Homeಮುಖಪುಟಪೊಲೀಸರು ಥಳಿಸಿ, ವಂದೇ ಮಾತರಂ ಹಾಡುವಂತೆ ಒತ್ತಾಯಿಸಲ್ಪಟ್ಟ ಮುಸ್ಲಿಂ ಯುವಕನ ಸಾವು ಪ್ರಕರಣ: ಸಿಬಿಐ ತನಿಖೆಗೆ...

ಪೊಲೀಸರು ಥಳಿಸಿ, ವಂದೇ ಮಾತರಂ ಹಾಡುವಂತೆ ಒತ್ತಾಯಿಸಲ್ಪಟ್ಟ ಮುಸ್ಲಿಂ ಯುವಕನ ಸಾವು ಪ್ರಕರಣ: ಸಿಬಿಐ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ಗಲಭೆ ನಡೆದ ವೇಳೆ ವಂದೇ ಮಾತರಂ ಹಾಡಲು ಒತ್ತಾಯಿಸಲ್ಪಟ್ಟ 23 ವರ್ಷದ ಫೈಝಾನ್ ಎಂಬ ಯುವಕನ ಸಾವಿನ ತನಿಖೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಜು.23) ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಿದೆ.

ತಮ್ಮ ಮಗನ ಸಾವಿನ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಕೋರಿ 2020ರಲ್ಲಿ ಫೈಝಾನ್ ಅವರ ತಾಯಿ ಕಿಸ್ಮಾತುನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ಅಂಗೀಕರಿಸಿದ್ದಾರೆ.

“ನಾನು ಅರ್ಜಿಯನ್ನು ಅಂಗೀಕರಿಸಿದ್ದು, ಫೈಝಾನ್ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿದ್ದೇನೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವಿಡಿಯೋ ಸಂಬಂಧಿಸಿದೆ. ವಿಡಿಯೋದಲ್ಲಿ ಪೊಲೀಸರು ಫೈಝಾನ್ ಜೊತೆ ಇತರ ನಾಲ್ವರು ವ್ಯಕ್ತಿಗಳಿಗೆ ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಥಳಿಸಿದ ದೃಶ್ಯವಿತ್ತು.

ಫೈಝಾನ್ ತಾಯಿ ಪರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ ಮತ್ತು ದೇವಿಕಾ ತುಳಸಿಯಾನಿ ವಾದ ಮಂಡಿಸಿದರು. ದೆಹಲಿ ಪೊಲೀಸರ ಪರವಾಗಿ ಎಸ್‌ಪಿಪಿ ಅಮಿತ್ ಪ್ರಸಾದ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

“ದೆಹಲಿ ಪೊಲೀಸರು ನನ್ನ ಮಗನನ್ನು ಅಕ್ರಮವಾಗಿ ಬಂಧಿಸಿದ್ದರು. ಆತನ ಗಂಭೀರ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ನಿರಾಕರಿಸಿದ್ದರು. ಪರಿಣಾಮ ನನ್ನ ಮಗ ಫೆಬ್ರವರಿ 26, 2020ರಂದು ಸಾವನ್ನಪ್ಪಿದ” ಎಂದು ಫೈಝಾನ್ ತಾಯಿ ಆರೋಪಿಸಿದ್ದಾರೆ.

ಫೈಝಾನ್ ದೆಹಲಿಯ ಜ್ಯೋತಿ ನಗರ ಪೊಲೀಸ್ ಠಾಣೆಯಿಂದ ಬಿಡುಗಡೆಯಾದ 24 ಗಂಟೆಗಳ ಒಳಗೆ ನಗರದ ಜಿಟಿಬಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದ. ಇದಕ್ಕೂ ಮುನ್ನ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿದ್ದರು ಎಂದು ಆರೋಪಿಸಲಾಗಿದೆ.

“ನನ್ನ ಮಗನ ಸಾವು ‘ದ್ವೇಷದ ಅಪರಾಧ ಮತ್ತು ಕಸ್ಟಡಿಯಲ್ ಕೊಲೆ’ ಎಂದು ಫೈಝಾನ್ ತಾಯಿ ನ್ಯಾಯಾಲಯಕ್ಕೆ ತಿಳಿಸಿದ್ದು, ಫೈಝಾನ್ ಆತನ ಧರ್ಮದ ಕಾರಣಕ್ಕೆ ಪೊಲೀಸರಿಂದ ಗುರಿಯಾಗಿದ್ದ” ಎಂದು ವಕೀಲೆ ವೃಂದಾ ಗ್ರೋವರ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

2022ರಲ್ಲಿ ಹೈಕೋರ್ಟ್‌ನ ಸಮನ್ವಯ ಪೀಠವು ಪ್ರಕರಣದ ತನಿಖೆಯಲ್ಲಿ ವಿಳಂಬದ ಬಗ್ಗೆ ದೆಹಲಿ ಪೊಲೀಸರನ್ನು ಪ್ರಶ್ನಿಸಿತ್ತು ಮತ್ತು ಸಂಬಂಧಿತ ಉಪ ಪೊಲೀಸ್ ಆಯುಕ್ತರ ಸಹಿಯೊಂದಿಗೆ ವಿವರವಾದ ಸ್ಥಿತಿ ವರದಿಯನ್ನು ಕೇಳಿತ್ತು.

ಇದನ್ನೂ ಓದಿ : ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...