Homeಮುಖಪುಟದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಶಾರ್ಜೀಲ್ ಇಮಾಮ್ ಮಾಡಿದ ಪ್ರಚೋದನಕಾರಿ ಎನ್ನಲಾದ ಭಾಷಣಗಳ ಕೆಲವು ವಿಡಿಯೋ ತುಣುಕುಗಳನ್ನು ನ್ಯಾಯಾಲಯದಲ್ಲಿ ತೋರಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.
ವಿಡಿಯೋದಲ್ಲಿ, "ಭಾರತದ ಎಲ್ಲಾ ನಗರಗಳಲ್ಲಿ ಚಕ್ಕಾ-ಜಾಮ್ (ರಸ್ತೆ ತಡೆ) ಮಾಡಬೇಕು. ಮುಸ್ಲಿಮರು ಒಗ್ಗೂಡಿ, ಅಸ್ಸಾಂ ಮತ್ತು ಉತ್ತರ-ಈಶಾನ್ಯ ಭಾರತವನ್ನು ಮುಖ್ಯ ಭೂಭಾಗದಿಂದ ಬೇರ್ಪಡಿಸುವ 'ಚಿಕನ್ ನೆಕ್' (ಸಿಲಿಗುರಿ ಕಾರಿಡಾರ್) ಪ್ರದೇಶವನ್ನು ಬೇರ್ಪಡಿಸಬೇಕು. ದೆಹಲಿಗೆ ಅಗತ್ಯ ವಸ್ತುಗಳ ಸರಬರಾಜನ್ನು ತಡೆಯಬೇಕು. ಸರ್ಕಾರವನ್ನು ಸಂಪೂರ್ಣವಾಗಿ ಪ್ಯಾರಲೈಸ್ (ಕೆಲಸ ಮಾಡಲು ಬಿಡದಂತೆ) ಮಾಡಬೇಕು" ಈ ರೀತಿಯ ಹೇಳಿಕೆಗಳನ್ನು ಶಾರ್ಜೀಲ್ ಇಮಾಮ್ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ.

ಭಾಷಣಗಳು ಸಾಕ್ಷ್ಯದ ಭಾಗವಾಗಿದೆಯೇ ಎಂದು ಪೀಠ ಕೇಳಿದಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಸಕಾರಾತ್ಮಕವಾಗಿ ಉತ್ತರಿಸಿದರು ಎಂದು ವರದಿ ತಿಳಿಸಿದೆ.

ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಈ ವಿಡಿಯೋಗಳಲ್ಲಿ ಭಾಷಣದ ಪೂರ್ಣ ಸಂದರ್ಭವನ್ನು ತೋರಿಸದೆ, ಕೇವಲ ಆಯ್ದ ಭಾಗಗಳನ್ನು ಮಾತ್ರ ತೋರಿಸಲಾಗಿದೆ (ಅಂದರೆ ಸಂಪೂರ್ಣ ಭಾಷಣವನ್ನು ತಿರುಚಿ ಅಥವಾ ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ) ಎಂದು ಹೇಳಿದ್ದಾರೆ.

ದೆಹಲಿ ಪ್ರೊಟೆಸ್ಟ್‌ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಂ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಹಲವು ಸಂದೇಶಗಳನ್ನು ಉಲ್ಲೇಖಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ಆರೋಪಿಗಳ ಉದ್ದೇಶವು ಸರ್ಕಾರವನ್ನು ಉರುಳಿಸುವುದು ಮತ್ತು ಹಿಂಸಾತ್ಮಕ ಗಲಭೆಗಳ ಮೂಲಕ ಆಡಳಿತ ಬದಲಾವಣೆ (ರೆಜೀಮ್ ಚೇಂಜ್) ತರುವುದಾಗಿತ್ತು. ಈ ಗಲಭೆಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಪ್ರವಾಸದೊಂದಿಗೆ ತಾದಾತ್ಮ್ಯವಾಗಿ (ಒಟ್ಟಿಗೆ ಸಂಭವಿಸುವಂತೆ) ಯೋಜಿಸಲಾಗಿತ್ತು” ಎಂದು ವಾದಿಸಿದ್ದಾರೆ.

