Homeರಾಷ್ಟ್ರೀಯದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

- Advertisement -
- Advertisement -

ದೆಹಲಿಯ ಜಹಾಂಗೀರಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕೋಮು ಘರ್ಷಣೆಗೂ ಮೊದಲು ನಡೆದ ಕಾನೂನುಬಾಹಿರ ಮೆರವಣಿಗೆಯನ್ನು ತಡೆಯದೆ ಇದ್ದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಘಟನೆಯಲ್ಲಿನ ‘ಸಂಪೂರ್ಣ ವಿಫಲತೆ’ಯನ್ನು ಪೊಲೀಸ್‌ ಮುಖ್ಯಸ್ಥರು ತನಿಖೆ ನಡೆಸಬೇಕು ಎಂದಿರುವ ನ್ಯಾಯಾಲಯ ಘಟನೆಯಲ್ಲಿ ಒಳಗೊಂಡಿರುವ ಅಧಿಕಾರಿಗಳ ಹೊಣೆಗಾರಿಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಕೋಮು ಘರ್ಷಣೆಯಲ್ಲಿ ಭಾಗಿಯಾದ ಎಂಟು ಜನರ ಜಾಮೀನನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳು ಸ್ಥಳೀಯ ಕ್ರಿಮಿನಲ್‌ಗಳಾಗಿದ್ದು, ಅವರು ಬಿಡುಗಡೆಯಾದರೆ ಸಾಕ್ಷಿಗಳನ್ನು ಬೆದರಿಸಬಹುದು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭ ವಾಯುವ್ಯ ದೆಹಲಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಮೆರವಣಿಗೆ ನಡೆದಿದ್ದು ಮಾತ್ರವಲ್ಲದೆ, ಪೊಲೀಸರ ಸಮ್ಮುಖದಲ್ಲಿಯೇ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಾಗ್ವಾದ ನಡೆಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಕ್ರಮ ಮೆರವಣಿಗೆಯನ್ನು ನಿಲ್ಲಿಸಿ ಗುಂಪನ್ನು ಚದುರಿಸುವ ಬದಲು, ಪೊಲೀಸ್ ಅಧಿಕಾರಿಗಳು ದಾರಿಯಲ್ಲಿ ಅದರೊಂದಿಗೆ ಸಾಗುತ್ತಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಗಲಭೆಗೂ ಮೊದಲು ಒಟ್ಟು ಮೂರು ಮೆರವಣಿಗೆ ನಡೆದಿದ್ದು, ಅದರಲ್ಲಿ ಕೊನೆಯ ಮೆರವಣೆಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಮೆರವಣಿಗೆಯನ್ನು ಬಿಜೆಪಿ ಬೆಂಬಲಿತ ವಿಹಿಂಪ ಮತ್ತು ಬಜರಂಗದಳ ಆಯೋಜಿಸಿತ್ತು.

“ಇನ್‌ಸ್ಪೆಕ್ಟರ್ ರಾಜೀವ್ ರಂಜನ್ ನೇತೃತ್ವದ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಸ್ಥಳೀಯ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು…ಆಪಾದಿತ ಅಕ್ರಮ ಮೆರವಣಿಗೆಯ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿರುವ ವಿಷಯಗಳು ತೋರಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

“ಯಾವುದೇ ಅನುಮತಿಯಿಲ್ಲದೆ ನಡೆದ ಮೆರವಣಿಗೆಯನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರ ಸಂಪೂರ್ಣ ವೈಫಲ್ಯವನ್ನು ಇದು ಪ್ರಾಥಮಿಕವಾಗಿ ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...