Homeಮುಖಪುಟದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಗಲಭೆಗಳ ಸಂದರ್ಭ ಬೆಂಕಿ ಹಚ್ಚಿದ್ದ, ಮಾರಕ ಆಯುಧಗಳೊಂದಿಗೆ ಗಲಭೆ ನಡೆಸಿದ್ದ ಮತ್ತು ಅಕ್ರಮವಾಗಿ ಗುಂಪು ಸೇರಿದ್ದ ಆರೋಪಗಳನ್ನು ಎದುರಿಸುತ್ತಿದ್ದ 11 ಜನರನ್ನು ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

“ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್ ಮತ್ತು  ಪ್ರಾಸಿಕ್ಯೂಷನ್ ಸಾಕ್ಷಿ 10 ಸಹಾಯಕ ಸಬ್-ಇನ್ಸ್ಪೆಕ್ಟರ್ ವನ್ವೀರ್ ಅವರು ಫೆಬ್ರವರಿ 24, 2020ರಂದು ಗಲಭೆಕೋರರಲ್ಲಿ ಆರೋಪಿಗಳನ್ನು ನಿಜವಾಗಿಯೂ ನೋಡಿ ಗುರುತಿಸಿದ್ದರೆ, ಅವರು ಇಷ್ಟು ದೀರ್ಘಾವಧಿಯವರೆಗೆ (10 ತಿಂಗಳುಗಳು) ಮೌನವಾಗಿದ್ದು ಏಕೆ? ಎಂದು ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಮೇ 14 ರಂದು ಆರೋಪಿಗಳನ್ನು ಖುಲಾಸೆಗೊಳಿಸುವಾಗ ತಮ್ಮ ಆದೇಶದಲ್ಲಿ ಪ್ರಶ್ನಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಿರುವಾಗ, ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್‌ ಅವರಿಗೆ ಆರೋಪಿಗಳ ಫೋಟೋಗಳನ್ನು ತೋರಿಸುವುದು ಅಸ್ವಾಭಾವಿಕ ಕ್ರಮವೆಂದು ತೋರುತ್ತದೆ. ಆರೋಪಿಗಳನ್ನು ಗುರುತಿಸಲು ಜಹಾಂಗೀರ್ ಅವರನ್ನು ಕೃತಕವಾಗಿ ಪ್ರತ್ಯಕ್ಷದರ್ಶಿಯನ್ನಾಗಿ ಮಾಡಲಾಗಿದೆ ಎಂಬ ಭಾವನೆ ಮೂಡುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.ಪೋಲಿಸರು ಆರೋಪಿಗಳನ್ನು ಗುರುತಿಸಿದ್ದು ವಿವಾದ ಮತ್ತು ಅನುಮಾನದಿಂದ ಹೊರತಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಗಲಭೆಯ ಸಮಯದಲ್ಲಿ ಗೋಕಲ್ಪುರಿಯಲ್ಲಿರುವ ತಮ್ಮ ‘ಕ್ರೌನ್ ಮೆಡಿಕೋಸ್’ ಅಂಗಡಿಗೆ ಬೆಂಕಿ ಹಚ್ಚಲಾಗಿದೆ, ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಇಮ್ರಾನ್ ಶೇಖ್ ಎಂಬವರು ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು.

ದೂರುದಾರರ ಅಂಗಡಿಯನ್ನು ಸುಟ್ಟು ಲೂಟಿ ಮಾಡಿದ್ದನ್ನು ಫೋಟೋಗಳು ಶಂಕಾತೀತವಾಗಿ ಸಾಬೀತುಗೊಳಿಸಿವೆ ಎಂದು ಹೇಳಿದ ನ್ಯಾಯಾಲಯ, 12 ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ನೆಚ್ಚಿಕೊಂಡಿದ್ದ ಪೋಲಿಸರು ಆರೋಪಿಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದಿದೆ.

ಆರೋಪಿಗಳ ವಿರುದ್ಧದ ಆರೋಪಗಳು ಶಂಕಾತೀತವಾಗಿ ಸಾಬೀತಾಗಿಲ್ಲ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು, ಅಂಕಿತ್ ಚೌಧರಿ, ಸುಮಿತ್, ಪಪ್ಪು, ವಿಜಯ, ಆಶಿಷ್ ಕುಮಾರ, ಸೌರಭ ಕೌಶಿಕ್, ಭೂಪೇಂದರ್, ಶಕ್ತಿಸಿಂಗ್, ಸಚಿನ್ ಕುಮಾರ್, ರಾಹುಲ್ ಮತ್ತು ಯೋಗೇಶ್ ಅವರನ್ನು ಖುಲಾಸೆಗೊಳಿಸಿದೆ.

2020ರ ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಈಶಾನ್ಯ ದೆಹಲಿ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದು ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೋಟ್ಯಂತರ ಮೌಲ್ಯದ ಆಸ್ತಿಗೆ ಹಾನಿಯಾಗಿತ್ತು. ಗಲಭೆಯ ನಂತರ ಈಶಾನ್ಯ ಜಿಲ್ಲಾ ಪೊಲೀಸರು ಒಟ್ಟು 700 ಪ್ರಕರಣಗಳನ್ನು ದಾಖಲಿಸಿದ್ದರು.

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...