಲೆ ಫರಾನಾಜ್ ಅವರು, ‘ನ್ಯಾಯಾಧೀಶರ ನಿರಂತರ ಬದಲಾವಣೆ ಸಾಮಾನ್ಯವಲ್ಲ. ನ್ಯಾಯ ನೀಡುವುದಕ್ಕಿಂತ ಪ್ರಕರಣವನ್ನು ವಿಳಂಬ ಮಾಡುವುದರಲ್ಲಿ ರಾಜ್ಯವು ಹೆಚ್ಚು ಆಸಕ್ತಿ ತೋರುತ್ತಿದೆ. ಏತನ್ಮಧ್ಯೆ, ಮುಗ್ಧ ಜನರು ಕಠಿಣ ಕಾನೂನುಗಳ ಅಡಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ” ಎಂದರು.

ಪ್ರಕರಣದ ಆರೋಪಿಗಳಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಮತ್ತು ಶಾರ್ಜೀಲ್ ಇಮಾಮ್ ಸೇರಿದ್ದಾರೆ. ಇವರೆಲ್ಲರೂ ಮುಸ್ಲಿಮರು ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದಾರೆ. ಅವರಲ್ಲಿ ಹಲವರು ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.

ಸಹ ಆರೋಪಿಗಳಲ್ಲಿ ಒಬ್ಬರಾದ ಶಿಫಾ-ಉರ್-ರೆಹಮಾನ್ ಈಗಾಗಲೇ ಮೂರು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ರಾಜ್ಯವು ಯಾವುದೇ ನಿಜವಾದ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಅವರ ಪತ್ನಿ ಸಬಿಹಾ ಅವರು, “ನಮ್ಮ ಮಕ್ಕಳು ತಮ್ಮ ತಂದೆಯಿಲ್ಲದೆ ಬೆಳೆಯುತ್ತಿದ್ದಾರೆ. ಪ್ರತಿ ಕೆಲವು ತಿಂಗಳಿಗೊಮ್ಮೆ ನ್ಯಾಯಾಲಯವು ಈ ಬಾರಿ ಅಂತಿಮವಾಗಿ ತೀರ್ಪು ನೀಡುತ್ತದೆ ಎಂದು ನಮಗೆ ಹೇಳಲಾಗುತ್ತದೆ. ಆದರೆ ಈಗ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ನಮಗೆ ಈಗ ಏನೂ ದೋಚದಾಗಿದೆ” ಎಂದರು.

ನ್ಯಾಯಾಧೀಶರು ಬದಲಾಗಿರುವುದರಿಂದ ದೆಹಲಿ ಪೊಲೀಸರು 17,000 ಪುಟಗಳ ಚಾರ್ಜ್‌ಶೀಟ್ ಸೇರಿದಂತೆ ಎಲ್ಲಾ ಪುರಾವೆಗಳನ್ನು ಮತ್ತೊಮ್ಮೆ ನ್ಯಾಯಾಲಯದಲ್ಲಿ ಹಾಜರುಪಡಿಸಬೇಕಾಗುತ್ತದೆ. ಈ ಹಿಂದೆಯೇ ವಾದಗಳನ್ನು ಪೂರ್ಣಗೊಳಿಸಿದ್ದ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಅಮಿತ್ ಪ್ರಸಾದ್ ಮತ್ತು ಮಧುಕರ್ ಪಾಂಡೆ ಕೂಡ ತಮ್ಮ ಸಲ್ಲಿಕೆಗಳನ್ನು ಪುನರಾರಂಭಿಸಬೇಕಾಗುತ್ತದೆ.

