Homeಮುಖಪುಟದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ದೆಹಲಿ ಗಲಭೆಯ ಕುರಿತು ನ್ಯಾಯಯುತ ತನಿಖೆ ನಡೆಸುವಂತೆ ದೆಹಲಿ ಪೊಲೀಸ್ ಕಮಿಷನರ್‌ ಎಸ್‌.ಎನ್.ಶ್ರೀವಾಸ್ತವ ಅವರಿಗೆ ದೇಶದಾದ್ಯಂತ ಇರುವ 9 ಜನ ಮಾಜಿ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಒಂಬತ್ತು ಮಾಜಿ ಐಪಿಎಸ್ ಅಧಿಕಾರಿಗಳು ‘Constitutional Conduct Group’ನ  ಭಾಗವಾಗಿದ್ದಾರೆ. ಇದರ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ದನಿಯೆತ್ತುತ್ತಾರೆ.

ಪತ್ರದಲ್ಲಿ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ನಿಸ್ಪಕ್ಷಪಾತ ಮತ್ತಯ ನ್ಯಾಯಯುತವಾದ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

“ಈ ಗಲಭೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ತನಿಖೆಗಳು ಮತ್ತು ಚಲನ್‌ಗಳು ಪಕ್ಷಪಾತಿ ಮತ್ತು ರಾಜಕೀಯ ಪ್ರೇರಿತ ಎಂಬುದು ಭಾರತೀಯ ಪೊಲೀಸರ ಇತಿಹಾಸದಲ್ಲಿ ನಿಜಕ್ಕೂ ದುಃಖದ ದಿನ ಎಂದು ನಾವು ಹೇಳಲು ಬಯಸುತ್ತೇವೆ. ಕಾನೂನಿನ ನಿಯಮ ಮತ್ತು ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ, ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾಗಿರುವವರಿಗೆ ಇದು ನೋವುಂಟು ಮಾಡುತ್ತದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ನಿಮ್ಮಲ್ಲಿರುವ ವಿಶೇಷ ಆಯುಕ್ತರೊಬ್ಬರು, ತಮ್ಮ ಸಮುದಾಯಕ್ಕೆ ಸೇರಿದ ಕೆಲವು ಗಲಭೆಕೋರರ ಬಂಧನದಿಂದ ಹಿಂದೂಗಳಿಗೆ ಅಸಮಾಧಾನ ಉಂಟಾಗುತ್ತದೆ ಎಂಬ ಕಾರಣಕ್ಕೆ, ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರುವುದರ ಬಗ್ಗೆ ನಮಗೆ ವಿಷಾದವಿದೆ. ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ. ಹಾಗಾಗಿ ಬಹುಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ನಿಜವಾದ ಅಪರಾಧಿಗಳು ವಿನಾಯಿತಿ ಪಡೆಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಲ್ಲಿ ಮಾತನಾಡಿದ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲರನ್ನೂ ನಾವು ಹೆಚ್ಚು ನೋಯಿಸುತ್ತಿದ್ದೇವೆ. ಸಂವಿಧಾನದ ಪ್ರಕಾರ, ಅವರು ತಮ್ಮ ವಾಕ್ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಿದ್ದರು. ದೃಢವಾದ ಸಾಕ್ಷ್ಯಾಧಾರಗಳನ್ನು ಅವಲಂಬಿಸದೇ ನಡೆಯುವ ತನಿಖೆಗಳು ನ್ಯಾಯಯುತ ತನಿಖೆಯ ತತ್ವಗಳನ್ನು ಉಲ್ಲಂಘಿಸುತ್ತದೆ. ಸಿಎಎ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ನಾಯಕರು ಮತ್ತು ಕಾರ್ಯಕರ್ತರನ್ನು ಒಳಗೊಳ್ಳುವಾಗ, ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಎಲ್ಲರನ್ನು ಗಾಳವಾಗಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಇಂತಹ ತನಿಖೆಯು, ಪ್ರಜಾಪ್ರಭುತ್ವ, ನ್ಯಾಯ ಮತ್ತು ಸಂವಿಧಾನದ ಮೇಲೆ ಜನರು ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಒಂದು ಕ್ರಮಬದ್ಧ ಸಮಾಜದ ಅಡಿಪಾಯವನ್ನು ಅಲ್ಲಾಡಿಸಿ, ಕಾನೂನು ಸುವ್ಯವಸ್ಥೆಯ ವಿಘಟನೆಗೆ ಕಾರಣವಾಗುವ ಅಪಾಯಕಾರಿ ಚಿಂತನೆಯಾಗಿದೆ” ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

“ಆದ್ದರಿಂದ, ಎಲ್ಲಾ ಗಲಭೆ ಪ್ರಕರಣಗಳನ್ನು ನ್ಯಾಯಯುತವಾಗಿ ಮತ್ತು ಅಪರಾಧ ತನಿಖೆಯ ಉತ್ತಮ ತತ್ವಗಳ ಆಧಾರದ ಮೇಲೆ, ಯಾವುದೇ ಪಕ್ಷಪಾತವಿಲ್ಲದೆ, ಬಲಿಪಶುಗಳಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಹಾಗೂ ಕಾನೂನಿನ ನಿಯಮವನ್ನು ಎತ್ತಿಹಿಡಿಯಲು ನಾವು ಮನಃಪೂರ್ವಕವಾಗಿ ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ಕೋರಲಾಗಿದೆ.

ಶಫಿ ಆಲಂ (ಮಾಜಿ ಮಹಾನಿರ್ದೇಶಕರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ), ಕೆ.ಸಲೀಮ್ ಅಲಿ (ಸಿಬಿಐ ಮಾಜಿ ವಿಶೇಷ ನಿರ್ದೇಶಕರು), ಮೊಹಿಂದರ್‌ಪಾಲ್ ಆಲಾಕ್ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಪಂಜಾಬ್), ಎ.ಎಸ್. ದುಲಾತ್ (ಕಾಶ್ಮೀರದ ಮಾಜಿ ಒಎಸ್‌ಡಿ, ಪ್ರಧಾನ ಮಂತ್ರಿ ಕಚೇರಿ), ಅಲೋಕ್ ಬಿ. ಜನರಲ್ ಆಫ್ ಪೊಲೀಸ್, ಸಿಕ್ಕಿಂ), ಅಮಿತಾಬ್ ಮಾಥುರ್ (ವಿಮಾನಯಾನ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಮತ್ತು ಕ್ಯಾಬಿನೆಟ್ ಸಚಿವಾಲಯದ ಮಾಜಿ ವಿಶೇಷ ಕಾರ್ಯದರ್ಶಿ), ಅವಿನಾಶ್ ಮೋಹನನೆ (ಮಾಜಿ ಪೊಲೀಸ್ ಮಹಾನಿರ್ದೇಶಕ, ಸಿಕ್ಕಿಂ), ಪಿಜಿಜೆ ನಂಬೂತಿರಿ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಗುಜರಾತ್) ಮತ್ತು ಎ.ಕೆ. ಸಮಂತಾ (ಮಾಜಿ ಪೊಲೀಸ್ ಮಹಾನಿರ್ದೇಶಕರು ಪಶ್ಚಿಮ ಬಂಗಾಳ) ಈ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಗಣ್ಯರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...