Homeಮುಖಪುಟದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ...

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರಾಸಿಕ್ಯೂಷನ್‌ಗೆ ಹೆಚ್ಚುವರಿ ಸಮಯ ನೀಡಲು ನಿರಾಕರಿಸಿದ ನ್ಯಾಯಾಲಯ

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 27) ತಿರಸ್ಕರಿಸಿದೆ.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು, ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕುಮಾರ್ ಅವರು, “ನಾವು ನಿಮಗೆ ಸಾಕಷ್ಟು ಸಮಯ ನೀಡಿದ್ದೇವೆ. ನೀವು ಮೊದಲ ಬಾರಿಗೆ ಹಾಜರಾಗುತ್ತಿರಬಹುದು. ಕಳೆದ ಬಾರಿ ನಾವು ನೋಟಿಸ್ ಜಾರಿ ಮಾಡುವಂತೆ ಮತ್ತು ಮುಕ್ತ ನ್ಯಾಯಾಲಯದಲ್ಲಿ ಅಕ್ಟೋಬರ್ 27ರಂದು ಈ ವಿಷಯವನ್ನು ಆಲಿಸಿ ಇತ್ಯರ್ಥಪಡಿಸುವುದಾಗಿ ಹೇಳಿದ್ದೆವು” ಎಂದಿದ್ದಾರೆ.

ಇದೇ ವೇಳೆ ನ್ಯಾಯಮೂರ್ತಿ ಕುಮಾರ್ ಅವರು ಜಾಮೀನು ಪ್ರಕರಣದಲ್ಲಿ ಪ್ರತಿ-ಅಫಿಡವಿಟ್‌ನ ಮಹತ್ವವನ್ನು ಪ್ರಶ್ನಿಸಿದ್ದಾರೆ. ಎಎಸ್‌ಜಿ ಪ್ರತಿ ಅಫಿಡವಿಟ್ ದಾಖಲಿಸಲು ಎರಡು ವಾರಗಳ ಸಮಯ ಕೇಳಿದಾಗ ನ್ಯಾಯಾಧೀಶರು ಅದಕ್ಕೆ ಒಪ್ಪಿಲ್ಲ. ಒಂದು ವಾರದ ಕಾಲಾವಕಾಶ ಕೇಳಿದಾಗಲೂ ಒಪ್ಪಿಗೆ ನೀಡಿಲ್ಲ. ಇದು ತೀರ್ಪಿನ ತುರ್ತು ಸ್ವರೂಪವನ್ನು ತೋರಿಸುತ್ತದೆ.

ಉಮರ್ ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಅರ್ಜಿದಾರರು ಕಳೆದ 5 ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ ಎಂಬುವುದನ್ನು ಎತ್ತಿ ತೋರಿಸಿದ್ದಾರೆ. ಹಿರಿಯ ವಕೀಲ ಎ.ಎಂ. ಸಿಂಘ್ವಿ ಅವರು ಇಡೀ ಪ್ರಕರಣದಲ್ಲಿ ವಿಳಂಬವನ್ನು ಉಲ್ಲೇಖಿಸಿದ್ದು, ಇನ್ನೂ ಹೆಚ್ಚಿನ ವಿಳಂಬ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಅಂತಿಮವಾಗಿ, ನ್ಯಾಯಪೀಠ ಈ ವಿಷಯವನ್ನು ಶುಕ್ರವಾರಕ್ಕೆ ಮುಂದೂಡಲು ಒಪ್ಪಿತು. ಎಎಸ್‌ಜಿ ರಾಜು ಅವರಿಗೆ, “ನೀವು ಏನಾದರೂ ಯೋಚಿಸಬಹುದೇ ಎಂದು ಪರಿಶೀಲಿಸಿ” ಎಂದು ನ್ಯಾ. ಕುಮಾರ್ ಹೇಳಿದ್ದಾರೆ. ವಿಳಂಬದ ಆಧಾರದ ಮೇಲೆ ಜಾಮೀನು ನೀಡಬಹುದೇ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಎಸ್‌ಜಿ ತಾವು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿದರೂ, “ಮೇಲ್ನೋಟಕ್ಕೆ ಕಾಣುವ ವಿಷಯಗಳು ಕೆಲವೊಮ್ಮೆ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು” ಎಂದಿದ್ದಾರೆ. ಇದಕ್ಕೆ ನ್ಯಾ. ಕುಮಾರ್, “ತಾವು ಎಲ್ಲವನ್ನೂ ವಿವರವಾಗಿ ಓದಿಲ್ಲವಾದರೂ, ಇದು ಜಾಮೀನಿನ ಪ್ರಕರಣವಾಗಿದ್ದು, ಆರೋಪಿಗಳು ಈಗಾಗಲೇ ಐದು ವರ್ಷಗಳ ಕಾಲಾವಧಿಯನ್ನು ಜೈಲಿನಲ್ಲಿ ಪೂರ್ಣಗೊಳಿಸಿದ್ದಾರೆ” ಎಂದು ಹೇಳಿದ್ದಾರೆ. ಇದರಿಂದ ವಿಳಂಬದ ಆಧಾರದ ಮೇಲೆ ಜಾಮೀನು ಪರಿಗಣಿಸಬಹುದು ಎಂಬ ಸೂಚನೆಯಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್ (ಖಾಲಿದ್ ಪರವಾಗಿ), ಎ.ಎಂ. ಸಿಂಘ್ವಿ (ಫಾತಿಮಾ ಪರವಾಗಿ), ಸಿದ್ಧಾರ್ಥ್ ದೇವ್ (ಇಮಾಮ್ ಪರವಾಗಿ), ಸಿದ್ಧಾರ್ಥ್ ಅಗರ್ವಾಲ್ ಮುಂತಾದವರು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.

ಸೆಪ್ಟೆಂಬರ್ 19ರಂದು, ಈ ವಿಷಯವನ್ನು ನ್ಯಾಯಮೂರ್ತಿ ಕುಮಾರ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠದ ಮುಂದೆ ಇಡಲಾಗಿತ್ತು. ಆದರೆ, ಕಪಿಲ್ ಸಿಬಲ್ ಅವರು ಈ ಹಿಂದೆ ಅವರ ಕೊಠಡಿಯಲ್ಲಿ ಸಹವರ್ತಿಯಾಗಿದ್ದರಿಂದ ಅವರು ಹಿಂದೆ ಸರಿದಿದ್ದರು. ಅದಕ್ಕೂ ಮೊದಲು, ಸೆಪ್ಟೆಂಬರ್ 12 ರಂದು ಪ್ರಕರಣವನ್ನು ಮೊದಲು ಪಟ್ಟಿ ಮಾಡಿದಾಗ, ಪೀಠವು ಫೈಲ್‌ಗಳನ್ನು ತಡವಾಗಿ ಸ್ವೀಕರಿಸಿದ್ದರಿಂದ ನ್ಯಾಯಾಲಯವು ಪ್ರಕರಣವನ್ನು ಆಲಿಸಲು ಸಾಧ್ಯವಾಗಿರಲಿಲ್ಲ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ದೆಹಲಿ ಪೊಲೀಸರ ವಿಶೇಷ ಘಟಕವು ದಾಖಲಿಸಿರುವ 2020ರ ಎಫ್‌ಐಆರ್ ಸಂಖ್ಯೆ 59 ರಲ್ಲಿ ತೀರ್ಪು ಪ್ರಕಟಿಸಿತ್ತು.

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...