Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...