Homeಮುಖಪುಟದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ...

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರಾಸಿಕ್ಯೂಷನ್‌ಗೆ ಹೆಚ್ಚುವರಿ ಸಮಯ ನೀಡಲು ನಿರಾಕರಿಸಿದ ನ್ಯಾಯಾಲಯ

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 27) ತಿರಸ್ಕರಿಸಿದೆ.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು, ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕುಮಾರ್ ಅವರು, “ನಾವು ನಿಮಗೆ ಸಾಕಷ್ಟು ಸಮಯ ನೀಡಿದ್ದೇವೆ. ನೀವು ಮೊದಲ ಬಾರಿಗೆ ಹಾಜರಾಗುತ್ತಿರಬಹುದು. ಕಳೆದ ಬಾರಿ ನಾವು ನೋಟಿಸ್ ಜಾರಿ ಮಾಡುವಂತೆ ಮತ್ತು ಮುಕ್ತ ನ್ಯಾಯಾಲಯದಲ್ಲಿ ಅಕ್ಟೋಬರ್ 27ರಂದು ಈ ವಿಷಯವನ್ನು ಆಲಿಸಿ ಇತ್ಯರ್ಥಪಡಿಸುವುದಾಗಿ ಹೇಳಿದ್ದೆವು” ಎಂದಿದ್ದಾರೆ.

ಇದೇ ವೇಳೆ ನ್ಯಾಯಮೂರ್ತಿ ಕುಮಾರ್ ಅವರು ಜಾಮೀನು ಪ್ರಕರಣದಲ್ಲಿ ಪ್ರತಿ-ಅಫಿಡವಿಟ್‌ನ ಮಹತ್ವವನ್ನು ಪ್ರಶ್ನಿಸಿದ್ದಾರೆ. ಎಎಸ್‌ಜಿ ಪ್ರತಿ ಅಫಿಡವಿಟ್ ದಾಖಲಿಸಲು ಎರಡು ವಾರಗಳ ಸಮಯ ಕೇಳಿದಾಗ ನ್ಯಾಯಾಧೀಶರು ಅದಕ್ಕೆ ಒಪ್ಪಿಲ್ಲ. ಒಂದು ವಾರದ ಕಾಲಾವಕಾಶ ಕೇಳಿದಾಗಲೂ ಒಪ್ಪಿಗೆ ನೀಡಿಲ್ಲ. ಇದು ತೀರ್ಪಿನ ತುರ್ತು ಸ್ವರೂಪವನ್ನು ತೋರಿಸುತ್ತದೆ.

ಉಮರ್ ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಅರ್ಜಿದಾರರು ಕಳೆದ 5 ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ ಎಂಬುವುದನ್ನು ಎತ್ತಿ ತೋರಿಸಿದ್ದಾರೆ. ಹಿರಿಯ ವಕೀಲ ಎ.ಎಂ. ಸಿಂಘ್ವಿ ಅವರು ಇಡೀ ಪ್ರಕರಣದಲ್ಲಿ ವಿಳಂಬವನ್ನು ಉಲ್ಲೇಖಿಸಿದ್ದು, ಇನ್ನೂ ಹೆಚ್ಚಿನ ವಿಳಂಬ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಅಂತಿಮವಾಗಿ, ನ್ಯಾಯಪೀಠ ಈ ವಿಷಯವನ್ನು ಶುಕ್ರವಾರಕ್ಕೆ ಮುಂದೂಡಲು ಒಪ್ಪಿತು. ಎಎಸ್‌ಜಿ ರಾಜು ಅವರಿಗೆ, “ನೀವು ಏನಾದರೂ ಯೋಚಿಸಬಹುದೇ ಎಂದು ಪರಿಶೀಲಿಸಿ” ಎಂದು ನ್ಯಾ. ಕುಮಾರ್ ಹೇಳಿದ್ದಾರೆ. ವಿಳಂಬದ ಆಧಾರದ ಮೇಲೆ ಜಾಮೀನು ನೀಡಬಹುದೇ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಎಸ್‌ಜಿ ತಾವು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿದರೂ, “ಮೇಲ್ನೋಟಕ್ಕೆ ಕಾಣುವ ವಿಷಯಗಳು ಕೆಲವೊಮ್ಮೆ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು” ಎಂದಿದ್ದಾರೆ. ಇದಕ್ಕೆ ನ್ಯಾ. ಕುಮಾರ್, “ತಾವು ಎಲ್ಲವನ್ನೂ ವಿವರವಾಗಿ ಓದಿಲ್ಲವಾದರೂ, ಇದು ಜಾಮೀನಿನ ಪ್ರಕರಣವಾಗಿದ್ದು, ಆರೋಪಿಗಳು ಈಗಾಗಲೇ ಐದು ವರ್ಷಗಳ ಕಾಲಾವಧಿಯನ್ನು ಜೈಲಿನಲ್ಲಿ ಪೂರ್ಣಗೊಳಿಸಿದ್ದಾರೆ” ಎಂದು ಹೇಳಿದ್ದಾರೆ. ಇದರಿಂದ ವಿಳಂಬದ ಆಧಾರದ ಮೇಲೆ ಜಾಮೀನು ಪರಿಗಣಿಸಬಹುದು ಎಂಬ ಸೂಚನೆಯಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್ (ಖಾಲಿದ್ ಪರವಾಗಿ), ಎ.ಎಂ. ಸಿಂಘ್ವಿ (ಫಾತಿಮಾ ಪರವಾಗಿ), ಸಿದ್ಧಾರ್ಥ್ ದೇವ್ (ಇಮಾಮ್ ಪರವಾಗಿ), ಸಿದ್ಧಾರ್ಥ್ ಅಗರ್ವಾಲ್ ಮುಂತಾದವರು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.

ಸೆಪ್ಟೆಂಬರ್ 19ರಂದು, ಈ ವಿಷಯವನ್ನು ನ್ಯಾಯಮೂರ್ತಿ ಕುಮಾರ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠದ ಮುಂದೆ ಇಡಲಾಗಿತ್ತು. ಆದರೆ, ಕಪಿಲ್ ಸಿಬಲ್ ಅವರು ಈ ಹಿಂದೆ ಅವರ ಕೊಠಡಿಯಲ್ಲಿ ಸಹವರ್ತಿಯಾಗಿದ್ದರಿಂದ ಅವರು ಹಿಂದೆ ಸರಿದಿದ್ದರು. ಅದಕ್ಕೂ ಮೊದಲು, ಸೆಪ್ಟೆಂಬರ್ 12 ರಂದು ಪ್ರಕರಣವನ್ನು ಮೊದಲು ಪಟ್ಟಿ ಮಾಡಿದಾಗ, ಪೀಠವು ಫೈಲ್‌ಗಳನ್ನು ತಡವಾಗಿ ಸ್ವೀಕರಿಸಿದ್ದರಿಂದ ನ್ಯಾಯಾಲಯವು ಪ್ರಕರಣವನ್ನು ಆಲಿಸಲು ಸಾಧ್ಯವಾಗಿರಲಿಲ್ಲ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ದೆಹಲಿ ಪೊಲೀಸರ ವಿಶೇಷ ಘಟಕವು ದಾಖಲಿಸಿರುವ 2020ರ ಎಫ್‌ಐಆರ್ ಸಂಖ್ಯೆ 59 ರಲ್ಲಿ ತೀರ್ಪು ಪ್ರಕಟಿಸಿತ್ತು.

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...