ನ್ಯಾಯಾಲಯದಲ್ಲಿ ನ್ಯಾಯಾಧೀಶ ಲಲಿತ್ ಕುಮಾರ್ ಎಲ್ಲಾ ವಕೀಲರನ್ನು ವಾದಗಳನ್ನು ಪೂರ್ಣಗೊಳಿಸಲು ತಮ್ಮ ವೇಳಾಪಟ್ಟಿಯನ್ನು ಸಲ್ಲಿಸುವಂತೆ ಕೇಳಿಕೊಂಡರು. “ಇದು ಅಂತ್ಯವಿಲ್ಲದ ಪ್ರಕ್ರಿಯೆಯಲ್ಲ. ಎರಡೂ ಕಡೆಯವರು ಸಹಕರಿಸಬೇಕು” ಎಂದು ಅವರು ಈ ವಾರ ಕಿಕ್ಕಿರಿದ ನ್ಯಾಯಾಲಯದಲ್ಲಿ ಹೇಳಿದರು.

ಆದಾಗ್ಯೂ ನ್ಯಾಯವನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲು ಇಂತಹ ಪುನರಾರಂಭಗಳನ್ನು ಬಳಸಲಾಗುತ್ತಿದೆ ಎಂದು ವಿಮರ್ಶಕರು ವಾದಿಸುತ್ತಾರೆ. ಮಾನವ ಹಕ್ಕುಗಳ ವಕೀಲ ಫೈಸಲ್ ಖಾನ್ ಅವರು, “ರಾಜ್ಯವು ಗಂಭೀರವಾಗಿದ್ದರೆ ಈ ರೀತಿ ಮತ್ತೆ ಮತ್ತೆ ಸಂಭವಿಸಲು ಬಿಡುತ್ತಿರಲಿಲ್ಲ. ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದರು.

ದೆಹಲಿ ಪೊಲೀಸರ ಆರೋಪಪಟ್ಟಿಯಲ್ಲಿ ಗಲಭೆಗಳು ಸಿಎಎ ವಿರೋಧಿ ಪ್ರತಿಭಟನೆಗಳ ಸಮಯದಲ್ಲಿ ನಡೆದ ಪೂರ್ವಯೋಜಿತ ಪಿತೂರಿ ಎಂದು ಆರೋಪಿಸಲಾಗಿದೆ. ಇದು ಮುಸ್ಲಿಂ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಹಿಂಸಾಚಾರಕ್ಕೆ ಸಂಚು ರೂಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಕೀಲರು ಮತ್ತು  ಕಾರ್ಯಕರ್ತರು ಇದನ್ನು ತಿರಸ್ಕರಿಸಿದ್ದಾರೆ. ಹಿಂದೂ ಗುಂಪುಗಳು ಮುಸ್ಲಿಂ ನೆರೆಹೊರೆಗಳು, ಮಸೀದಿಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊಗಳು ಮತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಇವರು ತೋರಿಸಿದ್ದಾರೆ.

ಹಿರಿಯ ಕಾರ್ಯಕರ್ತೆ ಕವಿತಾ ಕೃಷ್ಣನ್ ಅವರು, “ನಿಜವಾದ ಗಲಭೆಕೋರರ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಅವರಲ್ಲಿ ಹೆಚ್ಚಿನವರು ಬಹುಸಂಖ್ಯಾತ ಸಮುದಾಯದವರಾಗಿದ್ದಾರೆ. ಮುಸ್ಲಿಮರನ್ನು ಮಾತ್ರ ಬಂಧಿಸಿರುವುದು ಆಘಾತಕಾರಿ. ಇದು ಕೇವಲ ಅನ್ಯಾಯವಲ್ಲ, ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸುವ ಪಿತೂರಿಯಾಗಿದೆ” ಎಂದಿದ್ದಾರೆ.

