Homeಮುಖಪುಟದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಶಾರ್ಜೀಲ್ ಇಮಾಮ್ ಮಾಡಿದ ಪ್ರಚೋದನಕಾರಿ ಎನ್ನಲಾದ ಭಾಷಣಗಳ ಕೆಲವು ವಿಡಿಯೋ ತುಣುಕುಗಳನ್ನು ನ್ಯಾಯಾಲಯದಲ್ಲಿ ತೋರಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.
ವಿಡಿಯೋದಲ್ಲಿ, "ಭಾರತದ ಎಲ್ಲಾ ನಗರಗಳಲ್ಲಿ ಚಕ್ಕಾ-ಜಾಮ್ (ರಸ್ತೆ ತಡೆ) ಮಾಡಬೇಕು. ಮುಸ್ಲಿಮರು ಒಗ್ಗೂಡಿ, ಅಸ್ಸಾಂ ಮತ್ತು ಉತ್ತರ-ಈಶಾನ್ಯ ಭಾರತವನ್ನು ಮುಖ್ಯ ಭೂಭಾಗದಿಂದ ಬೇರ್ಪಡಿಸುವ 'ಚಿಕನ್ ನೆಕ್' (ಸಿಲಿಗುರಿ ಕಾರಿಡಾರ್) ಪ್ರದೇಶವನ್ನು ಬೇರ್ಪಡಿಸಬೇಕು. ದೆಹಲಿಗೆ ಅಗತ್ಯ ವಸ್ತುಗಳ ಸರಬರಾಜನ್ನು ತಡೆಯಬೇಕು. ಸರ್ಕಾರವನ್ನು ಸಂಪೂರ್ಣವಾಗಿ ಪ್ಯಾರಲೈಸ್ (ಕೆಲಸ ಮಾಡಲು ಬಿಡದಂತೆ) ಮಾಡಬೇಕು" ಈ ರೀತಿಯ ಹೇಳಿಕೆಗಳನ್ನು ಶಾರ್ಜೀಲ್ ಇಮಾಮ್ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ.

ಭಾಷಣಗಳು ಸಾಕ್ಷ್ಯದ ಭಾಗವಾಗಿದೆಯೇ ಎಂದು ಪೀಠ ಕೇಳಿದಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಸಕಾರಾತ್ಮಕವಾಗಿ ಉತ್ತರಿಸಿದರು ಎಂದು ವರದಿ ತಿಳಿಸಿದೆ.

ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಈ ವಿಡಿಯೋಗಳಲ್ಲಿ ಭಾಷಣದ ಪೂರ್ಣ ಸಂದರ್ಭವನ್ನು ತೋರಿಸದೆ, ಕೇವಲ ಆಯ್ದ ಭಾಗಗಳನ್ನು ಮಾತ್ರ ತೋರಿಸಲಾಗಿದೆ (ಅಂದರೆ ಸಂಪೂರ್ಣ ಭಾಷಣವನ್ನು ತಿರುಚಿ ಅಥವಾ ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ) ಎಂದು ಹೇಳಿದ್ದಾರೆ.

ದೆಹಲಿ ಪ್ರೊಟೆಸ್ಟ್‌ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಂ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಹಲವು ಸಂದೇಶಗಳನ್ನು ಉಲ್ಲೇಖಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ಆರೋಪಿಗಳ ಉದ್ದೇಶವು ಸರ್ಕಾರವನ್ನು ಉರುಳಿಸುವುದು ಮತ್ತು ಹಿಂಸಾತ್ಮಕ ಗಲಭೆಗಳ ಮೂಲಕ ಆಡಳಿತ ಬದಲಾವಣೆ (ರೆಜೀಮ್ ಚೇಂಜ್) ತರುವುದಾಗಿತ್ತು. ಈ ಗಲಭೆಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಪ್ರವಾಸದೊಂದಿಗೆ ತಾದಾತ್ಮ್ಯವಾಗಿ (ಒಟ್ಟಿಗೆ ಸಂಭವಿಸುವಂತೆ) ಯೋಜಿಸಲಾಗಿತ್ತು” ಎಂದು ವಾದಿಸಿದ್ದಾರೆ.

