Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...