ಗಲಭೆಗೆ ಮುನ್ನ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕಾಗಿ ಮತ್ತು ಪಕ್ಷಪಾತದ ತನಿಖೆಗಾಗಿ ದೆಹಲಿ ಪೊಲೀಸರನ್ನು ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ನ 2021ರ ವರದಿಯು ಟೀಕಿಸಿತ್ತು. ಬಹಿರಂಗವಾಗಿ ಹಿಂಸಾಚಾರಕ್ಕೆ ಕರೆ ನೀಡಿದ ಬಿಜೆಪಿ ನಾಯಕರ ವಿರುದ್ಧ ಯಾವುದೇ ಸರಿಯಾದ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಲಭೆಯಲ್ಲಿ ತನ್ನ ಮಗನನ್ನು ಕಳೆದುಕೊಂಡ ಅಸ್ಮಾ ಬೇಗಂ ಅವರು, “ಅವರು ನನ್ನ ಮಗನನ್ನು ಹತ್ಯೆ ಮಾಡಿ, ನಮ್ಮ ಮನೆಯನ್ನು ಸುಟ್ಟುಹಾಕಿದರು. ಈಗ ಅವರು ನ್ಯಾಯಾಲಯದಲ್ಲಿ ನಮ್ಮ ಭರವಸೆಯನ್ನು ಹಿಸುಕುತ್ತಿದ್ದಾರೆ. ನ್ಯಾಯಾಧೀಶರು ಬದಲಾಗುತ್ತಲೇ ಇದ್ದರೆ, ನಮಗೆ ನ್ಯಾಯ ಹೇಗೆ ಸಿಗುತ್ತದೆ?” ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ಪ್ರಸ್ತುತ ಹೀಗೆ ಮುಂದುವರಿದರೆ ಪ್ರಕರಣವು ಇನ್ನೂ ಹಲವಾರು ವರ್ಷಗಳವರೆಗೆ ಎಳೆಯಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಿಸಿದ್ದಾರೆ. ವಿಚಾರಣೆ ಪ್ರಾರಂಭವಾಗುವ ಹೊತ್ತಿಗೆ ಹೆಚ್ಚಿನ ಸಾಕ್ಷ್ಯಗಳು ದುರ್ಬಲವಾಗಬಹುದು ಮತ್ತು ಸಾಕ್ಷಿಗಳು ಇನ್ನು ಮುಂದೆ ಪ್ರಮುಖ ವಿವರಗಳನ್ನು ನೆನಪಿಸಿಕೊಳ್ಳದಿರಬಹುದು ಎಂದು ಹಲವರು ಅಭಿಪ್ರಾಯಿಸಿದ್ದಾರೆ.

2020ರ ದೆಹಲಿ ಗಲಭೆ ಪ್ರಕರಣವು ಈಗ ನ್ಯಾಯವ್ಯವಸ್ಥೆಯಲ್ಲಿ ತಮ್ಮ ಸ್ಥಾನದ ಬಗ್ಗೆ ಮುಸ್ಲಿಮರಲ್ಲಿ ಹೆಚ್ಚುತ್ತಿರುವ ಹತಾಶೆಯ ಸಂಕೇತವಾಗಿದೆ. ಪ್ರತಿ ವಿಳಂಬದೊಂದಿಗೆ, ಭರವಸೆಗಳು ಸ್ವಲ್ಪ ಹೆಚ್ಚು ಕುಸಿಯುತ್ತವೆ.
ಈಗ ಬೇಡಿಕೆ ಸ್ಪಷ್ಟವಾಗಿದೆ. ಇಂತಹ ವಿಳಂಬವನ್ನು ನಿಲ್ಲಿಸಿ, ನೆಪಗಳನ್ನು ನಿಲ್ಲಿಸಿ ಮತ್ತು ವಿಚಾರಣೆಯನ್ನು ಪ್ರಾರಂಭಿಸಿ ಎಂದು ಸೀಲಾಂಪುರದ ಸಮಾಜ ಸೇವಕ ಮೊಹಮ್ಮದ್ ಆರಿಫ್ ಹೇಳುತ್ತಾರೆ.

ಮುಂದಿನ ವಿಚಾರಣೆಯನ್ನು ಜೂನ್ 6 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಅನೇಕರು ದೆಹಲಿಯ ಮುಸ್ಲಿಮರಿಗೆ ನ್ಯಾಯ ಎಂದಾದರೂ ಸಿಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...