“ಆರೋಪಿಗಳನ್ನು ಬುದ್ಧಿಜೀವಿಗಳು ಮತ್ತು ಹೋರಾಟಗಾರರ ವೇಷ ಧರಿಸಿರುವ ರಾಷ್ಟ್ರವಿರೋಧಿಗಳು ಮತ್ತು ಸಮಾಜದ ಸ್ವಾಸ್ಥ್ಯ ಕದಡುವವರು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

“ಜಾಮೀನು ವಿಷಯ ಬಂದಾಗಲೆಲ್ಲಾ, ನ್ಯೂಯಾರ್ಕ್ ಟೈಮ್ಸ್ ಏನನ್ನಾದರೂ ಪ್ರಕಟಿಸುತ್ತದೆ. ಬುದ್ಧಿಜೀವಿಗಳು ಎಂಬ ಸೋಗಿನಲ್ಲಿ ಅವರು ದೇಶ ವಿರೋಧಿಗಳು ಎಂದು ಅರಿತುಕೊಳ್ಳದೆ ಸಾಮಾಜಿಕ ಮಾಧ್ಯಮಗಳು ಸಕ್ರಿಯವಾಗುತ್ತವೆ” ಹೆಚ್ಚುವರಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲವು ಸಂರಕ್ಷಿತ ಸಾಕ್ಷಿಗಳ ಹೇಳಿಕೆಗಳನ್ನು ಕೂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ಉಲ್ಲೇಖಿಸಿದ್ದಾರೆ, ಈ ವೇಳೆ ನ್ಯಾಯಾಧೀಶ ಕುಮಾರ್ ಅವರು ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ಸಾಕ್ಷ್ಯವನ್ನು ಮೌಲ್ಯಮಾಪನ ಮಾಡಬಹುದೇ ಎಂದು ಕೇಳಿದ್ದಾರೆ. ಆಗ, ಸಾಕ್ಷ್ಯಗಳ ನಿಖರತೆಯನ್ನು ನ್ಯಾಯಾಲಯ ಪರಿಶೀಲಿಸುವ ಅಗತ್ಯವಿಲ್ಲ ಎಂದ ಹೆಚ್ಚುವರಿ ಸಾಲಿಸಿಟರ್ ಜನರಲ್, ಪ್ರಕರಣಕ್ಕೆ ಪ್ರಾಥಮಿಕ ಪುರಾವೆಗಳಿವೆ ಎಂದು ತೋರಿಸುವುದು ಮಾತ್ರ ನನ್ನ ಪ್ರಯತ್ನವಾಗಿದೆ ಎಂದಿದ್ದಾರೆ.

ವಿಚಾರಣೆ ನಾಳೆ (ನವೆಂಬರ್ 21) ಮುಂದುವರಿಯಲಿದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಉಮರ್ ಖಾಲಿದ್‌ ಅವರನ್ನು ಸಹ ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಜೊತೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾರಣ, ಯುಎಪಿಎ ಕಾಯ್ದೆಯ ತಪ್ಪಾದ ವ್ಯಾಖ್ಯಾನದ ಮೇಲೆ 2021ರಲ್ಲಿ ದೆಹಲಿ ಹೈಕೋರ್ಟ್ ಆ ಮೂವರಿಗೆ ಜಾಮೀನು ನೀಡಿದೆ ಎಂದು ದೆಹಲಿ ಪೊಲೀಸರು ಸೋಮವಾರ (ನವೆಂಬರ್ 17) ವಾದಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಿಂದ ಮೊದಲು, ಸ್ವಲ್ಪ ಹೊತ್ತು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಗಳು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದೇಶದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುವಂತಹ ಪೂರ್ವ ಯೋಜಿತ ಪಿತೂರಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...