Homeಮುಖಪುಟದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

- Advertisement -
- Advertisement -

ದೆಹಲಿ ಗಲಭೆಗೆ (2020) ‘ದೊಡ್ಡ ಮಟ್ಟದ ಪಿತೂರಿ’ ರೂಪಿಸಿದ ಆರೋಪ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಸೆ.2) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಜಾಮೀನು ನಿರಾಕರಿಸಿ ತೀರ್ಪು ಪ್ರಕಟಿಸಿದೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮೊಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ಜಾಮೀನು ನಿರಾಕರಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆಯ ಸಮಯದಲ್ಲಿ, ಉಮರ್ ಖಾಲಿದ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ತ್ರಿದೀಪ್ ಪೈಸ್ “ಯಾವುದೇ ಸಂದೇಶವನ್ನು ಕಳುಹಿಸದೆ ಕೇವಲ ವಾಟ್ಸಾಪ್ ಗುಂಪುಗಳಲ್ಲಿ ಇರುವುದು ಅಪರಾಧವಲ್ಲ” ಎಂದು ವಾದಿಸಿದ್ದಾರೆ.

ಖಾಲಿದ್‌ ಅವರಿಂದ ಹಣ ಅಥವಾ ಇತರ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. 2020ರ ಫೆಬ್ರವರಿ 23-24ರ ರಾತ್ರಿ ನಡೆದ ಸಭೆಯು ಪ್ರಾಸಿಕ್ಯೂಷನ್ ಹೇಳಿದಂತೆ ರಹಸ್ಯವಾಗಿರಲಿಲ್ಲ ಎಂದು ಪೈಸ್ ಹೇಳಿದ್ದಾರೆ.

ಖಾಲಿದ್ ಸೈಫಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ರೆಬೆಕ್ಕಾ ಜಾನ್ ಅವರು, “ನಿರುಪದ್ರವಿ’ ಸಂದೇಶಗಳ ಆಧಾರದ ಮೇಲೆ ಯುಎಪಿಎ ಅಥವಾ ಅವರ (ಪ್ರಾಸಿಕ್ಯೂಷನ್) ಅಂತಹ ಸಂದೇಶಗಳಿಂದ ಕಥೆಗಳನ್ನು ಸೃಷ್ಟಿಸಲು ಪ್ರಯತ್ನಿಸಬಹುದೇ, ಅದು ಜಾಮೀನು ನಿರಾಕರಿಸಲು ಒಂದು ಕಾರಣವಾಗಬಹುದೇ ಅಥವಾ ಯುಎಪಿಎ ಅಡಿಯಲ್ಲಿ ಮೊಕದ್ದಮೆ ಹೂಡಲು ಒಂದು ಕಾರಣವೇ?” ಎಂದು ವಾದಿಸಿದ್ದಾರೆ.

ಜೂನ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೂವರು ಸಹ-ಆರೋಪಿಗಳಂತೆಯೇ ಸೈಫಿ ಜಾಮೀನಿನ ಮೇಲೆ ಬಿಡುಗಡೆಗೆ ಅರ್ಹರು ಎಂದು ಹೇಳಿದ್ದಾರೆ.

ಶಾರ್ಜೀಲ್ ಇಮಾಮ್ ಅವರು ಎಲ್ಲಾ ಸಹ-ಆರೋಪಿಗಳಿಂದ ಸಂಪೂರ್ಣವಾಗಿ ಸಂಪರ್ಕ ಕಡಿದುಕೊಂಡಿದ್ದರು. ದೆಹಲಿ ಪೊಲೀಸರು ಆರೋಪಿಸಿದಂತೆ ಅವರು ಯಾವುದೇ ರೀತಿಯ ಪಿತೂರಿ ಸಭೆಗಳ ಭಾಗವಾಗಿರಲಿಲ್ಲ ಎಂದು ಶಾರ್ಜೀಲ್ ಪರ ವಕೀಲ ತಾಲಿಬ್ ಮುಸ್ತಫಾ ವಾದಿಸಿದ್ದಾರೆ.

