Homeಮುಖಪುಟದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

- Advertisement -
- Advertisement -

ದೆಹಲಿ ಗಲಭೆಗೆ (2020) ‘ದೊಡ್ಡ ಮಟ್ಟದ ಪಿತೂರಿ’ ರೂಪಿಸಿದ ಆರೋಪ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಸೆ.2) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಜಾಮೀನು ನಿರಾಕರಿಸಿ ತೀರ್ಪು ಪ್ರಕಟಿಸಿದೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮೊಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ಜಾಮೀನು ನಿರಾಕರಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆಯ ಸಮಯದಲ್ಲಿ, ಉಮರ್ ಖಾಲಿದ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ತ್ರಿದೀಪ್ ಪೈಸ್ “ಯಾವುದೇ ಸಂದೇಶವನ್ನು ಕಳುಹಿಸದೆ ಕೇವಲ ವಾಟ್ಸಾಪ್ ಗುಂಪುಗಳಲ್ಲಿ ಇರುವುದು ಅಪರಾಧವಲ್ಲ” ಎಂದು ವಾದಿಸಿದ್ದಾರೆ.

ಖಾಲಿದ್‌ ಅವರಿಂದ ಹಣ ಅಥವಾ ಇತರ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. 2020ರ ಫೆಬ್ರವರಿ 23-24ರ ರಾತ್ರಿ ನಡೆದ ಸಭೆಯು ಪ್ರಾಸಿಕ್ಯೂಷನ್ ಹೇಳಿದಂತೆ ರಹಸ್ಯವಾಗಿರಲಿಲ್ಲ ಎಂದು ಪೈಸ್ ಹೇಳಿದ್ದಾರೆ.

ಖಾಲಿದ್ ಸೈಫಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ರೆಬೆಕ್ಕಾ ಜಾನ್ ಅವರು, “ನಿರುಪದ್ರವಿ’ ಸಂದೇಶಗಳ ಆಧಾರದ ಮೇಲೆ ಯುಎಪಿಎ ಅಥವಾ ಅವರ (ಪ್ರಾಸಿಕ್ಯೂಷನ್) ಅಂತಹ ಸಂದೇಶಗಳಿಂದ ಕಥೆಗಳನ್ನು ಸೃಷ್ಟಿಸಲು ಪ್ರಯತ್ನಿಸಬಹುದೇ, ಅದು ಜಾಮೀನು ನಿರಾಕರಿಸಲು ಒಂದು ಕಾರಣವಾಗಬಹುದೇ ಅಥವಾ ಯುಎಪಿಎ ಅಡಿಯಲ್ಲಿ ಮೊಕದ್ದಮೆ ಹೂಡಲು ಒಂದು ಕಾರಣವೇ?” ಎಂದು ವಾದಿಸಿದ್ದಾರೆ.

ಜೂನ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೂವರು ಸಹ-ಆರೋಪಿಗಳಂತೆಯೇ ಸೈಫಿ ಜಾಮೀನಿನ ಮೇಲೆ ಬಿಡುಗಡೆಗೆ ಅರ್ಹರು ಎಂದು ಹೇಳಿದ್ದಾರೆ.

ಶಾರ್ಜೀಲ್ ಇಮಾಮ್ ಅವರು ಎಲ್ಲಾ ಸಹ-ಆರೋಪಿಗಳಿಂದ ಸಂಪೂರ್ಣವಾಗಿ ಸಂಪರ್ಕ ಕಡಿದುಕೊಂಡಿದ್ದರು. ದೆಹಲಿ ಪೊಲೀಸರು ಆರೋಪಿಸಿದಂತೆ ಅವರು ಯಾವುದೇ ರೀತಿಯ ಪಿತೂರಿ ಸಭೆಗಳ ಭಾಗವಾಗಿರಲಿಲ್ಲ ಎಂದು ಶಾರ್ಜೀಲ್ ಪರ ವಕೀಲ ತಾಲಿಬ್ ಮುಸ್ತಫಾ ವಾದಿಸಿದ್ದಾರೆ.

