Homeಮುಖಪುಟದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ - ಕೋರ್ಟ್‌ಗೆ ತಾಹಿರ್ ಹುಸೇನ್

ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

- Advertisement -
- Advertisement -

2020 ರ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿದ ಅವರ ವಾಟ್ಸಾಪ್ ಚಾಟ್‌ಗಳಲ್ಲಿ, ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಲು ಅಥವಾ ಹಿಂಸಾಚಾರದಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ಸೂಚನೆಗಳು ಹೊಂದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಶುಕ್ರವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ಪ್ರಕರಣದಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ ಉಲ್ಲೇಖಿಸಿರುವ ಚಾಟ್‌ಗಳಲ್ಲಿ “ಚಕ್ಕಾ ಜಾಮ್” ಅಥವಾ ರಸ್ತೆ ತಡೆಗಳು ಮತ್ತು ಶಾಂತಿಯುತ ಪ್ರತಿಭಟನೆಗಳನ್ನು ಮಾತ್ರ ಉಲ್ಲೇಖಿಸುತ್ತವೆಯೇ ಹೊರತು ಹಿಂಸಾಚಾರ ಅಥವಾ ಶಸ್ತ್ರಾಸ್ತ್ರಗಳ ಬಳಕೆಯನ್ನಲ್ಲ ಎಂದು ಹುಸೇನ್ ಅವರ ವಕೀಲ ರಾಜೀವ್ ಮೋಹನ್ ವಾದಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಕ್ಕಾ ಜಾಮ್ ಭಯೋತ್ಪಾದಕ ಕೃತ್ಯವಲ್ಲ… ದೆಹಲಿಯ ಪೊಲೀಸರ ಪ್ರಕಾರ ಜನರನ್ನು ಭೇಟಿಯಾಗುವುದು ಮತ್ತು ಪ್ರತಿಭಟಿಸುವುದು ಕೂಡ ಭಯೋತ್ಪಾದಕ ಚಟುವಟಿಕೆಯೇ?” ಮೋಹನ್ ನ್ಯಾಯಾಲಯಕ್ಕೆ ಕೇಳಿದ್ದಾರೆ. “ಭಾರತ ಸರ್ಕಾರ ಅಥವಾ ಅದರ ತನಿಖೆಗಳ ವಿರುದ್ಧ ನಾವು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು ಎಂದು ವಾಟ್ಸಾಪ್ ಸಂದೇಶಗಳಲ್ಲಿ ಎಲ್ಲಿಯೂ ಉಲ್ಲೇಖಿಸಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೇಯ್ ಅವರ ನ್ಯಾಯಾಲಯವು ಪ್ರಕರಣದ ಆರೋಪಗಳನ್ನು ರೂಪಿಸುವ ಕುರಿತು ವಾದಗಳನ್ನು ಆಲಿಸುತ್ತಿತ್ತು.

2020ರ ಫೆಬ್ರವರಿಯಲ್ಲಿ, ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುವವರ ವಿರುದ್ಧ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದರು. ಇದು ಹಿಂಸಾಚಾರಕ್ಕೆ ತಿರುಗಿ, ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿದ್ದರೆ. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದರ ನಂತರ ದೆಹಲಿ ಪೊಲೀಸರು ಹಿಂಸಾಚಾರದ ಹಿಂದಿನ ಸಂಚಿನ ಬಗ್ಗೆ ತನಿಖೆ ನಡೆಸಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಭಯೋತ್ಪಾದನಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ವೇಳೆ ಅವರು ತಾಹಿರ್ ಹುಸೇನ್ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಆರು ಆರೋಪಿಗಳು ಜಾಮೀನು ಪಡೆದಿದ್ದರೆ, 12 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಎಸಗಿದ ವೈಯಕ್ತಿಕ ಕೃತ್ಯಗಳಿಗೆ ಪೊಲೀಸರು ಈಗಾಗಲೇ ಎಫ್‌ಐಆರ್ ಮತ್ತು ಆರೋಪಪಟ್ಟಿ ದಾಖಲಿಸಿದ್ದಾರೆ ಎಂದು ಹುಸೇನ್ ಪರ ವಕೀಲರು ವಾದಿಸಿದ್ದಾರೆ. ಆರೋಪಿಗಳು ಸಶಸ್ತ್ರ ದಂಗೆ ಅಥವಾ ಗಲಭೆಯನ್ನು ಉತ್ತೇಜಿಸಿದ್ದಾರೆ ಎಂಬುದಕ್ಕೆ ಪುರಾವೆಗಳಿಲ್ಲದಿದ್ದರೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯನ್ನು ಪ್ರಕರಣಕ್ಕೆ ಅನ್ವಯಿಸಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...