ಇಮಾಮ್‌ ಗಲಭೆಯ ಹಿಂದಿನ ಪಿತೂರಿಯ ಭಾಗವಾಗಿದ್ದರು ಎಂದು ಜನವರಿ 23, 2023ರವರೆಗೆ ಪ್ರಾಸಿಕ್ಯೂಷನ್ ಹೇಳಿಕೊಂಡು ಬಂದಿತ್ತು. ಆದರೆ, ಕೊನೆಗೆ ಇಮಾಮ್ ಬಿಹಾರದಲ್ಲಿ ಮಾಡಿದ ಒಂದು ಭಾಷಣವನ್ನು ಮುಂದಿಟ್ಟು ಪೊಲೀಸರು ಆರೋಪ ಮಾಡಿದ್ದಾರೆ ಎಂದು ತಾಲಿಬ್ ಮುಸ್ತಫಾ ಹೇಳಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದು, “ಆರೋಪಿಗಳು ರಾಷ್ಟ್ರ ವಿರೋಧಿ ಕೃತ್ಯವೆಸಗಿರುವ ಆರೋಪ ಇರುವುದರಿಂದ ಅವರು ಖುಲಾಸೆಗೊಳ್ಳುವವರೆಗೆ ಅಥವಾ ಶಿಕ್ಷೆಗೊಳಗಾಗುವವರೆಗೆ ಜೈಲಿನಲ್ಲಿರುವುದು ಉತ್ತಮ” ಎಂದಿದ್ದಾರೆ.

“ಹೆಚ್ಚಿನ ಗಲಭೆ ಮತ್ತು ಬೆಂಕಿ ಹಚ್ಚುವಿಕೆಗೆ ನಿರ್ದಿಷ್ಟ ದಿನವನ್ನು ಆಯ್ಕೆ ಮಾಡುವ ಮೂಲಕ ಜಾಗತಿಕವಾಗಿ ರಾಷ್ಟ್ರದ ಹೆಸರು ಕೆಡಿಸುವುದು ಆರೋಪಿಗಳ ಉದ್ದೇಶವಾಗಿತ್ತು” ಎಂದು ಮೆಹ್ತಾ ಆರೋಪಿಸಿದ್ದಾರೆ.

ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ಕೂಡ ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ್ದರು.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಇನ್ನೊಂದು ಸಮನ್ವಯ ಪೀಠವು ಆರೋಪಿ ತಸ್ಲೀಮ್ ಅಹ್ಮದ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದೆ.

ತಸ್ಲೀಮ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಮೆಹಮೂದ್ ಪ್ರಾಚಾ ಅವರು, ವಿಚಾರಣೆ ವಿಳಂಬವನ್ನು ಉಲ್ಲೇಖಿಸಿ ಜಾಮೀನು ನೀಡುವಂತೆ ಕೋರಿದ್ದರು.

2020ರಲ್ಲಿ ದೆಹಲಿ ಪೊಲೀಸರ ವಿಶೇಷ ವಿಭಾಗವು ಭಾರತೀಯ ದಂಡ ಸಂಹಿತೆ, 1860 (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ಸಂಖ್ಯೆ 59 ಅನ್ನು ದಾಖಲಿಸಿತ್ತು.

ಈ ಪ್ರಕರಣದಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶಾರತ್ ಜಹಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ-ಉರ್-ರೆಹಮಾನ್, ಆಸಿಫ್ ಇಕ್ಬಾಲ್ ತನ್ಹಾ, ಶಾದಾಬ್ ಅಹಮದ್, ತಸ್ಲೀಮ್ ಅಹಮದ್, ಸಲೀಂ ಮಲಿಕ್, ಮೊಹಮ್ಮದ್ ಸಲೀಮ್ ಖಾನ್, ಅಥರ್ ಖಾನ್, ಸಫೂರ ಝರ್ಗರ್, ಶಾರ್ಜೀಲ್ ಇಮಾಮ್, ಫೈಝಾನ್ ಖಾನ್ ಮತ್ತು ನತಾಶಾ ನರ್ವಾಲ್ ಅವರನ್ನು ಆರೋಪಿಗಳಾಗಿ ಗುರುತಿಸಲಾಗಿದೆ.

ಈ ಪೈಕಿ ಆಸಿಫ್ ಇಕ್ಬಾಲ್ ತನ್ಹಾ, ನತಾಶಾ ನರ್ವಾಲ್ ಮತ್ತು ಸಫೂರ ಝರ್ಗರ್ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ.

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...