“ಆರೋಪಿಗಳನ್ನು ಬುದ್ಧಿಜೀವಿಗಳು ಮತ್ತು ಹೋರಾಟಗಾರರ ವೇಷ ಧರಿಸಿರುವ ರಾಷ್ಟ್ರವಿರೋಧಿಗಳು ಮತ್ತು ಸಮಾಜದ ಸ್ವಾಸ್ಥ್ಯ ಕದಡುವವರು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

“ಜಾಮೀನು ವಿಷಯ ಬಂದಾಗಲೆಲ್ಲಾ, ನ್ಯೂಯಾರ್ಕ್ ಟೈಮ್ಸ್ ಏನನ್ನಾದರೂ ಪ್ರಕಟಿಸುತ್ತದೆ. ಬುದ್ಧಿಜೀವಿಗಳು ಎಂಬ ಸೋಗಿನಲ್ಲಿ ಅವರು ದೇಶ ವಿರೋಧಿಗಳು ಎಂದು ಅರಿತುಕೊಳ್ಳದೆ ಸಾಮಾಜಿಕ ಮಾಧ್ಯಮಗಳು ಸಕ್ರಿಯವಾಗುತ್ತವೆ” ಹೆಚ್ಚುವರಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲವು ಸಂರಕ್ಷಿತ ಸಾಕ್ಷಿಗಳ ಹೇಳಿಕೆಗಳನ್ನು ಕೂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ಉಲ್ಲೇಖಿಸಿದ್ದಾರೆ, ಈ ವೇಳೆ ನ್ಯಾಯಾಧೀಶ ಕುಮಾರ್ ಅವರು ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ಸಾಕ್ಷ್ಯವನ್ನು ಮೌಲ್ಯಮಾಪನ ಮಾಡಬಹುದೇ ಎಂದು ಕೇಳಿದ್ದಾರೆ. ಆಗ, ಸಾಕ್ಷ್ಯಗಳ ನಿಖರತೆಯನ್ನು ನ್ಯಾಯಾಲಯ ಪರಿಶೀಲಿಸುವ ಅಗತ್ಯವಿಲ್ಲ ಎಂದ ಹೆಚ್ಚುವರಿ ಸಾಲಿಸಿಟರ್ ಜನರಲ್, ಪ್ರಕರಣಕ್ಕೆ ಪ್ರಾಥಮಿಕ ಪುರಾವೆಗಳಿವೆ ಎಂದು ತೋರಿಸುವುದು ಮಾತ್ರ ನನ್ನ ಪ್ರಯತ್ನವಾಗಿದೆ ಎಂದಿದ್ದಾರೆ.

ವಿಚಾರಣೆ ನಾಳೆ (ನವೆಂಬರ್ 21) ಮುಂದುವರಿಯಲಿದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಉಮರ್ ಖಾಲಿದ್‌ ಅವರನ್ನು ಸಹ ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಜೊತೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾರಣ, ಯುಎಪಿಎ ಕಾಯ್ದೆಯ ತಪ್ಪಾದ ವ್ಯಾಖ್ಯಾನದ ಮೇಲೆ 2021ರಲ್ಲಿ ದೆಹಲಿ ಹೈಕೋರ್ಟ್ ಆ ಮೂವರಿಗೆ ಜಾಮೀನು ನೀಡಿದೆ ಎಂದು ದೆಹಲಿ ಪೊಲೀಸರು ಸೋಮವಾರ (ನವೆಂಬರ್ 17) ವಾದಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಿಂದ ಮೊದಲು, ಸ್ವಲ್ಪ ಹೊತ್ತು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಗಳು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದೇಶದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುವಂತಹ ಪೂರ್ವ ಯೋಜಿತ ಪಿತೂರಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...