Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...