Homeಮುಖಪುಟದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಶಾರ್ಜೀಲ್ ಇಮಾಮ್ ಮಾಡಿದ ಪ್ರಚೋದನಕಾರಿ ಎನ್ನಲಾದ ಭಾಷಣಗಳ ಕೆಲವು ವಿಡಿಯೋ ತುಣುಕುಗಳನ್ನು ನ್ಯಾಯಾಲಯದಲ್ಲಿ ತೋರಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.
ವಿಡಿಯೋದಲ್ಲಿ, "ಭಾರತದ ಎಲ್ಲಾ ನಗರಗಳಲ್ಲಿ ಚಕ್ಕಾ-ಜಾಮ್ (ರಸ್ತೆ ತಡೆ) ಮಾಡಬೇಕು. ಮುಸ್ಲಿಮರು ಒಗ್ಗೂಡಿ, ಅಸ್ಸಾಂ ಮತ್ತು ಉತ್ತರ-ಈಶಾನ್ಯ ಭಾರತವನ್ನು ಮುಖ್ಯ ಭೂಭಾಗದಿಂದ ಬೇರ್ಪಡಿಸುವ 'ಚಿಕನ್ ನೆಕ್' (ಸಿಲಿಗುರಿ ಕಾರಿಡಾರ್) ಪ್ರದೇಶವನ್ನು ಬೇರ್ಪಡಿಸಬೇಕು. ದೆಹಲಿಗೆ ಅಗತ್ಯ ವಸ್ತುಗಳ ಸರಬರಾಜನ್ನು ತಡೆಯಬೇಕು. ಸರ್ಕಾರವನ್ನು ಸಂಪೂರ್ಣವಾಗಿ ಪ್ಯಾರಲೈಸ್ (ಕೆಲಸ ಮಾಡಲು ಬಿಡದಂತೆ) ಮಾಡಬೇಕು" ಈ ರೀತಿಯ ಹೇಳಿಕೆಗಳನ್ನು ಶಾರ್ಜೀಲ್ ಇಮಾಮ್ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ.

ಭಾಷಣಗಳು ಸಾಕ್ಷ್ಯದ ಭಾಗವಾಗಿದೆಯೇ ಎಂದು ಪೀಠ ಕೇಳಿದಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಸಕಾರಾತ್ಮಕವಾಗಿ ಉತ್ತರಿಸಿದರು ಎಂದು ವರದಿ ತಿಳಿಸಿದೆ.

ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಈ ವಿಡಿಯೋಗಳಲ್ಲಿ ಭಾಷಣದ ಪೂರ್ಣ ಸಂದರ್ಭವನ್ನು ತೋರಿಸದೆ, ಕೇವಲ ಆಯ್ದ ಭಾಗಗಳನ್ನು ಮಾತ್ರ ತೋರಿಸಲಾಗಿದೆ (ಅಂದರೆ ಸಂಪೂರ್ಣ ಭಾಷಣವನ್ನು ತಿರುಚಿ ಅಥವಾ ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ) ಎಂದು ಹೇಳಿದ್ದಾರೆ.

ದೆಹಲಿ ಪ್ರೊಟೆಸ್ಟ್‌ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಂ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಹಲವು ಸಂದೇಶಗಳನ್ನು ಉಲ್ಲೇಖಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ಆರೋಪಿಗಳ ಉದ್ದೇಶವು ಸರ್ಕಾರವನ್ನು ಉರುಳಿಸುವುದು ಮತ್ತು ಹಿಂಸಾತ್ಮಕ ಗಲಭೆಗಳ ಮೂಲಕ ಆಡಳಿತ ಬದಲಾವಣೆ (ರೆಜೀಮ್ ಚೇಂಜ್) ತರುವುದಾಗಿತ್ತು. ಈ ಗಲಭೆಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಪ್ರವಾಸದೊಂದಿಗೆ ತಾದಾತ್ಮ್ಯವಾಗಿ (ಒಟ್ಟಿಗೆ ಸಂಭವಿಸುವಂತೆ) ಯೋಜಿಸಲಾಗಿತ್ತು” ಎಂದು ವಾದಿಸಿದ್ದಾರೆ.

