Homeರಾಷ್ಟ್ರೀಯದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

- Advertisement -
- Advertisement -

ದೆಹಲಿಯ ಜಹಾಂಗೀರಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕೋಮು ಘರ್ಷಣೆಗೂ ಮೊದಲು ನಡೆದ ಕಾನೂನುಬಾಹಿರ ಮೆರವಣಿಗೆಯನ್ನು ತಡೆಯದೆ ಇದ್ದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಘಟನೆಯಲ್ಲಿನ ‘ಸಂಪೂರ್ಣ ವಿಫಲತೆ’ಯನ್ನು ಪೊಲೀಸ್‌ ಮುಖ್ಯಸ್ಥರು ತನಿಖೆ ನಡೆಸಬೇಕು ಎಂದಿರುವ ನ್ಯಾಯಾಲಯ ಘಟನೆಯಲ್ಲಿ ಒಳಗೊಂಡಿರುವ ಅಧಿಕಾರಿಗಳ ಹೊಣೆಗಾರಿಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಕೋಮು ಘರ್ಷಣೆಯಲ್ಲಿ ಭಾಗಿಯಾದ ಎಂಟು ಜನರ ಜಾಮೀನನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳು ಸ್ಥಳೀಯ ಕ್ರಿಮಿನಲ್‌ಗಳಾಗಿದ್ದು, ಅವರು ಬಿಡುಗಡೆಯಾದರೆ ಸಾಕ್ಷಿಗಳನ್ನು ಬೆದರಿಸಬಹುದು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭ ವಾಯುವ್ಯ ದೆಹಲಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಮೆರವಣಿಗೆ ನಡೆದಿದ್ದು ಮಾತ್ರವಲ್ಲದೆ, ಪೊಲೀಸರ ಸಮ್ಮುಖದಲ್ಲಿಯೇ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಾಗ್ವಾದ ನಡೆಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಕ್ರಮ ಮೆರವಣಿಗೆಯನ್ನು ನಿಲ್ಲಿಸಿ ಗುಂಪನ್ನು ಚದುರಿಸುವ ಬದಲು, ಪೊಲೀಸ್ ಅಧಿಕಾರಿಗಳು ದಾರಿಯಲ್ಲಿ ಅದರೊಂದಿಗೆ ಸಾಗುತ್ತಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಗಲಭೆಗೂ ಮೊದಲು ಒಟ್ಟು ಮೂರು ಮೆರವಣಿಗೆ ನಡೆದಿದ್ದು, ಅದರಲ್ಲಿ ಕೊನೆಯ ಮೆರವಣೆಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಮೆರವಣಿಗೆಯನ್ನು ಬಿಜೆಪಿ ಬೆಂಬಲಿತ ವಿಹಿಂಪ ಮತ್ತು ಬಜರಂಗದಳ ಆಯೋಜಿಸಿತ್ತು.

“ಇನ್‌ಸ್ಪೆಕ್ಟರ್ ರಾಜೀವ್ ರಂಜನ್ ನೇತೃತ್ವದ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಸ್ಥಳೀಯ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು…ಆಪಾದಿತ ಅಕ್ರಮ ಮೆರವಣಿಗೆಯ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿರುವ ವಿಷಯಗಳು ತೋರಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

“ಯಾವುದೇ ಅನುಮತಿಯಿಲ್ಲದೆ ನಡೆದ ಮೆರವಣಿಗೆಯನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರ ಸಂಪೂರ್ಣ ವೈಫಲ್ಯವನ್ನು ಇದು ಪ್ರಾಥಮಿಕವಾಗಿ ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...