ಇಮಾಮ್‌ ಗಲಭೆಯ ಹಿಂದಿನ ಪಿತೂರಿಯ ಭಾಗವಾಗಿದ್ದರು ಎಂದು ಜನವರಿ 23, 2023ರವರೆಗೆ ಪ್ರಾಸಿಕ್ಯೂಷನ್ ಹೇಳಿಕೊಂಡು ಬಂದಿತ್ತು. ಆದರೆ, ಕೊನೆಗೆ ಇಮಾಮ್ ಬಿಹಾರದಲ್ಲಿ ಮಾಡಿದ ಒಂದು ಭಾಷಣವನ್ನು ಮುಂದಿಟ್ಟು ಪೊಲೀಸರು ಆರೋಪ ಮಾಡಿದ್ದಾರೆ ಎಂದು ತಾಲಿಬ್ ಮುಸ್ತಫಾ ಹೇಳಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದು, “ಆರೋಪಿಗಳು ರಾಷ್ಟ್ರ ವಿರೋಧಿ ಕೃತ್ಯವೆಸಗಿರುವ ಆರೋಪ ಇರುವುದರಿಂದ ಅವರು ಖುಲಾಸೆಗೊಳ್ಳುವವರೆಗೆ ಅಥವಾ ಶಿಕ್ಷೆಗೊಳಗಾಗುವವರೆಗೆ ಜೈಲಿನಲ್ಲಿರುವುದು ಉತ್ತಮ” ಎಂದಿದ್ದಾರೆ.

“ಹೆಚ್ಚಿನ ಗಲಭೆ ಮತ್ತು ಬೆಂಕಿ ಹಚ್ಚುವಿಕೆಗೆ ನಿರ್ದಿಷ್ಟ ದಿನವನ್ನು ಆಯ್ಕೆ ಮಾಡುವ ಮೂಲಕ ಜಾಗತಿಕವಾಗಿ ರಾಷ್ಟ್ರದ ಹೆಸರು ಕೆಡಿಸುವುದು ಆರೋಪಿಗಳ ಉದ್ದೇಶವಾಗಿತ್ತು” ಎಂದು ಮೆಹ್ತಾ ಆರೋಪಿಸಿದ್ದಾರೆ.

ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ಕೂಡ ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ್ದರು.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಇನ್ನೊಂದು ಸಮನ್ವಯ ಪೀಠವು ಆರೋಪಿ ತಸ್ಲೀಮ್ ಅಹ್ಮದ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದೆ.

ತಸ್ಲೀಮ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಮೆಹಮೂದ್ ಪ್ರಾಚಾ ಅವರು, ವಿಚಾರಣೆ ವಿಳಂಬವನ್ನು ಉಲ್ಲೇಖಿಸಿ ಜಾಮೀನು ನೀಡುವಂತೆ ಕೋರಿದ್ದರು.

2020ರಲ್ಲಿ ದೆಹಲಿ ಪೊಲೀಸರ ವಿಶೇಷ ವಿಭಾಗವು ಭಾರತೀಯ ದಂಡ ಸಂಹಿತೆ, 1860 (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ಸಂಖ್ಯೆ 59 ಅನ್ನು ದಾಖಲಿಸಿತ್ತು.

ಈ ಪ್ರಕರಣದಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶಾರತ್ ಜಹಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ-ಉರ್-ರೆಹಮಾನ್, ಆಸಿಫ್ ಇಕ್ಬಾಲ್ ತನ್ಹಾ, ಶಾದಾಬ್ ಅಹಮದ್, ತಸ್ಲೀಮ್ ಅಹಮದ್, ಸಲೀಂ ಮಲಿಕ್, ಮೊಹಮ್ಮದ್ ಸಲೀಮ್ ಖಾನ್, ಅಥರ್ ಖಾನ್, ಸಫೂರ ಝರ್ಗರ್, ಶಾರ್ಜೀಲ್ ಇಮಾಮ್, ಫೈಝಾನ್ ಖಾನ್ ಮತ್ತು ನತಾಶಾ ನರ್ವಾಲ್ ಅವರನ್ನು ಆರೋಪಿಗಳಾಗಿ ಗುರುತಿಸಲಾಗಿದೆ.

ಈ ಪೈಕಿ ಆಸಿಫ್ ಇಕ್ಬಾಲ್ ತನ್ಹಾ, ನತಾಶಾ ನರ್ವಾಲ್ ಮತ್ತು ಸಫೂರ ಝರ್ಗರ್ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ.

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...