Homeಮುಖಪುಟದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಗಲಭೆಗಳ ಸಂದರ್ಭ ಬೆಂಕಿ ಹಚ್ಚಿದ್ದ, ಮಾರಕ ಆಯುಧಗಳೊಂದಿಗೆ ಗಲಭೆ ನಡೆಸಿದ್ದ ಮತ್ತು ಅಕ್ರಮವಾಗಿ ಗುಂಪು ಸೇರಿದ್ದ ಆರೋಪಗಳನ್ನು ಎದುರಿಸುತ್ತಿದ್ದ 11 ಜನರನ್ನು ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

“ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್ ಮತ್ತು  ಪ್ರಾಸಿಕ್ಯೂಷನ್ ಸಾಕ್ಷಿ 10 ಸಹಾಯಕ ಸಬ್-ಇನ್ಸ್ಪೆಕ್ಟರ್ ವನ್ವೀರ್ ಅವರು ಫೆಬ್ರವರಿ 24, 2020ರಂದು ಗಲಭೆಕೋರರಲ್ಲಿ ಆರೋಪಿಗಳನ್ನು ನಿಜವಾಗಿಯೂ ನೋಡಿ ಗುರುತಿಸಿದ್ದರೆ, ಅವರು ಇಷ್ಟು ದೀರ್ಘಾವಧಿಯವರೆಗೆ (10 ತಿಂಗಳುಗಳು) ಮೌನವಾಗಿದ್ದು ಏಕೆ? ಎಂದು ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಮೇ 14 ರಂದು ಆರೋಪಿಗಳನ್ನು ಖುಲಾಸೆಗೊಳಿಸುವಾಗ ತಮ್ಮ ಆದೇಶದಲ್ಲಿ ಪ್ರಶ್ನಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಿರುವಾಗ, ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್‌ ಅವರಿಗೆ ಆರೋಪಿಗಳ ಫೋಟೋಗಳನ್ನು ತೋರಿಸುವುದು ಅಸ್ವಾಭಾವಿಕ ಕ್ರಮವೆಂದು ತೋರುತ್ತದೆ. ಆರೋಪಿಗಳನ್ನು ಗುರುತಿಸಲು ಜಹಾಂಗೀರ್ ಅವರನ್ನು ಕೃತಕವಾಗಿ ಪ್ರತ್ಯಕ್ಷದರ್ಶಿಯನ್ನಾಗಿ ಮಾಡಲಾಗಿದೆ ಎಂಬ ಭಾವನೆ ಮೂಡುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.ಪೋಲಿಸರು ಆರೋಪಿಗಳನ್ನು ಗುರುತಿಸಿದ್ದು ವಿವಾದ ಮತ್ತು ಅನುಮಾನದಿಂದ ಹೊರತಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಗಲಭೆಯ ಸಮಯದಲ್ಲಿ ಗೋಕಲ್ಪುರಿಯಲ್ಲಿರುವ ತಮ್ಮ ‘ಕ್ರೌನ್ ಮೆಡಿಕೋಸ್’ ಅಂಗಡಿಗೆ ಬೆಂಕಿ ಹಚ್ಚಲಾಗಿದೆ, ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಇಮ್ರಾನ್ ಶೇಖ್ ಎಂಬವರು ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು.

ದೂರುದಾರರ ಅಂಗಡಿಯನ್ನು ಸುಟ್ಟು ಲೂಟಿ ಮಾಡಿದ್ದನ್ನು ಫೋಟೋಗಳು ಶಂಕಾತೀತವಾಗಿ ಸಾಬೀತುಗೊಳಿಸಿವೆ ಎಂದು ಹೇಳಿದ ನ್ಯಾಯಾಲಯ, 12 ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ನೆಚ್ಚಿಕೊಂಡಿದ್ದ ಪೋಲಿಸರು ಆರೋಪಿಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದಿದೆ.

ಆರೋಪಿಗಳ ವಿರುದ್ಧದ ಆರೋಪಗಳು ಶಂಕಾತೀತವಾಗಿ ಸಾಬೀತಾಗಿಲ್ಲ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು, ಅಂಕಿತ್ ಚೌಧರಿ, ಸುಮಿತ್, ಪಪ್ಪು, ವಿಜಯ, ಆಶಿಷ್ ಕುಮಾರ, ಸೌರಭ ಕೌಶಿಕ್, ಭೂಪೇಂದರ್, ಶಕ್ತಿಸಿಂಗ್, ಸಚಿನ್ ಕುಮಾರ್, ರಾಹುಲ್ ಮತ್ತು ಯೋಗೇಶ್ ಅವರನ್ನು ಖುಲಾಸೆಗೊಳಿಸಿದೆ.

2020ರ ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಈಶಾನ್ಯ ದೆಹಲಿ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದು ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೋಟ್ಯಂತರ ಮೌಲ್ಯದ ಆಸ್ತಿಗೆ ಹಾನಿಯಾಗಿತ್ತು. ಗಲಭೆಯ ನಂತರ ಈಶಾನ್ಯ ಜಿಲ್ಲಾ ಪೊಲೀಸರು ಒಟ್ಟು 700 ಪ್ರಕರಣಗಳನ್ನು ದಾಖಲಿಸಿದ್ದರು.

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...