Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...