Homeಮುಖಪುಟದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿಸೆಂಬರ್ 9) ಕಾಯ್ದಿರಿಸಿದೆ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ನಿರಾಕರಿಸಿದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠ ಇಂದು ಮುಕ್ತಾಯಗೊಳಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ (ಯುಎಪಿಎ) ಅಪರಾಧಗಳನ್ನು ಎಸಗಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪ್ರಕರಣದಲ್ಲಿ ಈ ಏಳು ಮಂದಿ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಬಂಧನದಲ್ಲಿದ್ದಾರೆ.

ಐದು ವರ್ಷಗಳು ಕಳೆದರೂ ಗಲಭೆಯ ಹಿಂದಿನ ಪಿತೂರಿ ಆರೋಪಕ್ಕೆ ಯಾವುದೇ ಪುರಾವೆಗಳು ದೊರೆತಿಲ್ಲ ಮತ್ತು ವಿಚಾರಣೆ ವಿಳಂಬವಾಗಿದೆ ಎಂಬ ಈ ಎರಡು ವಿಷಯಗಳನ್ನು ಮುಂದಿಟ್ಟುಕೊಂಡು ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಗುಲ್ಫಿಶಾ ಫಾತಿಮಾ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಉಮರ್ ಖಾಲಿದ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಶಾರ್ಜೀಲ್ ಇಮಾಮ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ದೇವ್ ವಾದ ಮಂಡಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪರವಾಗಿ ವಾದ ಮಂಡಿಸಿದ ವಕೀಲರು, ದೆಹಲಿ ಗಲಭೆ ಘಟನೆ ಆಕಸ್ಮಿಕ ಎಂದು ಕರೆಯುವುದಕ್ಕೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಅದು ಸಂಪೂರ್ಣ ಯೋಜಿತ, ದೇಶವ್ಯಾಪಿ ಷಡ್ಯಂತ್ರವಾಗಿತ್ತು. ಅದರ ಏಕೈಕ ಉದ್ದೇಶ ಸರ್ಕಾರವನ್ನು ಉರುಳಿಸುವುದು ಮತ್ತು ದೇಶದ ಆರ್ಥಿಕತೆಯನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸುವುದಾಗಿತ್ತು ಎಂದಿದ್ದಾರೆ.

ಈ ಷಡ್ಯಂತ್ರಕ್ಕೆ ಆರೋಪಿಗಳು ಡೆಲ್ಲಿ ಪ್ರೊಟೆಸ್ಟ್ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಮ್, ಮುಸ್ಲಿಂ ಸ್ಟೂಡೆಂಟ್ ಆರ್ಗನೈಸೇಶನ್ಸ್, ಪಿಂಜ್ರಾ ತೋಡ್ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿ ನಡೆಸಿದ ಸಂಭಾಷಣೆ ಮತ್ತು ಹಣ ವರ್ಗಾವಣೆ ಸಾಕ್ಷ್ಯ ಎಂದು ಹೇಳಿದ್ದಾರೆ. ಅಲ್ಲದೆ, ವಿಚಾರಣೆ ಇಷ್ಟೊಂದು ವರ್ಷ ತಡವಾಗಿರುವುದಕ್ಕೆ ಆರೋಪಿಗಳೇ ಕಾರಣ ಎಂದು ವಾದಿಸಿದ್ದಾರೆ.

ಆರೋಪಿಗಳು ಒಬ್ಬೊಬ್ಬರಾಗಿ ಜಾಮೀನು ಅರ್ಜಿ ಸಲ್ಲಿಸುವುದು, ದಾಖಲೆಗಳ ಕಾಪಿ ಕೇಳುವುದು, ಸಾಕ್ಷಿಗಳನ್ನು ವಿಚಾರಣೆಗೆ ಕರೆಸದಂತೆ ತಡೆಯುವುದು ಮುಂತಾದ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪಿಗಳು ಸಂಪೂರ್ಣ ಸಹಕಾರ ನೀಡಿದರೆ ಕೇವಲ ಎರಡು ವರ್ಷದೊಳಗೆ ಎಲ್ಲಾ ಸಾಕ್ಷಿಗಳನ್ನು ವಿಚಾರಣೆ ನಡೆಸಿ ಪ್ರಕರಣ ಪೂರ್ಣಗೊಳಿಸಬಹುದು ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. "ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...