Homeಮುಖಪುಟದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ದೆಹಲಿ ಗಲಭೆಯ ಕುರಿತು ನ್ಯಾಯಯುತ ತನಿಖೆ ನಡೆಸುವಂತೆ ದೆಹಲಿ ಪೊಲೀಸ್ ಕಮಿಷನರ್‌ ಎಸ್‌.ಎನ್.ಶ್ರೀವಾಸ್ತವ ಅವರಿಗೆ ದೇಶದಾದ್ಯಂತ ಇರುವ 9 ಜನ ಮಾಜಿ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಒಂಬತ್ತು ಮಾಜಿ ಐಪಿಎಸ್ ಅಧಿಕಾರಿಗಳು ‘Constitutional Conduct Group’ನ  ಭಾಗವಾಗಿದ್ದಾರೆ. ಇದರ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ದನಿಯೆತ್ತುತ್ತಾರೆ.

ಪತ್ರದಲ್ಲಿ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ನಿಸ್ಪಕ್ಷಪಾತ ಮತ್ತಯ ನ್ಯಾಯಯುತವಾದ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

“ಈ ಗಲಭೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ತನಿಖೆಗಳು ಮತ್ತು ಚಲನ್‌ಗಳು ಪಕ್ಷಪಾತಿ ಮತ್ತು ರಾಜಕೀಯ ಪ್ರೇರಿತ ಎಂಬುದು ಭಾರತೀಯ ಪೊಲೀಸರ ಇತಿಹಾಸದಲ್ಲಿ ನಿಜಕ್ಕೂ ದುಃಖದ ದಿನ ಎಂದು ನಾವು ಹೇಳಲು ಬಯಸುತ್ತೇವೆ. ಕಾನೂನಿನ ನಿಯಮ ಮತ್ತು ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ, ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾಗಿರುವವರಿಗೆ ಇದು ನೋವುಂಟು ಮಾಡುತ್ತದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ನಿಮ್ಮಲ್ಲಿರುವ ವಿಶೇಷ ಆಯುಕ್ತರೊಬ್ಬರು, ತಮ್ಮ ಸಮುದಾಯಕ್ಕೆ ಸೇರಿದ ಕೆಲವು ಗಲಭೆಕೋರರ ಬಂಧನದಿಂದ ಹಿಂದೂಗಳಿಗೆ ಅಸಮಾಧಾನ ಉಂಟಾಗುತ್ತದೆ ಎಂಬ ಕಾರಣಕ್ಕೆ, ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರುವುದರ ಬಗ್ಗೆ ನಮಗೆ ವಿಷಾದವಿದೆ. ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ. ಹಾಗಾಗಿ ಬಹುಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ನಿಜವಾದ ಅಪರಾಧಿಗಳು ವಿನಾಯಿತಿ ಪಡೆಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಲ್ಲಿ ಮಾತನಾಡಿದ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲರನ್ನೂ ನಾವು ಹೆಚ್ಚು ನೋಯಿಸುತ್ತಿದ್ದೇವೆ. ಸಂವಿಧಾನದ ಪ್ರಕಾರ, ಅವರು ತಮ್ಮ ವಾಕ್ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಿದ್ದರು. ದೃಢವಾದ ಸಾಕ್ಷ್ಯಾಧಾರಗಳನ್ನು ಅವಲಂಬಿಸದೇ ನಡೆಯುವ ತನಿಖೆಗಳು ನ್ಯಾಯಯುತ ತನಿಖೆಯ ತತ್ವಗಳನ್ನು ಉಲ್ಲಂಘಿಸುತ್ತದೆ. ಸಿಎಎ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ನಾಯಕರು ಮತ್ತು ಕಾರ್ಯಕರ್ತರನ್ನು ಒಳಗೊಳ್ಳುವಾಗ, ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಎಲ್ಲರನ್ನು ಗಾಳವಾಗಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಇಂತಹ ತನಿಖೆಯು, ಪ್ರಜಾಪ್ರಭುತ್ವ, ನ್ಯಾಯ ಮತ್ತು ಸಂವಿಧಾನದ ಮೇಲೆ ಜನರು ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಒಂದು ಕ್ರಮಬದ್ಧ ಸಮಾಜದ ಅಡಿಪಾಯವನ್ನು ಅಲ್ಲಾಡಿಸಿ, ಕಾನೂನು ಸುವ್ಯವಸ್ಥೆಯ ವಿಘಟನೆಗೆ ಕಾರಣವಾಗುವ ಅಪಾಯಕಾರಿ ಚಿಂತನೆಯಾಗಿದೆ” ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

“ಆದ್ದರಿಂದ, ಎಲ್ಲಾ ಗಲಭೆ ಪ್ರಕರಣಗಳನ್ನು ನ್ಯಾಯಯುತವಾಗಿ ಮತ್ತು ಅಪರಾಧ ತನಿಖೆಯ ಉತ್ತಮ ತತ್ವಗಳ ಆಧಾರದ ಮೇಲೆ, ಯಾವುದೇ ಪಕ್ಷಪಾತವಿಲ್ಲದೆ, ಬಲಿಪಶುಗಳಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಹಾಗೂ ಕಾನೂನಿನ ನಿಯಮವನ್ನು ಎತ್ತಿಹಿಡಿಯಲು ನಾವು ಮನಃಪೂರ್ವಕವಾಗಿ ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ಕೋರಲಾಗಿದೆ.

ಶಫಿ ಆಲಂ (ಮಾಜಿ ಮಹಾನಿರ್ದೇಶಕರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ), ಕೆ.ಸಲೀಮ್ ಅಲಿ (ಸಿಬಿಐ ಮಾಜಿ ವಿಶೇಷ ನಿರ್ದೇಶಕರು), ಮೊಹಿಂದರ್‌ಪಾಲ್ ಆಲಾಕ್ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಪಂಜಾಬ್), ಎ.ಎಸ್. ದುಲಾತ್ (ಕಾಶ್ಮೀರದ ಮಾಜಿ ಒಎಸ್‌ಡಿ, ಪ್ರಧಾನ ಮಂತ್ರಿ ಕಚೇರಿ), ಅಲೋಕ್ ಬಿ. ಜನರಲ್ ಆಫ್ ಪೊಲೀಸ್, ಸಿಕ್ಕಿಂ), ಅಮಿತಾಬ್ ಮಾಥುರ್ (ವಿಮಾನಯಾನ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಮತ್ತು ಕ್ಯಾಬಿನೆಟ್ ಸಚಿವಾಲಯದ ಮಾಜಿ ವಿಶೇಷ ಕಾರ್ಯದರ್ಶಿ), ಅವಿನಾಶ್ ಮೋಹನನೆ (ಮಾಜಿ ಪೊಲೀಸ್ ಮಹಾನಿರ್ದೇಶಕ, ಸಿಕ್ಕಿಂ), ಪಿಜಿಜೆ ನಂಬೂತಿರಿ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಗುಜರಾತ್) ಮತ್ತು ಎ.ಕೆ. ಸಮಂತಾ (ಮಾಜಿ ಪೊಲೀಸ್ ಮಹಾನಿರ್ದೇಶಕರು ಪಶ್ಚಿಮ ಬಂಗಾಳ) ಈ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಗಣ್ಯರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...