Homeಮುಖಪುಟದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ದೆಹಲಿ ಗಲಭೆಯ ಕುರಿತು ನ್ಯಾಯಯುತ ತನಿಖೆ ನಡೆಸುವಂತೆ ದೆಹಲಿ ಪೊಲೀಸ್ ಕಮಿಷನರ್‌ ಎಸ್‌.ಎನ್.ಶ್ರೀವಾಸ್ತವ ಅವರಿಗೆ ದೇಶದಾದ್ಯಂತ ಇರುವ 9 ಜನ ಮಾಜಿ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಒಂಬತ್ತು ಮಾಜಿ ಐಪಿಎಸ್ ಅಧಿಕಾರಿಗಳು ‘Constitutional Conduct Group’ನ  ಭಾಗವಾಗಿದ್ದಾರೆ. ಇದರ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ದನಿಯೆತ್ತುತ್ತಾರೆ.

ಪತ್ರದಲ್ಲಿ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ನಿಸ್ಪಕ್ಷಪಾತ ಮತ್ತಯ ನ್ಯಾಯಯುತವಾದ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

“ಈ ಗಲಭೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ತನಿಖೆಗಳು ಮತ್ತು ಚಲನ್‌ಗಳು ಪಕ್ಷಪಾತಿ ಮತ್ತು ರಾಜಕೀಯ ಪ್ರೇರಿತ ಎಂಬುದು ಭಾರತೀಯ ಪೊಲೀಸರ ಇತಿಹಾಸದಲ್ಲಿ ನಿಜಕ್ಕೂ ದುಃಖದ ದಿನ ಎಂದು ನಾವು ಹೇಳಲು ಬಯಸುತ್ತೇವೆ. ಕಾನೂನಿನ ನಿಯಮ ಮತ್ತು ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ, ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾಗಿರುವವರಿಗೆ ಇದು ನೋವುಂಟು ಮಾಡುತ್ತದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ನಿಮ್ಮಲ್ಲಿರುವ ವಿಶೇಷ ಆಯುಕ್ತರೊಬ್ಬರು, ತಮ್ಮ ಸಮುದಾಯಕ್ಕೆ ಸೇರಿದ ಕೆಲವು ಗಲಭೆಕೋರರ ಬಂಧನದಿಂದ ಹಿಂದೂಗಳಿಗೆ ಅಸಮಾಧಾನ ಉಂಟಾಗುತ್ತದೆ ಎಂಬ ಕಾರಣಕ್ಕೆ, ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರುವುದರ ಬಗ್ಗೆ ನಮಗೆ ವಿಷಾದವಿದೆ. ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ. ಹಾಗಾಗಿ ಬಹುಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ನಿಜವಾದ ಅಪರಾಧಿಗಳು ವಿನಾಯಿತಿ ಪಡೆಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಲ್ಲಿ ಮಾತನಾಡಿದ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲರನ್ನೂ ನಾವು ಹೆಚ್ಚು ನೋಯಿಸುತ್ತಿದ್ದೇವೆ. ಸಂವಿಧಾನದ ಪ್ರಕಾರ, ಅವರು ತಮ್ಮ ವಾಕ್ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಿದ್ದರು. ದೃಢವಾದ ಸಾಕ್ಷ್ಯಾಧಾರಗಳನ್ನು ಅವಲಂಬಿಸದೇ ನಡೆಯುವ ತನಿಖೆಗಳು ನ್ಯಾಯಯುತ ತನಿಖೆಯ ತತ್ವಗಳನ್ನು ಉಲ್ಲಂಘಿಸುತ್ತದೆ. ಸಿಎಎ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ನಾಯಕರು ಮತ್ತು ಕಾರ್ಯಕರ್ತರನ್ನು ಒಳಗೊಳ್ಳುವಾಗ, ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಎಲ್ಲರನ್ನು ಗಾಳವಾಗಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಇಂತಹ ತನಿಖೆಯು, ಪ್ರಜಾಪ್ರಭುತ್ವ, ನ್ಯಾಯ ಮತ್ತು ಸಂವಿಧಾನದ ಮೇಲೆ ಜನರು ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಒಂದು ಕ್ರಮಬದ್ಧ ಸಮಾಜದ ಅಡಿಪಾಯವನ್ನು ಅಲ್ಲಾಡಿಸಿ, ಕಾನೂನು ಸುವ್ಯವಸ್ಥೆಯ ವಿಘಟನೆಗೆ ಕಾರಣವಾಗುವ ಅಪಾಯಕಾರಿ ಚಿಂತನೆಯಾಗಿದೆ” ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

“ಆದ್ದರಿಂದ, ಎಲ್ಲಾ ಗಲಭೆ ಪ್ರಕರಣಗಳನ್ನು ನ್ಯಾಯಯುತವಾಗಿ ಮತ್ತು ಅಪರಾಧ ತನಿಖೆಯ ಉತ್ತಮ ತತ್ವಗಳ ಆಧಾರದ ಮೇಲೆ, ಯಾವುದೇ ಪಕ್ಷಪಾತವಿಲ್ಲದೆ, ಬಲಿಪಶುಗಳಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಹಾಗೂ ಕಾನೂನಿನ ನಿಯಮವನ್ನು ಎತ್ತಿಹಿಡಿಯಲು ನಾವು ಮನಃಪೂರ್ವಕವಾಗಿ ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ಕೋರಲಾಗಿದೆ.

ಶಫಿ ಆಲಂ (ಮಾಜಿ ಮಹಾನಿರ್ದೇಶಕರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ), ಕೆ.ಸಲೀಮ್ ಅಲಿ (ಸಿಬಿಐ ಮಾಜಿ ವಿಶೇಷ ನಿರ್ದೇಶಕರು), ಮೊಹಿಂದರ್‌ಪಾಲ್ ಆಲಾಕ್ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಪಂಜಾಬ್), ಎ.ಎಸ್. ದುಲಾತ್ (ಕಾಶ್ಮೀರದ ಮಾಜಿ ಒಎಸ್‌ಡಿ, ಪ್ರಧಾನ ಮಂತ್ರಿ ಕಚೇರಿ), ಅಲೋಕ್ ಬಿ. ಜನರಲ್ ಆಫ್ ಪೊಲೀಸ್, ಸಿಕ್ಕಿಂ), ಅಮಿತಾಬ್ ಮಾಥುರ್ (ವಿಮಾನಯಾನ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಮತ್ತು ಕ್ಯಾಬಿನೆಟ್ ಸಚಿವಾಲಯದ ಮಾಜಿ ವಿಶೇಷ ಕಾರ್ಯದರ್ಶಿ), ಅವಿನಾಶ್ ಮೋಹನನೆ (ಮಾಜಿ ಪೊಲೀಸ್ ಮಹಾನಿರ್ದೇಶಕ, ಸಿಕ್ಕಿಂ), ಪಿಜಿಜೆ ನಂಬೂತಿರಿ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಗುಜರಾತ್) ಮತ್ತು ಎ.ಕೆ. ಸಮಂತಾ (ಮಾಜಿ ಪೊಲೀಸ್ ಮಹಾನಿರ್ದೇಶಕರು ಪಶ್ಚಿಮ ಬಂಗಾಳ) ಈ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಗಣ್ಯರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...