Homeರಾಷ್ಟ್ರೀಯದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

- Advertisement -
- Advertisement -

ದೆಹಲಿಯ ಜಹಾಂಗೀರಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕೋಮು ಘರ್ಷಣೆಗೂ ಮೊದಲು ನಡೆದ ಕಾನೂನುಬಾಹಿರ ಮೆರವಣಿಗೆಯನ್ನು ತಡೆಯದೆ ಇದ್ದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಘಟನೆಯಲ್ಲಿನ ‘ಸಂಪೂರ್ಣ ವಿಫಲತೆ’ಯನ್ನು ಪೊಲೀಸ್‌ ಮುಖ್ಯಸ್ಥರು ತನಿಖೆ ನಡೆಸಬೇಕು ಎಂದಿರುವ ನ್ಯಾಯಾಲಯ ಘಟನೆಯಲ್ಲಿ ಒಳಗೊಂಡಿರುವ ಅಧಿಕಾರಿಗಳ ಹೊಣೆಗಾರಿಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಕೋಮು ಘರ್ಷಣೆಯಲ್ಲಿ ಭಾಗಿಯಾದ ಎಂಟು ಜನರ ಜಾಮೀನನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳು ಸ್ಥಳೀಯ ಕ್ರಿಮಿನಲ್‌ಗಳಾಗಿದ್ದು, ಅವರು ಬಿಡುಗಡೆಯಾದರೆ ಸಾಕ್ಷಿಗಳನ್ನು ಬೆದರಿಸಬಹುದು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭ ವಾಯುವ್ಯ ದೆಹಲಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಮೆರವಣಿಗೆ ನಡೆದಿದ್ದು ಮಾತ್ರವಲ್ಲದೆ, ಪೊಲೀಸರ ಸಮ್ಮುಖದಲ್ಲಿಯೇ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಾಗ್ವಾದ ನಡೆಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಕ್ರಮ ಮೆರವಣಿಗೆಯನ್ನು ನಿಲ್ಲಿಸಿ ಗುಂಪನ್ನು ಚದುರಿಸುವ ಬದಲು, ಪೊಲೀಸ್ ಅಧಿಕಾರಿಗಳು ದಾರಿಯಲ್ಲಿ ಅದರೊಂದಿಗೆ ಸಾಗುತ್ತಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಗಲಭೆಗೂ ಮೊದಲು ಒಟ್ಟು ಮೂರು ಮೆರವಣಿಗೆ ನಡೆದಿದ್ದು, ಅದರಲ್ಲಿ ಕೊನೆಯ ಮೆರವಣೆಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಮೆರವಣಿಗೆಯನ್ನು ಬಿಜೆಪಿ ಬೆಂಬಲಿತ ವಿಹಿಂಪ ಮತ್ತು ಬಜರಂಗದಳ ಆಯೋಜಿಸಿತ್ತು.

“ಇನ್‌ಸ್ಪೆಕ್ಟರ್ ರಾಜೀವ್ ರಂಜನ್ ನೇತೃತ್ವದ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಸ್ಥಳೀಯ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು…ಆಪಾದಿತ ಅಕ್ರಮ ಮೆರವಣಿಗೆಯ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿರುವ ವಿಷಯಗಳು ತೋರಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

“ಯಾವುದೇ ಅನುಮತಿಯಿಲ್ಲದೆ ನಡೆದ ಮೆರವಣಿಗೆಯನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರ ಸಂಪೂರ್ಣ ವೈಫಲ್ಯವನ್ನು ಇದು ಪ್ರಾಥಮಿಕವಾಗಿ ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...