Homeಮುಖಪುಟದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಗಲಭೆಗಳ ಸಂದರ್ಭ ಬೆಂಕಿ ಹಚ್ಚಿದ್ದ, ಮಾರಕ ಆಯುಧಗಳೊಂದಿಗೆ ಗಲಭೆ ನಡೆಸಿದ್ದ ಮತ್ತು ಅಕ್ರಮವಾಗಿ ಗುಂಪು ಸೇರಿದ್ದ ಆರೋಪಗಳನ್ನು ಎದುರಿಸುತ್ತಿದ್ದ 11 ಜನರನ್ನು ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

“ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್ ಮತ್ತು  ಪ್ರಾಸಿಕ್ಯೂಷನ್ ಸಾಕ್ಷಿ 10 ಸಹಾಯಕ ಸಬ್-ಇನ್ಸ್ಪೆಕ್ಟರ್ ವನ್ವೀರ್ ಅವರು ಫೆಬ್ರವರಿ 24, 2020ರಂದು ಗಲಭೆಕೋರರಲ್ಲಿ ಆರೋಪಿಗಳನ್ನು ನಿಜವಾಗಿಯೂ ನೋಡಿ ಗುರುತಿಸಿದ್ದರೆ, ಅವರು ಇಷ್ಟು ದೀರ್ಘಾವಧಿಯವರೆಗೆ (10 ತಿಂಗಳುಗಳು) ಮೌನವಾಗಿದ್ದು ಏಕೆ? ಎಂದು ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಮೇ 14 ರಂದು ಆರೋಪಿಗಳನ್ನು ಖುಲಾಸೆಗೊಳಿಸುವಾಗ ತಮ್ಮ ಆದೇಶದಲ್ಲಿ ಪ್ರಶ್ನಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಿರುವಾಗ, ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್‌ ಅವರಿಗೆ ಆರೋಪಿಗಳ ಫೋಟೋಗಳನ್ನು ತೋರಿಸುವುದು ಅಸ್ವಾಭಾವಿಕ ಕ್ರಮವೆಂದು ತೋರುತ್ತದೆ. ಆರೋಪಿಗಳನ್ನು ಗುರುತಿಸಲು ಜಹಾಂಗೀರ್ ಅವರನ್ನು ಕೃತಕವಾಗಿ ಪ್ರತ್ಯಕ್ಷದರ್ಶಿಯನ್ನಾಗಿ ಮಾಡಲಾಗಿದೆ ಎಂಬ ಭಾವನೆ ಮೂಡುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.ಪೋಲಿಸರು ಆರೋಪಿಗಳನ್ನು ಗುರುತಿಸಿದ್ದು ವಿವಾದ ಮತ್ತು ಅನುಮಾನದಿಂದ ಹೊರತಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಗಲಭೆಯ ಸಮಯದಲ್ಲಿ ಗೋಕಲ್ಪುರಿಯಲ್ಲಿರುವ ತಮ್ಮ ‘ಕ್ರೌನ್ ಮೆಡಿಕೋಸ್’ ಅಂಗಡಿಗೆ ಬೆಂಕಿ ಹಚ್ಚಲಾಗಿದೆ, ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಇಮ್ರಾನ್ ಶೇಖ್ ಎಂಬವರು ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು.

ದೂರುದಾರರ ಅಂಗಡಿಯನ್ನು ಸುಟ್ಟು ಲೂಟಿ ಮಾಡಿದ್ದನ್ನು ಫೋಟೋಗಳು ಶಂಕಾತೀತವಾಗಿ ಸಾಬೀತುಗೊಳಿಸಿವೆ ಎಂದು ಹೇಳಿದ ನ್ಯಾಯಾಲಯ, 12 ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ನೆಚ್ಚಿಕೊಂಡಿದ್ದ ಪೋಲಿಸರು ಆರೋಪಿಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದಿದೆ.

ಆರೋಪಿಗಳ ವಿರುದ್ಧದ ಆರೋಪಗಳು ಶಂಕಾತೀತವಾಗಿ ಸಾಬೀತಾಗಿಲ್ಲ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು, ಅಂಕಿತ್ ಚೌಧರಿ, ಸುಮಿತ್, ಪಪ್ಪು, ವಿಜಯ, ಆಶಿಷ್ ಕುಮಾರ, ಸೌರಭ ಕೌಶಿಕ್, ಭೂಪೇಂದರ್, ಶಕ್ತಿಸಿಂಗ್, ಸಚಿನ್ ಕುಮಾರ್, ರಾಹುಲ್ ಮತ್ತು ಯೋಗೇಶ್ ಅವರನ್ನು ಖುಲಾಸೆಗೊಳಿಸಿದೆ.

2020ರ ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಈಶಾನ್ಯ ದೆಹಲಿ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದು ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೋಟ್ಯಂತರ ಮೌಲ್ಯದ ಆಸ್ತಿಗೆ ಹಾನಿಯಾಗಿತ್ತು. ಗಲಭೆಯ ನಂತರ ಈಶಾನ್ಯ ಜಿಲ್ಲಾ ಪೊಲೀಸರು ಒಟ್ಟು 700 ಪ್ರಕರಣಗಳನ್ನು ದಾಖಲಿಸಿದ್ದರು.

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...