Homeಮುಖಪುಟದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್...

ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಚಿವ ಹಾಗೂ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಇತರರ ಪಾತ್ರ ಇರುವ ಬಗ್ಗೆ ಎಫ್‌ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲು ದೆಹಲಿ ನ್ಯಾಯಾಲಯ ಮಂಗಳವಾರ (ಏ.1) ನಿರ್ದೇಶಿಸಿದೆ.

ಕಪಿಲ್ ಮಿಶ್ರಾ, ದಯಾಳ್‌ಪುರ ಪೊಲೀಸ್ ಠಾಣೆಯ ಆಗಿನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ), ಬಿಜೆಪಿ ಶಾಸಕ ಮೋಹನ್ ಸಿಂಗ್ ಬಿಶ್ತ್ ಮತ್ತು ಪಕ್ಷದ ಮಾಜಿ ಶಾಸಕ ಜಗದೀಶ್ ಪ್ರಧಾನ್ ಸೇರಿದಂತೆ ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಪುರಸ್ಕರಿಸಿದ್ದಾರೆ.

2020ರ ಫೆಬ್ರವರಿ 24 ಮತ್ತು 26ರ ನಡುವೆ ಈಶಾನ್ಯ ದೆಹಲಿಯಲ್ಲಿ ಕೋಮು ಹಿಂಸಾಚಾರ ನಡೆದಿತ್ತು. ಇದರಲ್ಲಿ 53 ಜನರು ಸಾವನ್ನಪ್ಪಿದ್ದರು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಮತ್ತು ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ಹಾನಿಯಾಗಿತ್ತು.

ಈ ವರ್ಷದ ಫೆಬ್ರವರಿಯಲ್ಲಿ, ದೆಹಲಿ ಪೊಲೀಸರು ದೂರುದಾರರ ಅರ್ಜಿಯನ್ನು ವಿರೋಧಿಸಿದ್ದರು. ಮಿಶ್ರಾ ಅವರನ್ನು ಈ ವಿಷಯದಲ್ಲಿ ಸಿಲುಕಿಸಲಾಗುತ್ತಿದೆ. 2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಅವರ ಪಾತ್ರವಿಲ್ಲ ಎಂದು ಹೇಳಿದ್ದರು.

ಗಲಭೆಯ ಹಿಂದಿನ ಪಿತೂರಿಯಲ್ಲಿ ಮಿಶ್ರಾ ಅವರ ಪಾತ್ರದ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಅವರ ವಿರುದ್ಧ ಯಾವುದೇ ದೋಷಾರೋಪಣೆ ಕಂಡುಬಂದಿಲ್ಲ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಕಪಿಲ್ ಮಿಶ್ರಾ ಮತ್ತು ಇತರರು ಈಶಾನ್ಯ ದೆಹಲಿಯ ಕರ್ದಂಪುರಿಯಲ್ಲಿ ರಸ್ತೆ ತಡೆದು ವ್ಯಾಪಾರಸ್ಥರ ತಳ್ಳುಗಾಡಿಗಳನ್ನು ನಾಶಪಡಿಸಿರುವುದನ್ನು ನೋಡಿರುವುದಾಗಿ ಅರ್ಜಿದಾರ ಇಲ್ಯಾಸ್ ಅವರು ಹೇಳಿದ್ದರು. ಈಶಾನ್ಯ ದೆಹಲಿಯ ಆಗಿನ ಪೊಲೀಸ್ ಆಯುಕ್ತರು (ಡಿಸಿಪಿ) ಮಿಶ್ರಾ ಪಕ್ಕದಲ್ಲಿ ಇತರ ಪೊಲೀಸ್ ಸಿಬ್ಬಂದಿಯೊಂದಿಗೆ ನಿಂತು ಪ್ರತಿಭಟನಾಕಾರರಿಗೆ ಪ್ರದೇಶವನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡುತ್ತಿದ್ದರು ಎಂದು ಅವರು ಹೇಳಿಕೊಂಡಿದ್ದರು.

ಬಿಜೆಪಿ ನಾಯಕರಾದ ಪ್ರಧಾನ್ ಮತ್ತು ಬಿಶ್ತ್ ಅವರೊಂದಿಗೆ ದಯಾಳ್‌ಪುರದ ಎಸ್‌ಎಚ್‌ಒ ಈಶಾನ್ಯ ದೆಹಲಿಯಾದ್ಯಂತ ಮಸೀದಿಗಳನ್ನು ಧ್ವಂಸ ಮಾಡಿದ್ದನ್ನು ತಾನು ನೋಡಿರುವುದಾಗಿ ವಿವರಿಸಿದ್ದರು.

2020ರ ಫೆಬ್ರವರಿಯಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೋಮು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನತಾ ಪ್ರಾತಿನಿಧ್ಯ ಕಾಯ್ದೆ (ಆರ್‌ಪಿಎ) ಅಡಿಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಶ್ರಾ ವಿರುದ್ಧದ ಆರೋಪದ ಕುರಿತು ವಾದಗಳನ್ನು ಆಲಿಸಲು ಪ್ರಾರಂಭಿಸುವುದಾಗಿ ಮಾರ್ಚ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿಳಿಸಿದೆ.

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....