“ಆರೋಪಿಗಳನ್ನು ಬುದ್ಧಿಜೀವಿಗಳು ಮತ್ತು ಹೋರಾಟಗಾರರ ವೇಷ ಧರಿಸಿರುವ ರಾಷ್ಟ್ರವಿರೋಧಿಗಳು ಮತ್ತು ಸಮಾಜದ ಸ್ವಾಸ್ಥ್ಯ ಕದಡುವವರು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

“ಜಾಮೀನು ವಿಷಯ ಬಂದಾಗಲೆಲ್ಲಾ, ನ್ಯೂಯಾರ್ಕ್ ಟೈಮ್ಸ್ ಏನನ್ನಾದರೂ ಪ್ರಕಟಿಸುತ್ತದೆ. ಬುದ್ಧಿಜೀವಿಗಳು ಎಂಬ ಸೋಗಿನಲ್ಲಿ ಅವರು ದೇಶ ವಿರೋಧಿಗಳು ಎಂದು ಅರಿತುಕೊಳ್ಳದೆ ಸಾಮಾಜಿಕ ಮಾಧ್ಯಮಗಳು ಸಕ್ರಿಯವಾಗುತ್ತವೆ” ಹೆಚ್ಚುವರಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲವು ಸಂರಕ್ಷಿತ ಸಾಕ್ಷಿಗಳ ಹೇಳಿಕೆಗಳನ್ನು ಕೂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ಉಲ್ಲೇಖಿಸಿದ್ದಾರೆ, ಈ ವೇಳೆ ನ್ಯಾಯಾಧೀಶ ಕುಮಾರ್ ಅವರು ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ಸಾಕ್ಷ್ಯವನ್ನು ಮೌಲ್ಯಮಾಪನ ಮಾಡಬಹುದೇ ಎಂದು ಕೇಳಿದ್ದಾರೆ. ಆಗ, ಸಾಕ್ಷ್ಯಗಳ ನಿಖರತೆಯನ್ನು ನ್ಯಾಯಾಲಯ ಪರಿಶೀಲಿಸುವ ಅಗತ್ಯವಿಲ್ಲ ಎಂದ ಹೆಚ್ಚುವರಿ ಸಾಲಿಸಿಟರ್ ಜನರಲ್, ಪ್ರಕರಣಕ್ಕೆ ಪ್ರಾಥಮಿಕ ಪುರಾವೆಗಳಿವೆ ಎಂದು ತೋರಿಸುವುದು ಮಾತ್ರ ನನ್ನ ಪ್ರಯತ್ನವಾಗಿದೆ ಎಂದಿದ್ದಾರೆ.

ವಿಚಾರಣೆ ನಾಳೆ (ನವೆಂಬರ್ 21) ಮುಂದುವರಿಯಲಿದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಉಮರ್ ಖಾಲಿದ್‌ ಅವರನ್ನು ಸಹ ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಜೊತೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾರಣ, ಯುಎಪಿಎ ಕಾಯ್ದೆಯ ತಪ್ಪಾದ ವ್ಯಾಖ್ಯಾನದ ಮೇಲೆ 2021ರಲ್ಲಿ ದೆಹಲಿ ಹೈಕೋರ್ಟ್ ಆ ಮೂವರಿಗೆ ಜಾಮೀನು ನೀಡಿದೆ ಎಂದು ದೆಹಲಿ ಪೊಲೀಸರು ಸೋಮವಾರ (ನವೆಂಬರ್ 17) ವಾದಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಿಂದ ಮೊದಲು, ಸ್ವಲ್ಪ ಹೊತ್ತು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಗಳು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದೇಶದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುವಂತಹ ಪೂರ್ವ ಯೋಜಿತ ಪಿತೂರಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...